ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾಸನ: ಮಂತ್ರಿ ರೇವಣ್ಣ ಪತ್ನಿ, ಮಾಜಿ ಮಂತ್ರಿ ಎ.ಮಂಜು ಮಗನ ನಡುವೆ ಜಟಾಪಟಿ

|
Google Oneindia Kannada News

Recommended Video

ಕಾಂಗ್ರೆಸ್-ಜೆಡಿಎಸ್ ದೋಸ್ತಿ ಬೆಂಗಳೂರಿನಲ್ಲಿದ್ರೆ ಹಾಸನದಲ್ಲಿ ದುಶ್ಮನ್ | Oneindia Kannada

ಹಾಸನ, ಸೆಪ್ಟೆಂಬರ್ 28: ಬೆಂಗಳೂರಲ್ಲಿ ಇಂದು ಜೆಡಿಎಸ್-ಕಾಂಗ್ರೆಸ್‌ ಪಕ್ಷಗಳು ಭರ್ಜರಿ ದೋಸ್ತಿ ತೋರಿಸಿ ಬಿಬಿಎಂಪಿ ಮೇಯರ್ ಚುನಾವಣೆ ಗೆದ್ದುಕೊಂಡಿದೆ ಆದರೆ ಅದೇ ಹಾಸನದಲ್ಲಿ ಎರಡೂ ಪಕ್ಷಗಳು ಪರಸ್ಪರ ಹಾವು-ಮುಂಗುಸಿಯಂತೆ ಕಿತ್ತಾಡಿವೆ.

ಇಂದು ಹಾಸನದ ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷದ ಸದಸ್ಯರು ಪರಸ್ಪರ ತಾರಕ ಸ್ವರದಲ್ಲಿ ಕಚ್ಚಾಡಿಕೊಂಡಿದ್ದಾರೆ. ಅದೂ, ರಾಜ್ಯ ರಾಜಕಾರಣದಲ್ಲಿ ಛಾಪು ಮೂಡಿಸಿರುವ ರಾಜಕಾರಣಿಗಳ ಕುಟುಂಬದವರೇ ಹಾಸನದಲ್ಲಿ ಪರಸ್ಪರ ಕಚ್ಚಾಡಿಕೊಂಡಿದ್ದಾರೆ.

ಹಾಸನ ಅಥವಾ ಮಂಡ್ಯ ಕಾಂಗ್ರೆಸ್‌ಗೆ ಬಿಟ್ಟುಕೊಡಿ: ಎ. ಮಂಜು ಪಟ್ಟುಹಾಸನ ಅಥವಾ ಮಂಡ್ಯ ಕಾಂಗ್ರೆಸ್‌ಗೆ ಬಿಟ್ಟುಕೊಡಿ: ಎ. ಮಂಜು ಪಟ್ಟು

ಲೋಕೋಪಯೋಗಿ ಸಚಿವ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಹಾಗೂ ಮಾಜಿ ಸಚಿವ ಎ.ಮಂಜು ಅವರ ಪುತ್ರ ಮಂಥರ್‌ ಗೌಡ ಅವರುಗಳು ಹಾಸನ ಜಿಲ್ಲಾ ಪಂಚಾಯಿತಿಯ ಸ್ಥಾಯಿ ಸಮಿತಿ ಅಧ್ಯಕ್ಷ ಆಯ್ಕೆ ವೇಳೆ ಪರಸ್ಪರ ವಾಗ್ವಾದ ನಡೆಸಿದ್ದಾರೆ.

Disputation between JDS-Congress members in Hassan

ಲಕ್ಷ್ಮಿ ಹೆಬ್ಬಾಳ್ಕರ್‌ಗೆ 30 ಕೋಟಿ ಹಣ ಮತ್ತು ಸಚಿವ ಸ್ಥಾನದ ಆಮೀಷಲಕ್ಷ್ಮಿ ಹೆಬ್ಬಾಳ್ಕರ್‌ಗೆ 30 ಕೋಟಿ ಹಣ ಮತ್ತು ಸಚಿವ ಸ್ಥಾನದ ಆಮೀಷ

ಭವಾನಿ ರೇವಣ್ಣ ಅವರು ಹಾಗೂ ಎ.ಮಂಜು ಅವರ ಪುತ್ರ ಪರಸ್ಪರ ತೀವ್ರ ವಾಗ್ದಾಳಿ ನಡೆಸಿಕೊಂಡಿದ್ದಾರೆ. ಮಂಥರ್‌ ಗೌಡ ಬೆಂಬಲಕ್ಕೆ ಹಲವು ಕಾಂಗ್ರೆಸ್ ಸದಸ್ಯರೂ ಬಂದಿದ್ದು, ಜೆಡಿಎಸ್‌ ಸದಸ್ಯರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಕುಮಾರಸ್ವಾಮಿ ಸಂಪುಟ ಸೇರುವ ಕಾಂಗ್ರೆಸ್ ಶಾಸಕರ ಪಟ್ಟಿಕುಮಾರಸ್ವಾಮಿ ಸಂಪುಟ ಸೇರುವ ಕಾಂಗ್ರೆಸ್ ಶಾಸಕರ ಪಟ್ಟಿ

ಬೇರೆಲ್ಲಾ ಕಡೆ ಜೆಡಿಎಸ್-ಕಾಂಗ್ರೆಸ್ ನಡುವೆ ಸಮನ್ವಯ ಸಾಧ್ಯವಾಗುತ್ತಿದೆಯಾದರೂ ಹಾಸನ ಜಿಲ್ಲೆಯಲ್ಲಿ ಇಬ್ಬರ ನಡುವಿನ ಸಮರ ಮುಂದುವರೆದಿದೆ. ಮೊನ್ನೆಯಷ್ಟೆ ಮಾಜಿ ಸಚಿವ ಎ.ಮಂಜು ಅವರು ರೇವಣ್ಣ ಅವರ ಮೇಲೆ ಭೂ ಕಬಳಿಕೆ ಆರೋಪ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
In Hassan ZP meeting disputation between JDS-Congress members. Minister Revanna's wife and Former minister A Manju's son involve in verble fight in the ZP meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X