ಸಕಲೇಶಪುರ ಕಾಂಗ್ರೆಸ್ ಅಭ್ಯರ್ಥಿ ಸಿದ್ದಯ್ಯ ವಿರುದ್ಧ ಸ್ಥಳೀಯರ ಮುನಿಸು
ಹಾಸನ, ಏಪ್ರಿಲ್ 18: ಸಿದ್ದಯ್ಯ, ಐಎಎಸ್ ಅಂದ್ರೆ ಬೆಂಗಳೂರಿಗರಿಗೆ ಪರಿಚಿತ ಮುಖ. ಏಕೆಂದರೆ ಅವರು ಬಿಬಿಎಂಪಿ ಹಾಗೂ ಬಿಡಿಎ ಆಯುಕ್ತರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. 2013ರಲ್ಲಿ ಸೇವಾ ನಿವೃತ್ತಿ ಹೊಂದಿದ ಬಳಿಕ ಅವರು ರಾಜಕೀಯ ಪ್ರವೇಶಿಸುತ್ತಾರೆ ಅನ್ನುವ ವದಂತಿ ಪ್ರತಿ ಚುನಾವಣಾ ಸಮಯದಲ್ಲೂ ಕೇಳಿ ಬರುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ಅವರು ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಪರಿಶಿಷ್ಟ ಜಾತಿಗೆ ಮೀಸಲಾದ ಸಕಲೇಶಪುರ-ಆಲೂರು ಕೇತ್ರದಿಂದ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿದೆ.
ಆದರೆ, ದೇವರು (ಹೈಕಮಾಂಡ್) ಕೊಟ್ಟರೂ ಪೂಜಾರಿ (ಸ್ಥಳೀಯ ನಾಯಕರು) ಬಿಡ ಎಂಬಂತಾಗಿದೆ ಸಿದ್ದಯ್ಯ ಪರಿಸ್ಥಿತಿ. ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಮಂಗಳವಾರ ಅವರು ಕ್ಷೇತ್ರಕ್ಕೆ ಭರ್ಜರಿ ಎಂಟ್ರಿ ನೀಡಲು ಹಾಸನಕ್ಕೆ ಆಗಮಿಸಿದ್ದರು. ಐಎಎಸ್ ಗತ್ತಿನಲ್ಲೇ ಅವರು ಜಿಲ್ಲೆ ಪ್ರವೇಶಿಸಿದ್ದರು. ಆದರೆ ಅವರಿಗೆ ಸಿಕ್ಕಿದ್ದು ಭಾರೀ ಪ್ರತಿಭಟನೆಯ ಸ್ವಾಗತ.

ಸಿದ್ದಯ್ಯ ಅವರ ಇನ್ನೋವಾ ಕಾರನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯ ಎದುರಲ್ಲೇ ತಡೆ ಹಿಡಿದ ಪ್ರತಿಭಟನಾಕಾರರು, ಸ್ಥಳೀಯರಿಗೆ ಪಕ್ಷದ ಟಿಕೆಟ್ ನೀಡಬೇಕೆಂಬ ಆಗ್ರಹ ಮುಂದಿಟ್ಟರು. ಸಿದ್ದಯ್ಯ ಅವರನ್ನು ಸಕಲೇಶಪುರ ಪ್ರವೇಶಿಸಲು ಬಿಡುವುದಿಲ್ಲ ಎಂಬ ಘೋಷಣೆ ಮೊಳಗಿಸಲಾಯಿತು. ಕೊನೆಗೆ ಹಿರಿಯ ನಾಯಕರು, ಸಿದ್ದಯ್ಯ ಅವರನ್ನು ಕಚೇರಿಯ ಒಳಗೆ ಕರೆದುಕೊಂಡು ಹೋದರು.
ಸರ್ಕಾರಿ ಕೆಲಸ ಬಿಟ್ಟು ಪೇಚಾಟ: ಕಾಂಗ್ರೆಸ್ ಮೂಲಗಳ ಪ್ರಕಾರ ಸಕಲೇಶಪುರದ ಸುಮಾರು 15ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ಈ ಬಾರಿ ಟಿಕೆಟ್ ಅಪೇಕ್ಷಿಸಿ ಅರ್ಜಿ ಸಲ್ಲಿಸಿದ್ದರು. ಜಿಲ್ಲೆಯಲ್ಲಿ ಇದೊಂದೇ ಪರಿಶಿಷ್ಟ ಜಾತಿಗೆ ಮೀಸಲಾದ ಕೇತ್ರವಾದ ಹಿನ್ನಲೆಯಲ್ಲಿ ಹಲವು ಜಿಲ್ಲಾ ನಾಯಕರೂ ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರು.
ಚನ್ನಮ್ಮಲ್ಲಯ್ಯ ಎನ್ನುವವರಂತೂ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಇಂಜಿನಿಯರ್ ಆಗಿದ್ದರು. ಕಾಂಗ್ರೆಸ್ ಪಕ್ಷದ ಕೆಲ ನಾಯಕರು ಟಿಕೆಟ್ ನೀಡುತ್ತೇವೆ ಎಂಬ ಭರವಸೆ ನೀಡಿದ್ದ ಹಿನ್ನಲೆಯಲ್ಲಿ ಅವರು ತಮ್ಮ ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದರಂತೆ. ಈಗ ಟಿಕೆಟ್ ನಿರಾಕರಿಸಿ ಅನ್ಯಾಯ ಮಾಡಲಾಗಿದೆ ಎಂಬುದು ಅವರ ಆರೋಪ.
ಒಟ್ಟಾರೆ ಕಾಂಗ್ರೆಸ್ನಲ್ಲಿ ಈ ಆಂತರಿಕ ಬೇಗುದಿ, ಮಾಜಿ ಸಚಿವ, ಜೆಡಿಎಸ್ ಅಭ್ಯರ್ಥಿ ಎಚ್ ಕೆ ಕುಮಾರಸ್ವಾಮಿ ಮೊಗದಲ್ಲಿ ಮುಗುಳ್ನಗೆ ಮೂಡಿಸಿರುವುದು ಸುಳ್ಳಲ್ಲ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications