Breaking: ಹಾಸನ ಜಿಲ್ಲೆಯ ಹಲವಡೆ ಕಂಪಿಸಿದ ಭೂಮಿ, ಭೀತಿಯಲ್ಲಿ ಮನೆ ಹೊರಬಂದ ಜನರು
ಹಾಸನ, ಜೂನ್ 23: ಗುರುವಾರ ಹಾಸನ ಜಿಲ್ಲೆಯಲ್ಲಿ ಹಲವೆಡೆ ಲಘುವಾಗಿ ಭೂಮಿ ಕಂಪಿಸಿದ ಅನುಭವವಾಗಿದೆ. ಹೊಳೆನರಸೀಪುರ, ಅರಕಲಗೂಡು ತಾಲ್ಲೂಕಿನ ಹನೆಮರನಹಳ್ಳಿ, ಕಾರಹಳ್ಳಿ ಸೇರಿ ಕೆಲವು ಗ್ರಾಮಗಳಲ್ಲಿ ಹಾಗೂ ಹಾಸನದ ಶಾಂತಿನಗತ, ಹೇಮಾವತಿ ನಗರ, ತಮ್ಲಾಪುರ ಭಾಗಗಳಲ್ಲೂ ಲಘು ಭೂಕಂಪನವಾಗಿದ್ದು ಮಲಗಿದ್ದ ಭಯಗೊಂಡು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಜಿಲ್ಲೆಯ ಹಲವು ಗ್ರಾಮಗಳಲ್ಲಿ ಗುರುವಾರ ಬೆಳಗಿನ ಜಾವ 4 :38ರ ಸಮಯದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಮಿ ಕಂಪಿಸುವ ಮೊದಲು ದೊಡ್ಡದಾದ ಶಬ್ಧ ಕೇಳಿಸಿತು, ಕೆಲವು ಮನೆಗಳಲ್ಲಿ ವಸ್ತುಗಳ ಚೆಲ್ಲಾಪಿಲ್ಲಿಯಾಗಿರುವ ಬಗ್ಗೆ ಜನರು ಮಾಹಿತಿ ನೀಡಿದ್ದಾರೆ.
ಅರಕಲಗೂಡು ತಾಲ್ಲೂಕಿನಲ್ಲಿ ಮುದ್ದನಹಳ್ಳಿ, ಅರಕಲಗೂಡು ಪಟ್ಟಣ, ಹನೆಮಾರನಹಳ್ಳಿ, ಕಾರಳ್ಳಿ ಗ್ರಾಮಗಳಲ್ಲಿ ಹಾಗೂ ಹೊಳೆನರಸೀಪುರ ತಾಲ್ಲೂಕಿನ ಪಟ್ಟಣದ ಚಿಟ್ನಳ್ಳಿ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ ಭೂಮಿ ಕಂಪಿಸಿ ಬಗ್ಗೆ ಮಾಹಿತಿ ತಿಳಿದುಬಂದಿದ್ದು, ಜನರಲ್ಲಿ ತೀವ್ರ ಆತಂಕ ಮೂಡಿಸಿದೆ.

ಬುಧವಾರ ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ ಸಂಭವಿಸದ ಬೆನ್ನಲ್ಲೇ ಹಾಸನ ಜಿಲ್ಲೆಯಲ್ಲಿ ಲಘುವಾಗಿ ಭೂಮಿ ಕಂಪಿಸಿದ್ದರಿಂದ ಜಿಲ್ಲೆಯ ನಿವಾಸಿಗಳು ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ಮಾಡಿ ಜನರ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ದೇಶಗಳಲ್ಲಿ ಬುಧವಾರ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿರುವ ಭೂಕಂಪದಲ್ಲಿ 1000ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ ಮತ್ತು 600 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಕಳೆದ ಎರಡು ದಶಕದಲ್ಲೇ ಅಫ್ಘಾನಿಸ್ತಾನ ದೇಶದಲ್ಲಿ ಸಂಭವಿಸಿದ ಅತಿ ದೊಡ್ಡ ಭೂಕಂಪ ಎನಿಸಿದೆ. ಸಾವಿನ ಸಂಖ್ಯೆ ದೃಷ್ಟಿಯಲ್ಲಿ ಭೂಕಂಪ ಹೆಚ್ಚು ಘೋರವಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications