ಚಿತ್ರಗಳು : ಎತ್ತಿನಹೊಳೆ ಯೋಜನೆ ಕಾಮಗಾರಿ ಪರಿಶೀಲಿಸಿದ ಡಿಕೆಶಿ
Recommended Video

ಹಾಸನ, ಜುಲೈ 09 : 'ಬಯಲು ಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡವ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಸತತವಾಗಿ ಸುರಿಯುತ್ತಿರುವ ಮಳೆ ಅಡ್ಡಿಯಾಗಿದೆ' ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ಸಚಿವ ಡಿ.ಕೆ.ಶಿವಕುಮಾರ್ ಭಾನುವಾರ ಸಕಲೇಶಪುರಕ್ಕೆ ಭೇಟಿ ನೀಡಿದ್ದರು. ಎತ್ತಿನಹೊಳೆ ಯೋಜನೆಯ ವಿವಿಧ ಕಾಮಗಾರಿಗಳು ನಡೆಯುತ್ತಿರುವ ಸ್ಥಳವನ್ನು ಪರಿಶೀಲಿಸಿದರು. 'ಯೋಜನೆ ಬಗ್ಗೆ ಅಧ್ಯಯನ ನಡೆಸಿದ್ದೇನೆ. ಯಾವುದೇ ಸಮಸ್ಯೆ ಎದುರಾದರೂ ಯೋಜನೆಯನ್ನು ಪೂರ್ಣಗೊಳಿಸಲಾಗುತ್ತದೆ' ಎಂದರು.
'ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 29 ತಾಲೂಕಿನ ಸುಮಾರು 68 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಸುವ ಎತ್ತಿನಹೊಳೆ ಯೋಜನೆ ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾಗಿದೆ' ಎಂದು ತಿಳಿಸಿದರು.
24.01 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳುವ ಯೋಜನೆ ಇದಾಗಿದೆ. 2014ರ ಫೆ.17ರಂದು ಎತ್ತಿನಹೊಳೆ ಯೋಜನೆಗೆ ಕರ್ನಾಟಕ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಕರಾವಳಿ ಭಾಗದ ಜನರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ನಮ್ಮ ಜವಾಬ್ದಾರಿ
ಯೋಜನೆಯ ಕಾಮಗಾರಿ ವೀಕ್ಷಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು 'ಎತ್ತಿನಹೊಳೆ ಯೋಜನೆಗೆ ಭೂಮಿ ನೀಡಿದ ರೈತರಿಗೆ ಸೂಕ್ತ ಪರಿಹಾರ ನೀಡುವುದು ಸರ್ಕಾರದ ಜವಾಬ್ದಾರಿ. ಆ ವಿಷಯದಲ್ಲಿ ಹಿಂದೆ ಸರಿಯುವುದಿಲ್ಲ' ಎಂದು ಭರವಸೆ ನೀಡಿದರು.
'ಅಧಿಕಾರಿಗಳ ಪುಸ್ತಕ ಹಿಡಿದುಕೊಂಡು ಏನು ಹೇಳಿದರೂ ನನಗೆ ಕಣ್ಣಾರೆ ನೋಡಿದಾಗ ಮಾತ್ರ ಸಮಾಧಾ. ಆದ್ದರಿಂದ, ಸ್ಥಳಕ್ಕೆ ಬಂದೆ. ಭೂ ಸ್ವಾಧೀನ ಸೇರಿದಂತೆ ಏನೆಲ್ಲಾ ಸಮಸ್ಯೆಗಳು ಇವೆ. ಏನೆಲ್ಲಾ ಸಹಾಯ ಬೇಕು ಎಂಬ ಬಗ್ಗೆ ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಚರ್ಚಿಸುವೆ' ಎಂದರು.

ಜನರು ಯೋಜನೆಗಾಗಿ ಕಾದು ಕುಳಿತಿದ್ದಾರೆ
'ಈ ಯೋಜನೆಗಾಗಿ ರಾಜ್ಯದ ಜನರು ಕಾದು ಕುಳಿತಿದ್ದಾರೆ. ಅದರಲ್ಲೂ ಚಿಕ್ಕಬಳ್ಳಾಪುರ, ಕೋಲಾರ ಭಾಗದ ಜನರಿಗೆ ಯೋಜನೆಯಿಂದ ಕುಡಿಯುವ ನೀರು ಸಿಗಲಿದೆ' ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
'ಎತ್ತಿನಹೊಳೆ ಯೋಜನೆ ಭಾಗದಲ್ಲಿ ಆರು ತಿಂಗಳು ಮಳೆಯಾಗುತ್ತದೆ. ಆ ಸಂದರ್ಭದಲ್ಲಿ ಕಾಮಗಾರಿ ನಡೆಸಲು ಕಷ್ಟವಾಗುತ್ತದೆ. ಏನೇ ಸವಾಲುಗಳು ಬಂದರೂ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲಾಗುತ್ತದೆ' ಎಂದು ಸಚಿವರು ತಿಳಿಸಿದರು.

ಎತ್ತಿನ ಹೊಳೆ ಯೋಜನೆ
ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬಯಲು ಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಇದಾಗಿದೆ. ಎತ್ತಿನಹೊಳೆ 1ನೇ ಹಂತದ ಯೋಜನೆಗೆ 12912.36 ಕೋಟಿ ಪರಿಷ್ಕೃತ ಯೋಜನಾ ವರದಿಗೆ ಕರ್ನಾಟಕ ಸರ್ಕಾರ 2014ರ ಫೆ.14ರಂದು ಒಪ್ಪಿಗೆ ನೀಡಿದೆ.
ಯೋಜನೆಯಿಂದ 7 ಜಿಲ್ಲೆಯ 29 ತಾಲೂಕಿನ 6,557 ಗ್ರಾಮಗಳ 68.35 ಲಕ್ಷ ಜನರಿಗೆ ಪ್ರಯೋಜನ ಸಿಗಲಿದೆ. ಒಟ್ಟು 24.01 ಟಿಎಂಸಿ ಅಡಿ ನೀರು ಲಭ್ಯವಾಗಲಿದೆ.

ವಾರ್ಷಿಕ 24 ಟಿಎಂಸಿ ನೀರು
ಪ್ರತಿ ವರ್ಷ ಜೂನ್ 15 ರಿಂದ ಅಕ್ಟೋಬರ್ 31ರ ತನಕ 135 ದಿನಗಳು ಮಾತ್ರ ಈ ಯೋಜನೆಯಿಂದ ನೀರು ಎತ್ತಲಾಗುತ್ತದೆ. 7 ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ 15.03 ಟಿಎಂಸಿ ನೀರಿನ ಅಗತ್ಯವಿದೆ. 527 ಕೆರೆಗಳನ್ನು ತುಂಬಿಸಲು 8.98 ಅಡಿ ಟಿಎಂಸಿ ಸೇರಿದಂತೆ 24.01 ಟಿಎಂಸಿ ನೀರು ಬೇಕಾಗುತ್ತದೆ.
ಯೋಜನೆ ಸಂಪೂರ್ಣಗೊಂಡ ಬಳಿಕ ಹಾಸನ ಜಿಲ್ಲೆಯ 34 ಕೆರೆ, ತುಮಕೂರಿನ 138 ಕೆರೆ, ಚಿಕ್ಕಬಳ್ಳಾಪುರದ 196 ಕೆರೆ, ಬೆಂಗಳೂರು ಗ್ರಾಮಾಂತರದ 46 ಕೆರೆಯನ್ನು ತುಂಬಿಸಲಾಗುತ್ತದೆ.

ಕರಾವಳಿ ಜನರ ವಿರೋಧ
ಎತ್ತಿನಹೊಳೆ ಯೋಜನೆಗೆ ಕರಾವಳಿ ಭಾಗದ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನೇತ್ರಾವತಿ ನದಿಯನ್ನು ತಿರುಗಿಸಲಾಗುತ್ತದೆ ಎಂಬುದು ವಿರೋಧಕ್ಕೆ ಕಾರಣವಾಗಿದೆ. ಸರ್ಕಾರ ಈ ಕುರಿತು ಹಲವು ಬಾರಿ ಸ್ಪಷ್ಟನೆಯನ್ನು ನೀಡಿದೆ. ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಮುಂದೆಯೂ ಯೋಜನೆಗೆ ಅವಕಾಶ ನೀಡಬಾರದು ಎಂದು ಅರ್ಜಿ ಹಾಕಲಾಗಿತ್ತು.
ತೀವ್ರ ಪ್ರತಿಭಟನೆ, ಬಂದ್, ಧಿಕ್ಕಾರ, ಬಂಧನ ಮುಂತಾದ ಗದ್ದಲದ ನಡುವೆಯೇ 2014ರ ಮಾರ್ಚ್ 3ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರದಲ್ಲಿ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಮೊದಲ ಹಂತದ ಯೋಜನೆ ಇನ್ನೂ ಪೂರ್ಣಗೊಂಡಿಲ್ಲ.
-
Horoscope March 6: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಒಳಿತು, ಪ್ರೇಮಿಗಳಿಗೆ ಕಾದಿವೆ ಮಧುರ ಕ್ಷಣ, ದಿನ ಭವಿಷ್ಯ -
Karnataka Budget 2026: ಕರ್ನಾಟಕ ಬಜೆಟ್ 2026ಕ್ಕೆ ಕ್ಷಣಗಣನೆ: ದಾಖಲೆಯ 17ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications