ಹಾಸನಾಂಬ ದೇವಿಗೆ ಭಕ್ತಾದಿಗಳು ಬರೆದಿರುವ ಚಿತ್ರವಿಚಿತ್ರ ಪತ್ರಗಳು
ಹಾಸನ, ನವೆಂಬರ್ 10 : ಹಾಸನಾಂಬ ದೇವಿಯ ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚುವ ಮೂಲಕ ಕಳೆದ ಏಳು ದಿನಗಳಿಂದ ನಡೆದ ಹಾಸನಾಂಬ ಉತ್ಸವಕ್ಕೆ ವಿಧ್ಯುಕ್ತವಾಗಿ ತೆರೆ ಎಳೆಯಲಾಗಿದೆ.
ನವೆಂಬರ್ 1ರಂದು ಹಾಸನಾಂಬ ದೇವಿಯಗರ್ಭಗುಡಿಯ ಬಾಗಿಲು ತೆರೆಯುವುದರೊಂದಿಗೆ ಹಾಸನಾಂಬ ಉತ್ಸವ ಆರಂಭವಾಗಿತ್ತು. ಪ್ರತಿದಿನವೂ ಸಾವಿರಾರು ಭಕ್ತರು ಆಗಮಿಸುವ ಮೂಲಕ ಹಾಸನಾಂಬ ದೇವಿಯ ದರ್ಶನ ಪಡೆದು ದೇವಿಯ ಕೃಪೆಗೆ ಪಾತ್ರರಾಗಿದ್ದರು.
ಹಾಸನಾಂಬೆ, ಹಸನ್ಮುಖಿ ಮಾತೆ ಕುರಿತ ಸ್ಥಳ ಪುರಾಣ
ಹಾಸನಾಂಬ ದೇವಿಯ ದರ್ಶನದ ಕೊನೆಯ ದಿನವಾದ ಶುಕ್ರವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ.ಎಚ್.ಎಲ್. ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಪ್ರಕಾಶ್ಗೌಡ ಅವರ ಸಮ್ಮುಖದಲ್ಲಿ ಹಾಸನಾಂಬ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ದೇವಿಯ ಆಭರಣಗಳನ್ನು ಪಡೆದು ಬಳಿಕ ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಯಿತು.

ಮುಂದಿನ ವರ್ಷ ಅಕ್ಟೋಬರ್ನಲ್ಲಿ ದರ್ಶನ
ಮುಂದಿನ ವರ್ಷ ಹಾಸನಾಂಬೆ ಉತ್ಸವವು ಅಕ್ಟೋಬರ್ 17ರಿಂದ 29ರವರೆಗೆ ಜರುಗಲಿರುವುದಾಗಿ ದೇವಸ್ಥಾನದ ಅರ್ಚಕರು ಖಚಿತಪಡಿಸಿದ್ದಾರೆ. ಪಂಚಾಂಗದ ಪ್ರಕಾರ ಮುಂದಿನ ವರ್ಷ 12 ದಿನಗಳ ಕಾಲ ಹಾಸನಾಂಬ ಉತ್ಸವ ಜರುಗಲಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ನಡೆದ ಹಾಸನದ ಹಾಸನಾಂಬೆ ಉತ್ಸವದಲ್ಲಿ ಯಾವುದೇ ಗೊಂದಲಗಳಿಲ್ಲದೆ ಶಾಂತಿ ಸೌಹಾರ್ದತೆಯಿಂದ ಮುಕ್ತಾಯಗೊಂಡಿತು. ಇದಕ್ಕಾಗಿ ಹಗಲಿರುಳು ಶ್ರಮಿಸಿದ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಎಸ್ಪಿ ಪ್ರಕಾಶ್ಗೌಡ ಅವರು ಅಭಿನಂದಿಸಿದ್ದಾರೆ. ಈ ಬಾರಿ ಹಾಸನಾಂಬ ಉತ್ಸವಕ್ಕೆ 3ರಿಂದ 5 ಲಕ್ಷದಷ್ಟು ಭಕ್ತರು ಆಗಮಿಸಿ ದರ್ಶನ ಪಡೆದಿರಬಹುದೆಂದು ಹೇಳಲಾಗಿದೆ.

ದೇವಿಗೆ ಭಕ್ತರು ಬರೆದಿರುವ ವಿಶಿಷ್ಟ ಪತ್ರಗಳು
ಕಾಣಿಕೆ ಹುಂಡಿಯಲ್ಲಿ ಕಾಣಿಕೆ ಹಣದೊಂದಿಗೆ ಕೆಲ ಭಕ್ತರು ದೇವಿಗೆ ಪತ್ರ ಬರೆಯುವ ಮೂಲಕ ಬೇಡಿಕೆ ಈಡೇರಿಸುವಂತೆ ಕೇಳಿಕೊಂಡಿರುವುದು ಕಂಡು ಬಂದಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್ ಮಾಡುವಂತೆ, ಕೆಲ ಭಕ್ತರು ಆಸ್ತಿ ವಿವಾದ, ಕುಟುಂಬ ವ್ಯಾಜ್ಯ ನಿವಾರಣೆಯಾಗಲೆಂದು, ಮಕ್ಕಳನ್ನು ಕಳೆದುಕೊಂಡಿರುವ ಕೆಲ ಭಕ್ತರು ನಮಗೆ ಮಕ್ಕಳನ್ನು ಕರುಣಿಸುವಂತೆ ಬೇಡಿಕೊಂಡಿರುವ ಪತ್ರಗಳು ದೊರಕಿವೆ.

ನನ್ನ ಜನ್ಮಕ್ಕೊಂದು ಮುಕ್ತಿ ಕೊಡು!
ಭಕ್ತರೊಬ್ಬರು ಮನಮಿಡಿಯುವ ಪತ್ರವೊಂದನ್ನು ಬರೆದಿದ್ದಾರೆ. ಅದು ಹೀಗಿದೆ. 2016ರಲ್ಲಿ ಗಂಗೆಯಲ್ಲಿ ನನ್ನ ಮಗ ನಿನ್ನ ಪಾದ ಸೇರಿದ. ಆತ ಬದುಕಿದ್ದರೆ ಇವತ್ತಿಗೆ 23 ವರ್ಷವಾಗುತ್ತಿತ್ತು. ನಾನು ನಿನ್ನಲ್ಲಿ ಆಸ್ತಿ, ಅಂತಸ್ತು, ಐಶ್ವರ್ಯವನ್ನು ಕೇಳಲಿಲ್ಲ. ಅವನಿಲ್ಲದೆ ಮೂರು ವರ್ಷದಲ್ಲಿ ನರಕಯಾತನೆ ಅನುಭವಿಸಿದ್ದೇನೆ. ನನಗೆ ನನ್ನ ಮಗನನ್ನು ಯಾವ ರೂಪದಲ್ಲಾದರೂ ಕರುಣಿಸು ಇಲ್ಲವೆ? ನನಗೆ ಈ ಜನ್ಮಕ್ಕೆ ಮುಕ್ತಿ ಕೊಡು ಎಂದು ಬೇಡಿ ಪತ್ರ ಬರೆದಿದ್ದಾರೆ.

ಮಗನ ಪ್ರೀತಿ ದಕ್ಕದಂತೆ ಹರಸು..!
ಇನ್ನೊಬ್ಬ ಭಕ್ತರು ಪತ್ರ ಬರೆದು ನಮ್ಮ ಮಗ ಪ್ರೀತಿಸಿರುವ ಹುಡುಗಿಯನ್ನು ಬಿಟ್ಟು ನಾವು ನೋಡಿರುವ ಹುಡುಗಿಯನ್ನು ಮದುವೆಯಾಗುವಂತೆ ಮಗನಿಗೆ ಮನಸ್ಸು ನೀಡುವಂತೆ ದೇವಿಯಲ್ಲಿ ಮೊರೆಯಿಟ್ಟಿದ್ದಾರೆ.
ರಘು ಎಂಬ ಭಕ್ತನೊಬ್ಬ ದೇವಿಗೆ ಪತ್ರ ಬರೆದು ತನ್ನ ಹಳೆಯ ವಾಹನ ಮನೆಯ ಹತ್ತಿರವೇ ಕೆಟ್ಟು ನಿಂತಿದೆ. ಅದರ ರಿಪೇರಿ ಒಂದು ತಿಂಗಳಲ್ಲಿಯೇ ಪೂರ್ಣಗೊಂಡು ಜೀವನ ಸಾಗಿಸಲು ದಾರಿ ಮಾಡಿಕೊಡು ಎಂದು ಪತ್ರ ಬರೆದಿದ್ದಾನೆ.

ಕುಡುಕ ಗಂಡನಿಂದ ನನ್ನ ಕಾಪಾಡು
ನನ್ನ ಗಂಡ ಕುಡುಕ ಹಗಲಿರುಳು ಎನ್ನದೆ ಕುಡಿದು ತೊಂದರೆ ಕೊಡುತ್ತಿದ್ದಾನೆ. ಸಂಸಾರ ನೊಗ ದಿಕ್ಕು ತಪ್ಪಿದೆ. ಆದ್ದರಿಂದ ನನ್ನ ಗಂಡನಿಗೆ ಕುಡಿಯದಂತೆ ಮನಸ್ಸನ್ನು ಕೊಡು, ನನ್ನ ಮಕ್ಕಳಿಗೆ ಒಳ್ಳೆಯ ತಂದೆಯನ್ನಾಗಿ ಮಾಡು ಎಂದು ದೇವರಲ್ಲಿ ಭಕ್ತೆಯೊಬ್ಬರು ಮನವಿ ಮಾಡಿದ್ದಾರೆ.
ಇದೆಲ್ಲದರ ನಡುವೆ ಕಾಣಿಕೆ ಹುಂಡಿಯಲ್ಲಿ ಹಳೆಯ 500, 1,000 ರು.ಗಳ ನೋಟುಗಳು ಕೂಡ ಪತ್ತೆಯಾಗಿರುವುದು ವಿಶೇಷವಾಗಿವೆ. ಇದೆಲ್ಲ, ಅಪನಗದೀಕರಣವಾಗಿ ಎರಡು ವರ್ಷ ಕಳೆದಿರುವ ಹೊತ್ತಿನಲ್ಲಿಯೇ ದೇವರ ಹುಂಡಿಗೆ ಬಂದು ಬಿದ್ದಿರುವುದು ಇನ್ನೂ ವಿಶೇಷ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications