ದೇವೇಗೌಡರ ಕಲ್ಲಡ್ಕ ಪಾದಯಾತ್ರೆಗೆ ಜಿಲ್ಲಾಡಳಿತ ಬ್ರೇಕ್, ಗೌಡರ ಅಸಮಾಧಾನ
ಹಾಸನ, ಜುಲೈ 14: ಗಲಭೆ ಪೀಡಿತ ಮಂಗಳೂರಿನಲ್ಲಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ ದೇವೇಗೌಡರು ನಡೆಸಲುದ್ದೇಶಿಸಿದ್ದ ಪಾದಯಾತ್ರೆಗೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಶಾಂತಿಯುತ ಉದ್ದೇಶಕ್ಕೆ ನಡೆಸಲು ಹೊರಟಿದ್ದ ಪಾದಯಾತ್ರೆಗೆ ಅನುಮತಿ ನಿರಾಕರಿಸಿದ್ದಕ್ಕೆ ದೇವೇಗೌಡರು ಅಸಮಧಾನ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡದ ಮಂಗಳೂರಿನಿಂದ ಕಲ್ಲಡ್ಕದವರೆಗೆ ಇದೇ ಜುಲೈ 15ರಂದು ಪಾದಯಾತ್ರೆ ನಡೆಸಲು ಎಚ್.ಡಿ.ದೇವೇಗೌಡರು ಉದ್ದೇಶಿಸಿದ್ದರು. ಆದರೆ ಇದಕ್ಕೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ.

ಅನುಮತಿ ನಿರಾಕರಿಸಿದ ಬೆನ್ನಿಗೆ ಗುರುವಾರ ಹಾಸನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದೇವೇಗೌರು ಜಿಲ್ಲಾಡಳಿತದ ಕ್ರಮಕ್ಕೆ ಅಸಮಧಾನ ವ್ಯಕ್ತಪಡಿಸಿದ್ದಾರೆ. "ಕಾನೂನು ಮತ್ತು ಸುವ್ಯವಸ್ಥೆ ನೆಪದಲ್ಲಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿರುವುದರಿಂದ ಬೇಸರವಾಗಿದೆ. ಇನ್ನೆರಡು ದಿನ ಕಾದು ನೋಡಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು," ಎಂದು ಹೇಳಿದ್ದಾರೆ.
"ಯಾವುದೇ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡುತ್ತಿಲ್ಲ. ಪಾದಯಾತ್ರೆಯಲ್ಲಿ ಯಾವುದೇ ಪಕ್ಷದ ಬ್ಯಾನರ್, ಪೋಸ್ಟರ್ ಹಾಕಬಾರದು ಎಂದು ಸೂಚನೆ ನೀಡಲಾಗಿತ್ತು. ವಿವಿಧ ಧರ್ಮಗಳ ಗುರುಗಳು, ಬುದ್ಧಿಜೀವಿಗಳು, ಸ್ವಾತಂತ್ರ್ಯ ಹೋರಾಟಗಾರರು, ಎಲ್ಲ ಪಕ್ಷಗಳ ನಾಯಕರಿಗೆ ಈ ಪಾದಯಾತ್ರೆಯಲ್ಲಿ ಆಹ್ವಾನ ನೀಡಲಾಗಿತ್ತು," ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಇನ್ನು ವಿವಿಧ 'ಧರ್ಮಗಳ ಧರ್ಮಗುರುಗಳ ಜತೆ ಕೋಮುಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಾಮರಸ್ಯ ಮೂಡಿಸಲು ನಾವು ಸಿದ್ಧರಿದ್ದೇವೆ' ಎಂದು ಮುರುಘಾಮಠದ ಶಿವಮೂರ್ತಿ ಶರಣರು ಹೇಳಿದ್ದಾರೆ. ಈ ಕುರಿತು ಎಲ್ಲಾ ಸ್ವಾಮೀಜಿಗಳ ಜತೆ ಚರ್ಚೆ ಜಾರಿಯಲ್ಲಿದೆ ಎಂದೂ ಅವರು ಮಾಹಿತಿ ನೀಡಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications