ಅರಕಲಗೂಡಿನಲ್ಲಿ ಮತದಾನ ಬಹಿಷ್ಕರಿಸಿದ 85 ಮುಸ್ಲಿಂ ಕುಟುಂಬ!
ಹಾಸನ, ಮೇ 03: ಹಾಸನ ಜಿಲ್ಲೆ ಅರಕಲಗೂಡು ಕ್ಷೇತ್ರದ ರಾಮನಾಥಪುರದಲ್ಲಿ ಮುಸ್ಲಿಮ್ ಸಮುದಾಯದವರು ಮತದಾನ ಬಹಿಷ್ಕರಿಸಿದ್ದಾರೆ.
ಕಾವೇರಿ ತಟದ ರಾಮನಾಥಪುರದಲ್ಲಿರುವ 85 ಮುಸ್ಲಿಂ ಕುಟುಂಬದ ಸುಮಾರು 340 ಮತದಾರರು ಈ ಬಾರಿ ಮತದಾನ ಮಾಡುವುದಿಲ್ಲ ಎಂದು ಘೋಷಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಈ ಊರಿನಲ್ಲಿ ಮುಸ್ಲಿಂ ಸಮುದಾಯದವರು ಮೃತರಾದರೆ, ದಫನ್ ಮಾಡಲು ಪ್ರತ್ಯೇಕ ಖಬರಿಸ್ತಾನ್ ಇಲ್ಲ. ಯಾರಾದರೂ ಮೃತರಾದರೆ, ಪಕ್ಕದ ಗ್ರಾಮಕ್ಕೆ ಹೋಗಿ ಕಷ್ಟಪಟ್ಟು ಅಂತಿಮ ಕ್ರಿಯೆ ನಡೆಸಬೇಕಾಗಿದೆ. ವರ್ಷಗಳಿಂದ ಕಳೆದ ಎರಡು ಸರ್ಕಾರಕ್ಕೂ ಮನವಿ ಸಲ್ಲಿಸಿದರೂ ಬೆಲೆ ಸಿಕ್ಕಿಲ್ಲ.
ಹೀಗಾಗಿ, ಬೇಡಿಕೆ ಈಡೇರಿಸುವ ತನಕ ಮತದಾನ ಮಾಡುವುದಿಲ್ಲ ಎಂದು ರಾಮನಾಥಪುರ ಜಾಮಿಯಾ ಮಸೀದಿ ಸಮಿತಿ ನಿರ್ಣಯ ಕೈಗೊಂಡಿದೆ.
ಅರಕಲಗೂಡಿನ ಹಾಲಿ ಶಾಸಕ, ಸಚಿವ ಎ ಮಂಜು ಅವರು ನೀಡಿದ್ದ ಭರವಸೆ ಹುಸಿಯಾಗಿದೆ. ಕಳೆದ 10 ವರ್ಷಗಳಲ್ಲಿ 15 ಮಂದಿ ಮೃತರಾಗಿದ್ದು, ಮೃತರ ಮನೆಯಲ್ಲಿ ಪ್ರಾರ್ಥನೆ ಸಲ್ಲಿಸಿ, ಪಕ್ಕದ ಊರಿಗೆ ಕೊಂಡೊಯ್ದು ದಫನ್ ಮಾಡುತ್ತಿದ್ದೇವೆ. ಆದರೆ, ಕೆಲವೊಮ್ಮೆ ಪಕ್ಕದೂರಿನವರು ಸುಲಭಕ್ಕೆ ದಫನ್ ಮಾಡಲು ಅನುಮತಿ ನೀಡುವುದಿಲ್ಲ. ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಜಾಮಿಯಾ ಮಸೀದಿ ಸಮಿತಿ ಅಧ್ಯಕ್ಷ ಮುನಾವರ್ ಅವರು ಅಳಲು ತೋಡಿಕೊಂಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications