ಅರಸೀಕೆರೆ ಕ್ಷೇತ್ರದ ಗೊಂದಲ ನಿವಾರಣೆ, ಮರಿಸ್ವಾಮಿಗೆ ಟಿಕೆಟ್
ಹಾಸನ, ಏಪ್ರಿಲ್ 22: ಹಾಸನ ಜಿಲ್ಲೆ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗೊಂದಲ ಬಹುತೇಕ ನಿವಾರಣೆಯಾಗಿದೆ. ಮಾಜಿ ಸಚಿವ ವಿ ಸೋಮಣ್ಣ ಅವರ ಪುತ್ರ ಅರುಣ ಅವರು ಟಿಕೆಟ್ ನಿರಾಕರಣೆ ಮಾಡಿದ್ದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಪರಮಾಪ್ತ ಮರಿಸ್ವಾಮಿಗೆ ಟಿಕೆಟ್ ನೀಡಲು ಪಕ್ಷದ ವರಿಷ್ಠರು ತೀರ್ಮಾನಿಸಿದ್ದಾರೆ. ಈ ಹಿಂದೆ ಎರಡನೇ ಪಟ್ಟಿಯಲ್ಲಿ ಅರಸೀಕೆರೆಯಿಂದ ಮಾಜಿ ಸಚಿವ ವಿ.ಸೋಮಣ್ಣನವರ ಪುತ್ರ ಡಾ.ಅರುಣ್ ಸೋಮಣ್ಣನವರಿಗೆ ಟಿಕೆಟ್ ನೀಡಲಾಗಿತ್ತು.
ಆದರೆ, ಕೊನೆ ಕ್ಷಣದಲ್ಲಿ ತಮಗೆ ಟಿಕೆಟ್ ನೀಡಿರುವುದು, ತಮ್ಮ ತಂದೆಯವರು ಕೇಳಿದ ಕ್ಷೇತ್ರದಲ್ಲಿ ಟಿಕೆಟ್ ನೀಡದ ಕಾರಣ, ಮುನಿಸಿಕೊಂಡಿರುವ ಅರುಣ್ ಸೋಮಣ್ಣ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದು, ಗೊಂದಲಕ್ಕೆ ಕಾರಣವಾಗಿತ್ತು.

ಟಿಕೆಟ್ ಘೋಷಣೆಯಾಗಿ ನಾಲ್ಕು ದಿನವಾದರೂ ಅವರು ಬಿ ಫಾರಂ ಪಡೆದಿರಲಿಲ್ಲ. ಸಮಯ ಬರಲಿ ತೆಗೆದುಕೊಳ್ಳುತ್ತೇನೆ ಎಂದು ಸಬೂಬು ಹೇಳಿದ್ದರು. ಮಂಗಳವಾರ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. ಮರಿಸ್ವಾಮಿಗೆ ಟಿಕೆಟ್ ನೀಡಿ ನಾಮಪತ್ರ ಸಲ್ಲಿಸಲು ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ ಎಂಬ ಸುದ್ದಿ ಬಂದಿದೆ.
ಈಗಾಗಲೇ ಯಡಿಯೂರಪ್ಪ ಮರಿಸ್ವಾಮಿ ಜೊತೆ ಮಾತುಕತೆ ನಡೆಸಿದ್ದು, ಮರಿಸ್ವಾಮಿ ಸ್ಪರ್ಧೆಗೆ ಒಲವು ತೋರಿದ್ದಾರೆ. ನಾಳೆ ಯಡಿಯೂರಪ್ಪ ಅವರಿಗೆ ಬಿ ಫಾರಂ ನೀಡಲಿದ್ದು, ನಂತರ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಕೊನೆಯ ಕ್ಷಣದವರೆಗೂ ಅರುಣ್ ಸೋಮಣ್ಣಗೆ ಟಿಕೆಟ್ ನೀಡುವ ಪ್ರಯತ್ನವನ್ನು ಪಕ್ಷದ ವರಿಷ್ಠರು ನಡೆಸಿದರಾದರೂ ಯಾವುದೇ ಪ್ರಯೋಜನವಾಗಲಿಲ್ಲ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications