ಅಧಿಕಾರಕ್ಕಾಗಿ ಮತ್ತೋರ್ವ ಅಣ್ಣ ಹುಟ್ಟಿಕೊಳ್ಳುತ್ತಾನೆ : ಕೋಡಿಮಠ ಶ್ರೀ
Recommended Video

ಹಾಸನ, ಸೆಪ್ಟೆಂಬರ್ 12: 'ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದ ಈಗ ನಿಜವಾಗಿದೆ ಎಂದು ಭಕ್ತಾದಿಗಳು ನಂಬಿದ್ದಾರೆ.
ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿಮಠದ ಶ್ರೀಗಳು ತಾಳೆಗರಿ ಹಿಡಿದು ನುಡಿಯುವ ಒಗಟಿನ ಮಾತಿಗೆ ನಾನಾ ಅರ್ಥಗಳನ್ನು ಕಲ್ಪಿಸಲಾಗುತ್ತದೆ.
"ಬಿತ್ತಿದ ಬೆಳಸು ಪರರು ಕೊಯ್ದಾರು" ಎಂದು ಶ್ರೀಗಳು ಹೇಳಿದ್ದರು. ಅದರಂತೆ, ಬಿತ್ತಿದ ಬೀಜ, ಬೆಳೆದು ಬಂದ ಪೈರು ಇದು ಮುಂದಿನ ಅಸೆಂಬ್ಲಿ ಚುನಾವಣೆಯ ಭವಿಷ್ಯ ಎಂದು ಶ್ರೀಗಳು ಹೇಳಿದ್ದರು. ಇದರಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಬೆಳೆದ ಬೆಳೆಯನ್ನು ಪರರು(ಜೆಡಿಎಸ್) ಕೊಯ್ದುಕೊಂಡಿದ್ದಾರೆ ಎಂದು ಅರ್ಥೈಸಲಾಗಿತ್ತು.
ಜುಲೈ 27ರ ಚಂದ್ರಗ್ರಹಣ ನಂತರ ಆಗಸ್ಟ್ 11ರ ವೇಳೆಗೆ ಸಂಭವಿಸಿದ ಸೂರ್ಯಗ್ರಹಣದ ಪರಿಣಾಮದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಲಿದ್ದು, ಪ್ರಾಕೃತಿಕ ಸಂಪನ್ಮೂಲ ನಾಶ, ಭೂಕಂಪ, ಅತಿವೃಷ್ಟಿಯಾಗಲಿದೆ. ಈ ಬಾರಿ ವಿಶೇಷವಾಗಿ ಸೂರ್ಯ ಮತ್ತು ಚಂದ್ರ ಗ್ರಹಣಗಳು ಒಟ್ಟಿಗೆ ಬಂದಿವೆ. ವಿಶೇಷವಾಗಿ ಬರುವ ದಿನಗಳು ಕಷ್ಟ ತರಲಿವೆ ಎಂದು ಅರ್ಥೈಸಲಾಗಿತ್ತು. ಅಂದು ಸ್ವಾಮೀಜಿಗಳು ನೀಡಿದ್ದ ಒಗಟಿನ ಮಾತೇನು? ಅದನ್ನು ಏನೆಂದು ಅರ್ಥೈಸಲಾಗಿತ್ತು? ತಿಳಿಯಲು ಮುಂದೆ ಓದಿ...

ಏನೆಂದು ಭವಿಷ್ಯ ನುಡಿದಿದ್ದರು
'ಭ್ರಾತೃ ಬೆಂಕಿ ಹಿಡಿದಾನು...' ಕೋಡಿಮಠಶ್ರೀಗಳ ಭವಿಷ್ಯ ನಿಜವಾಯ್ತೆ!
"ಅರಸನ ಆಯಸ್ಸು ಉಸಿರಲ್ಲಿ ನಿಂತೀತು, ಪರಸಕ್ಕೆ ಭಂಗ, ಪ್ರಸಂಗಕ್ಕೆ ಹಾನಿ, ಭ್ರಾತೃ ಬೆಂಕಿ ಹಿಡಿದಾನು...'
ಭ್ರಾತೃ ಬೆಂಕಿ ಹಿಡಿಯುತ್ತಾನೆ ಎಂಬುದಕ್ಕೆ ಎಚ್.ಡಿ.ಕುಮಾರಸ್ವಾಮಿಯವರ ಸಹೋದರ ರೇವಣ್ಣ ಬಂಡಾಯ ಏಳುತ್ತಾರೆ ಎಂದೂ ಕೆಲವರು ವಿಶ್ಲೇಷಿಸಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ಸಂಕಷ್ಟದಲ್ಲಿ ಸಿಲುಕಿದರೆ ಸೋದರನಾಗಿ ಬೆಳಕು ತೋರಿಸಿ ರಕ್ಷಿಸುತ್ತಾರೆ ಎಂಬ ಅರ್ಥವನ್ನು ಹೇಳಿದ್ದರ್.
ಆದರೆ, ಇದು ಕುಮಾರಸ್ವಾಮಿ-ರೇವಣ್ಣ ಅವರ ಬದಲಿಗೆ ಜಾರಕಿಹೊಳಿ ಸೋದರರ ಬಗ್ಗೆ ನುಡಿದಿದ್ದು ಎನ್ನಲಾಗಿದೆ.

ನಂಬಿದವರಿಂದ ವಿಶ್ವಾಸ ದ್ರೋಹ
ಬಂಧು-ಮಿತ್ರರಲ್ಲಿ ವಿರಸ, ಸಾಮಾಜಿಕವಾಗಿ ಇವರಿಗಿಂತ ಕೆಳ ಸ್ಥಾನದಲ್ಲಿ ಇರುವವರಿಂದ ಅವಮಾನ, ಅನಾರೋಗ್ಯ ಸಮಸ್ಯೆ, ನಂಬಿದವರಿಂದಲೇ ವಿಶ್ವಾಸ ದ್ರೋಹ ಈ ಎಲ್ಲವೂ ಕಾಣುತ್ತಿದೆ. ಅದಕ್ಕೆ ಕಾರಣ ಆರನೇ ಮನೆಗೆ ಪ್ರವೇಶಿಸುವ ಗುರು ಹಾಗೂ ಚಂದ್ರನಿಗೆ ಏಳನೇ ಸ್ಥಾನ ಹಾಗೂ ಲಗ್ನಕ್ಕೆ ಎಂಟನೇ ಸ್ಥಾನದ ಶನಿಯ ಪ್ರಭಾವ. ಜತೆಗೆ ವಿಪತ್ ತಾರೆಯ ನಕ್ಷತ್ರದಲ್ಲಿ ನಡೆಯುತ್ತಿರುವ ಬುಧ ದಶೆ ಹಾಗೂ ರಾಹು ಭುಕ್ತಿಯ ಪ್ರಭಾವದಿಂದ ಇಷ್ಟೆಲ್ಲ ಅನುಭವಿಸಬೇಕಾಗುತ್ತದೆ. ಇನ್ನು ಇವರು ಒತ್ತಡಗಳಿಂದ ಸರಕಾರ ವಿಸರ್ಜಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ತನಗೆ ಲಭಿಸದಿದ್ದರೆ ಇನ್ನೊಬ್ಬರಿಗೂ ಸಿಗಬಾರದು ಎಂಬ ಕಾರಣಕ್ಕೆ ಹಾಗೆ ಮಾಡುವ ಸಾಧ್ಯತೆ ಇದೆ. ಬಾಧಕಾಧಿಪತಿ ಶನಿಯು ರವಿಯ ಜತೆ ಇರುವುದು ಇದಕ್ಕೆ ಕಾರಣ ಎಂದು ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಅವರು ಅಭಿಪ್ರಾಯಪಟ್ಟಿದ್ದರು. ಪೂರ್ಣ ಪಾಠ ಇಲ್ಲಿ ಓದಿ

ರೇವಣ್ಣ ಅವರಿಗೆ ಅಕ್ಟೋಬರ್ ನಂತರ ಗುರು ಬಲ
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿರುವುದು ಐದನೇ ಮನೆಯಲ್ಲಿ ಗುರು ಇರುವಾಗಲೇ. ಅಕ್ಟೋಬರ್ ನಂತರ ಕುಮಾರಸ್ವಾಮಿ ಅವರಿಗೆ ಗುರು ಆರನೇ ಮನೆಗೆ ಹೋಗುತ್ತದೆ. ಆಗ ಅವರಿಗೆ ಆರೋಗ್ಯ ಬಾಧೆ ಹಾಗೂ ಅಧಿಕಾರ ನಾಶದ ಸನ್ನಿವೇಶಗಳು ಕಾಣಿಸಿಕೊಳ್ಳುತ್ತದೆ. ಅಂಥ ಸ್ಥಿತಿಯಲ್ಲಿ ರೇವಣ್ಣ ಅವರಿಗೆ ಗುರು ಬಲ ಬರುವುದರಿಂದ ಹೆಚ್ಚಿನ ಅಧಿಕಾರ ಪ್ರಾಪ್ತಿ ಯೋಗ ಇದೆ. ಗುರು ಬಲ ಬಂದಾಗ ರೇವಣ್ಣ ಅವರಿಗೆ ಹೇಗೆ ಅಧಿಕಾರ ಸಿಗಬಹುದು ಎಂಬ ವಿಶ್ಲೇಷಣೆ ಮಾಡಿದಾಗ, ಈ ಹಿಂದೆ ಕುಮಾರಸ್ವಾಮಿ ಅವರು ಹೇಗೆ ಕಾಂಗ್ರೆಸ್ ನಿಂದ ಹೊರಬಂದು ಬಿಜೆಪಿ ಜತೆ ಸಖ್ಯ ಬೆಳೆಸಿ, ಹೇಗೆ ಮುಖ್ಯಮಂತ್ರಿ ಆದರೋ ಅದೇ ಮಾದರಿಯಲ್ಲಿ ರೇವಣ್ಣ ಅವರು ಬಿಜೆಪಿ ಜತೆಗೆ ಕೈ ಜೋಡಿಸುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದು ಪಂಡಿತ್ ವಿಠಲ್ ಭಟ್ ಅವರು ವಿಶ್ಲೇಷಿಸಿದ್ದಾರೆ.

ಸಮ್ಮಿಶ್ರ, ಮೈತ್ರಿ ಸರ್ಕಾರಗಳ ಬಗ್ಗೆ ಭವಿಷ್ಯ
ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಸಾಧ್ಯತೆ ಬಗ್ಗೆ ಹೇಳಿದ್ದ ಶ್ರೀಗಳು, ಈ ಹಿಂದೆ ಗುಜರಾತ್ ಹಾಗೂ ಉತ್ತರಪ್ರದೇಶ ಚುನಾವಣೆ ಬಗ್ಗೆ ಕೂಡಾ ಇದೇ ರೀತಿ ವ್ಯಾಖ್ಯಾನ ನೀಡಿದ್ದರು.
ಇದಾದ ನಂತರ ಈ ವರ್ಷದ ಆದಿಯಲ್ಲಿ, 'ಕಷ್ಟಪಟ್ಟು ದುಡಿಯುವವರು ಒಬ್ಬರು, ಅದರ ಲಾಭವನ್ನು ತೆಗೆದುಕೊಳ್ಳುವವರು ಇನ್ನೊಬ್ಬರು' ಎಂದು ಉತ್ತರಪ್ರದೇಶ ಮತ್ತು ಗುಜರಾತ್ ಚುನಾವಣೆಯನ್ನು ಉಲ್ಲೇಖಿಸಿ ಶ್ರೀಗಳು ಹೇಳಿದ್ದರು. ಇವಿಎಂ ಯಂತ್ರಗಳು ದೋಷಪೂರಿತ ಎನ್ನುವುದು ನನ್ನ ಮಾತಿನ ಉದ್ದೇಶ ಎಂದು ಶ್ರೀಗಳು ಅದಾದ ನಂತರ ಹೇಳಿದ್ದರು. ಎರಡೂ ರಾಜ್ಯಗಳಲ್ಲಿ ಸೋತ ನಂತರ, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಇವಿಎಂ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದನ್ನು ಸ್ಮರಿಸಿಕೊಳ್ಳಬಹುದಾಗಿದೆ.

ಯಾರು ಆ ಹೊಸ ಸೋದರ
ಹಾಸನದ ಮಾಡಾಳು ಗೌರಮ್ಮನ ಪ್ರತಿಷ್ಠಾಪನೆ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ಪ್ರಕೃತಿ ವಿಕೋಪದಿಂದ ದೊಡ್ಡ ದೊಡ್ಡ ನಗರಗಳು ಹಾನಿಗೊಳ್ಳಲಿದೆ. ಯಾರು ಭಕ್ತಿಯಿಂದ ನಡೆದುಕೊಳ್ಳುತ್ತಾರೋ ಅಂತವರಿಗೆ ಒಳ್ಳೆಯದೂ ಆಗುತ್ತದೆ ಎಂದರು. ನವೆಂಬರ್ವರೆಗೆ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿರುತ್ತದೆ. ಬೆಳಗಾವಿ ಸಹೋದರರಂತೆ ಅಧಿಕಾರಕ್ಕಾಗಿ ಮತ್ತೋರ್ವ ಅಣ್ಣ ಹುಟ್ಟಿಕೊಳ್ಳುತ್ತಾನೆ ನೋಡುತ್ತಿರಿ ಎಂದು ಹೇಳಿದ್ದಾರೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications