50 ನಿಮಿಷದಲ್ಲಿ ವಿಂದ್ಯಗಿರಿ ಬೆಟ್ಟವೇರಿದ ದೇವೇಗೌಡರು!
ಹಾಸನ, ಫೆಬ್ರವರಿ 25 : ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ನಡೆಯುತ್ತಿದೆ. 8ನೇ ದಿನವಾದ ಶನಿವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವಿಂದ್ಯಗಿರಿ ಬೆಟ್ಟವನ್ನು ಏರಿ ಬಾಹುಬಲಿಯ ದರ್ಶನ ಪಡೆದರು.
ಶನಿವಾರ ಮಧ್ಯಾಹ್ನ 12.25ರ ಸುಮಾರಿಗೆ ದೇವೇಗೌಡರು ಪತ್ನಿ ಚೆನ್ನಮ್ಮ ಜೊತೆ ಶ್ರವಣಬೆಳಗೊಳಕ್ಕೆ ಆಗಮಿಸಿದರು. ಪತ್ನಿಗೆ ಡೋಲಿಯಲ್ಲಿ ಬರುವಂತೆ ಹೇಳಿ, ಬೆಟ್ಟವೇರಲು ಆರಂಭಿಸಿದರು.
85 ವರ್ಷ ವಯಸ್ಸಿನ ಎಚ್.ಡಿ.ದೇವೇಗೌಡರು, ಬರಿಗಾಲಿನಲ್ಲಿ ಅಂಗ ರಕ್ಷಕರು ಮತ್ತು ಶಾಸಕ ಸಿ.ಎನ್.ಬಾಲಕೃಷ್ಣ ಜೊತೆ 50 ನಿಮಿಷದಲ್ಲಿ ವಿಂದ್ಯಗಿರಿ ಬೆಟ್ಟವನ್ನು ಏರಿದರು. 412 ಮೆಟ್ಟಲುಗಳನ್ನು ಏರುವಾಗ ಎರಡು ಬಾರಿ ವಿಶ್ರಾಂತಿ ಪಡೆದರು.
In Pics: ಮುಗಿಲೆತ್ತರಕ್ಕೆ ನಿಂತ ವಿರಾಗಿಗೆ ಮಹಾಮಸ್ತಕಾಭಿಷೇಕ

ಬೆಟ್ಟದಿಂದ ಕೆಳಗೆ ಇಳಿದ ಬಳಿಕ ಮಾತನಾಡಿದ ದೇವೇಗೌಡರು, 'ದೇವರ ಪ್ರೇರಣೆಯಿಂದ ಬೆಟ್ಟ ಹತ್ತಿ ಮಹಾನುಭಾವನ ದರ್ಶನ ಮಾಡಿದೆ' ಎಂದು ಹೇಳಿದರು.

'ಬಾಹುಬಲಿ ಎಲ್ಲವನ್ನು ತೊರೆದು ವಿರಾಗಿಯಾಗಿ ಬೆಟ್ಟದ ಮೇಲೆ ನಿಂತಿದ್ದಾನೆ. ಆದರೆ, ಇಂದು ಆಡಳಿತ ನಡೆಸುವವರು ಅಧಿಕಾರಕ್ಕಾಗಿ ಹಾತೊರೆಯುತ್ತಿದ್ದಾರೆ. ಅಧಿಕಾರ ಸಿಕ್ಕಿರುವುದು ಜನಸೇವೆಗಾಗಿ ಎಂದು ತಿಳಿದು ಅಹಂ ತೊರೆದು ಜನವರವಾಗಿ ನೆಡೆದುಕೊಳ್ಳಬೇಕು' ಎಂದು ಕಿವಿಮಾತು ಹೇಳಿದರು.
ಶನಿವಾರ ಮಹಾಮಸ್ತಕಾಭಿಷೇಕದ 8ನೇ ದಿನ. ಬೆಳಗ್ಗೆ 1008 ಕಲಶಗಳಿಂದ ಬಾಹುಬಲಿಗೆ ಅಭಿಷೇಕ ನಡೆಯಿತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications