ಸಕಲೇಶಪುರ ಕಾಂಗ್ರೆಸ್ ಅಭ್ಯರ್ಥಿ ಸಿದ್ದಯ್ಯ ವಿರುದ್ಧ ಸ್ಥಳೀಯರ ಮುನಿಸು
ಹಾಸನ, ಏಪ್ರಿಲ್ 18: ಸಿದ್ದಯ್ಯ, ಐಎಎಸ್ ಅಂದ್ರೆ ಬೆಂಗಳೂರಿಗರಿಗೆ ಪರಿಚಿತ ಮುಖ. ಏಕೆಂದರೆ ಅವರು ಬಿಬಿಎಂಪಿ ಹಾಗೂ ಬಿಡಿಎ ಆಯುಕ್ತರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. 2013ರಲ್ಲಿ ಸೇವಾ ನಿವೃತ್ತಿ ಹೊಂದಿದ ಬಳಿಕ ಅವರು ರಾಜಕೀಯ ಪ್ರವೇಶಿಸುತ್ತಾರೆ ಅನ್ನುವ ವದಂತಿ ಪ್ರತಿ ಚುನಾವಣಾ ಸಮಯದಲ್ಲೂ ಕೇಳಿ ಬರುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ಅವರು ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಪರಿಶಿಷ್ಟ ಜಾತಿಗೆ ಮೀಸಲಾದ ಸಕಲೇಶಪುರ-ಆಲೂರು ಕೇತ್ರದಿಂದ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿದೆ.
ಆದರೆ, ದೇವರು (ಹೈಕಮಾಂಡ್) ಕೊಟ್ಟರೂ ಪೂಜಾರಿ (ಸ್ಥಳೀಯ ನಾಯಕರು) ಬಿಡ ಎಂಬಂತಾಗಿದೆ ಸಿದ್ದಯ್ಯ ಪರಿಸ್ಥಿತಿ. ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಮಂಗಳವಾರ ಅವರು ಕ್ಷೇತ್ರಕ್ಕೆ ಭರ್ಜರಿ ಎಂಟ್ರಿ ನೀಡಲು ಹಾಸನಕ್ಕೆ ಆಗಮಿಸಿದ್ದರು. ಐಎಎಸ್ ಗತ್ತಿನಲ್ಲೇ ಅವರು ಜಿಲ್ಲೆ ಪ್ರವೇಶಿಸಿದ್ದರು. ಆದರೆ ಅವರಿಗೆ ಸಿಕ್ಕಿದ್ದು ಭಾರೀ ಪ್ರತಿಭಟನೆಯ ಸ್ವಾಗತ.

ಸಿದ್ದಯ್ಯ ಅವರ ಇನ್ನೋವಾ ಕಾರನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯ ಎದುರಲ್ಲೇ ತಡೆ ಹಿಡಿದ ಪ್ರತಿಭಟನಾಕಾರರು, ಸ್ಥಳೀಯರಿಗೆ ಪಕ್ಷದ ಟಿಕೆಟ್ ನೀಡಬೇಕೆಂಬ ಆಗ್ರಹ ಮುಂದಿಟ್ಟರು. ಸಿದ್ದಯ್ಯ ಅವರನ್ನು ಸಕಲೇಶಪುರ ಪ್ರವೇಶಿಸಲು ಬಿಡುವುದಿಲ್ಲ ಎಂಬ ಘೋಷಣೆ ಮೊಳಗಿಸಲಾಯಿತು. ಕೊನೆಗೆ ಹಿರಿಯ ನಾಯಕರು, ಸಿದ್ದಯ್ಯ ಅವರನ್ನು ಕಚೇರಿಯ ಒಳಗೆ ಕರೆದುಕೊಂಡು ಹೋದರು.
ಸರ್ಕಾರಿ ಕೆಲಸ ಬಿಟ್ಟು ಪೇಚಾಟ: ಕಾಂಗ್ರೆಸ್ ಮೂಲಗಳ ಪ್ರಕಾರ ಸಕಲೇಶಪುರದ ಸುಮಾರು 15ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ಈ ಬಾರಿ ಟಿಕೆಟ್ ಅಪೇಕ್ಷಿಸಿ ಅರ್ಜಿ ಸಲ್ಲಿಸಿದ್ದರು. ಜಿಲ್ಲೆಯಲ್ಲಿ ಇದೊಂದೇ ಪರಿಶಿಷ್ಟ ಜಾತಿಗೆ ಮೀಸಲಾದ ಕೇತ್ರವಾದ ಹಿನ್ನಲೆಯಲ್ಲಿ ಹಲವು ಜಿಲ್ಲಾ ನಾಯಕರೂ ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರು.
ಚನ್ನಮ್ಮಲ್ಲಯ್ಯ ಎನ್ನುವವರಂತೂ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಇಂಜಿನಿಯರ್ ಆಗಿದ್ದರು. ಕಾಂಗ್ರೆಸ್ ಪಕ್ಷದ ಕೆಲ ನಾಯಕರು ಟಿಕೆಟ್ ನೀಡುತ್ತೇವೆ ಎಂಬ ಭರವಸೆ ನೀಡಿದ್ದ ಹಿನ್ನಲೆಯಲ್ಲಿ ಅವರು ತಮ್ಮ ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದರಂತೆ. ಈಗ ಟಿಕೆಟ್ ನಿರಾಕರಿಸಿ ಅನ್ಯಾಯ ಮಾಡಲಾಗಿದೆ ಎಂಬುದು ಅವರ ಆರೋಪ.
ಒಟ್ಟಾರೆ ಕಾಂಗ್ರೆಸ್ನಲ್ಲಿ ಈ ಆಂತರಿಕ ಬೇಗುದಿ, ಮಾಜಿ ಸಚಿವ, ಜೆಡಿಎಸ್ ಅಭ್ಯರ್ಥಿ ಎಚ್ ಕೆ ಕುಮಾರಸ್ವಾಮಿ ಮೊಗದಲ್ಲಿ ಮುಗುಳ್ನಗೆ ಮೂಡಿಸಿರುವುದು ಸುಳ್ಳಲ್ಲ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications