Get Updates
Get notified of breaking news, exclusive insights, and must-see stories!

ಹಾಸನದಲ್ಲಿ ನಂದಿನಿ ಹಾಲಿನ ಉತ್ಪನ್ನಗಳನ್ನು ಖರೀದಿಸಿ ಅಮೂಲ್‌ಗೆ ವಿರೋಧ ವ್ಯಕ್ತಪಡಿಸಿದ ಡಿ.ಕೆ.ಶಿವಕುಮಾರ್‌

ಹಾಸನ, ಏಪ್ರಿಲ್‌, 10: ರಾಜ್ಯದಲ್ಲಿ ಅಮೂಲ್ ಉತ್ಪನ್ನ ಮಾರಾಟಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಲೇ ಇದೆ. ಇದರ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಸನಕ್ಕೆ ಭೇಟಿ ನೀಡಿ ಇಲ್ಲಿನ ನಂದಿನಿ ಹಾಲಿನ ಕೇಂದ್ರದಲ್ಲಿ ಹಾಲು, ಸಿಹಿ, ಮಜ್ಜಿಗೆ ಖರೀದಿಸಿ ಗಮನ ಸೆಳೆದಿದ್ದಾರೆ.

ಹಾಸನದ ಹೇಮಾವತಿ ಪ್ರತಿಮೆ ಬಳಿ ಇರುವ ನಂದಿನಿ ಡೈರಿಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್‌, ಹಾಲು, ತುಪ್ಪ, ಪ್ಲೇ ವರ್ಡ್ ಮಿಲ್ಕ್, ಮಜ್ಜಿಗೆ, ಮೈಸೂರು ಪಾಕ್ ಸೇರಿದಂತೆ ಎರಡೂವರೆ ಸಾವಿರ ಮೌಲ್ಯದ ನಂದಿನಿ ಉತ್ಪನ್ನಗಳನ್ನು ಖರೀದಿ ಮಾಡಿದ್ದಾರೆ. ಇದೆ ವೇಳೆ ಆಮೂಲ್‌ಗೆ ಭಾರಿ ವಿರೋಧ ವ್ಯಕ್ತಪಡಿಸುವ ಮೂಲಕ ನಂದಿನಿ ಹಾಲಿನ ಕೇಂದ್ರದಲ್ಲೇ ನಿಂತು ಮಜ್ಜಿಗೆ ಕುಡಿದಿದ್ದಾರೆ. ಅಷ್ಟೇ ಅಲ್ಲದೇ ನಂದಿನಿ ಉತ್ಪನ್ನದ ಹಾಲು, ತುಪ್ಪ ಸಿಹಿ ಖರೀದಿ ಮಾಡಿ ಸ್ಥಳದಲ್ಲಿದ್ದವರಿಗೆ ಹಂಚಿದ್ದಾರೆ.

DK Shivakumar visits Nandini Milk parlour in Hassan, amid controversy over Amuls entry into state

ಅಮುಲ್ ಮಾರಾಟಕ್ಕೆ ಭಾರಿ ವಿರೋಧ

ಇನ್ನು ಸಾಮಾಜಿಕ ಜಾಲತಾಣದಲ್ಲಿ #SaveNandini ಅಭಿಯಾನ ಟ್ರೆಂಡ್ ಆಗುತ್ತಿದೆ. ಜಗತ್ತಿನಾದ್ಯಂತ ಈ ವಿಚಾರ ಹರಡುತ್ತಿದ್ದು, ದೇಶ ವಿದೇಶದಲ್ಲಿ ನೆಲೆಸಿರುವ ಕನ್ನಡಿಗರು ಕೂಡ ಗುಜರಾತ್ ಮೂಲದ ಅಮುಲ್ ಸಂಸ್ಥೆ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಮತ್ತೊಂದೆಡೆ ಅಮುಲ್ (Amul) ಎಂಡಿ ಪ್ರಸಕ್ತ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದು, ಬೆಂಗಳೂರಲ್ಲಿ ಅಮುಲ್ ಹಾಲು ಮತ್ತು ಮೊಸರು ಮಾರಾಟಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

ಆಂಧ್ರದ ಮದನಪಲ್ಲಿಯಿಂದ ಬೆಂಗಳೂರಿಗೆ ಹಾಲು, ಮೊಸರು ಸರಬರಾಜು ಆಗಲಿದೆ. ಇ-ಕಾರ್ಮಸ್ ಮೂಲಕ ಅಮುಲ್​ ಹಾಲು ಮತ್ತು ಮೊಸರು ಮಾರಾಟ ಮಾಡುತ್ತೇವೆ. ನಂದಿನಿ ಅಥವಾ ಕರ್ನಾಟಕ ಹಾಲು ಉತ್ಪಾದಕರ ಜತೆ ಪೈಪೋಟಿ ನಡೆಸುವುದಿಲ್ಲ ಎಂದು ಅಮುಲ್ ಕಂಪನಿ ಎಂಡಿ ಜಯನ್ ಮೆಹ್ತಾ ತಿಳಿಸಿರುವುದಾಗಿ ಇತ್ತೀಚೆಗಷ್ಟೇ 'ಟಿವಿ9' ವರದಿ ಮಾಡಿತ್ತು. ಈ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ನಡೆಯುತ್ತಿರುವ ಕೆಎಂಎಫ್ (KMF) ಮತ್ತು ಅಮುಲ್ ಕುರಿತಾದ ಕಿತ್ತಾಟಕ್ಕೆ ಮತ್ತೊಂದು ತಿರುವು ಸಿಕ್ಕಂತಾಗಿದೆ.

DK Shivakumar visits Nandini Milk parlour in Hassan, amid controversy over Amuls entry into state

ಹಾಗೇ ಮಾತು ಮುಂದುವರಿಸಿರುವ ಅಮುಲ್ ಕಂಪನಿ ಎಂಡಿ, ಅಮುಲ್​​ ಹಾಗೂ ಕೆಎಂಎಫ್ ಸಂಬಂಧ ಚೆನ್ನಾಗಿದೆ. ನಂದಿನಿ ಹಾಲಿನ ಮಳಿಗೆ ರೀತಿ ಸ್ಟಾಲ್, ಬೂತ್​ ಹಾಕುವುದಿಲ್ಲ ಎಂದು ಜಯನ್ ಮೆಹ್ತಾ ಸ್ಪಷ್ಟಪಡಿಸಿದ್ದಾರೆ. ಯಾರಿಗೆ ಅಮುಲ್ ಉತ್ಪನ್ನ ಬೇಕೋ ಅವರು ಇ-ಕಾರ್ಮಸ್ ಪ್ಲಾಟ್​ಫಾರ್ಮ್ ಮೂಲಕ ಖರೀದಿ ಮಾಡಬಹುದು. ಬೆಂಗಳೂರಿಂದ‌ 100 ಕಿಲೋ ಮೀಟರ್ ದೂರದ ಮದನಪಲ್ಲಿಯಲ್ಲಿ ಅಮುಲ್ ಪ್ಲಾಂಟ್ ಇದೆ. ಅಲ್ಲಿಂದ ಕಳುಹಿಸುತ್ತೇವೆ ವಿನಃ ನಂದಿನಿ ರೀತಿ ಬೂತ್, ಮಳಿಗೆ ತೆರೆಯುವುದಿಲ್ಲ ಎಂದಿದ್ದಾರೆ ಅಂತಾ ಜಯನ್ ಮೆಹ್ತಾ ಹೇಳಿಕೆ ಉಲ್ಲೇಖಿಸಿ 'ಟಿವಿ9' ವರದಿ ಮಾಡಿದೆ.

ಅಂದಹಾಗೆ ಅಮುಲ್ ಎಂಡಿ ಸ್ಪಷ್ಟನೆ ನೀಡಿದ್ದರೂ, ಪರಿಸ್ಥಿತಿ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಅದರಲ್ಲೂ ಬೆಂಗಳೂರಿನಲ್ಲಿ ಇ-ಕಾರ್ಮಸ್ ಪ್ಲಾಟ್​ಫಾರ್ಮ್ ಮೂಲಕ ಅಮುಲ್ ಹಾಲು & ಮೊಸರು ಮಾರಾಟ ಮಾಡುವುದು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಅಭಿಯಾನ ಮತ್ತಷ್ಟು ತೀವ್ರವಾಗುವ ಸಾಧ್ಯತೆ ದಟ್ಟವಾಗಿದೆ. ಈ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಂತೂ ಆಗಬಹುದು. ಈಗಾಗಲೇ ಜಗತ್ತಿನಾದ್ಯಂತ ನಂದಿನಿ ಉಳಿಸಿ ಅಭಿಯಾನಕ್ಕೆ ಕನ್ನಡಿಗರು ಬೆಂಬಲ ನೀಡುತ್ತಿದ್ದಾರೆ. ಮುಂದೆ ಅದು ಇನ್ನೂ ತೀವ್ರವಾದರೂ ಅಚ್ಚರಿ ಇಲ್ಲ.

ಕನ್ನಡಿಗರ ಆಕ್ರೋಶ

ಕೆಲ ವರ್ಷಗಳ ಹಿಂದಷ್ಟೇ ವಿಲೀನದ ಹೆಸರಲ್ಲಿ ಕನ್ನಡಿಗರು ಕಟ್ಟಿ ಬೆಳೆಸಿದ್ದ ಬ್ಯಾಂಕ್‌ಗಳು ಯಾರದ್ದೋ ಪಾಲಾದವು. ಅದರಲ್ಲೂ ಎಸ್‌ಬಿಎಂ(SBM) ಮತ್ತು ಕರಾವಳಿಯ ಅತ್ಯುತ್ತಮ ಬ್ಯಾಂಕ್‌ಗಳು ವಿಲೀನದ ಹೆಸರಲ್ಲಿ ಮಾಯವಾದವು. ಭಾರತಕ್ಕೇ ಆರ್ಥಿಕ ಶಿಸ್ತಿನ ಪಾಠ ಮಾಡಿದ್ದ ಕನ್ನಡ ನಾಡಿನ ಕರಾವಳಿ ಭಾಗದಲ್ಲಿ ಕಟ್ಟಿದ್ದ ಅದೆಷ್ಟೋ ಬ್ಯಾಂಕ್‌ಗಳು ಭಾರಿ ಲಾಭದಲ್ಲಿದ್ದವು. ಆದರೆ ನಷ್ಟದಲ್ಲಿದ್ದ ಉತ್ತರ ಭಾರತದ ಬ್ಯಾಂಕ್‌ಗಳ ಜೊತೆ ವಿಲೀನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಕೆಎಂಎಫ್ ವಿಚಾರದಲ್ಲೂ ಇಂತಹದ್ದೇ ಮಾರುವೇಷದ ಆಟ ನಡೆಯುತ್ತಿದೆ ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+