ಹಾಸನ ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆಗಳ ಉಪಟಳ
ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ಬೆಳ್ಳಂಬೆಳಿಗ್ಗೆ ಗ್ರಾಮಗಳ ಒಳಗೆ ಒಂಟಿ ಸಲಗಗಳು ಏಕಾಏಕಿ ಪ್ರವೇಶ ಮಾಡಿ ಸಾರ್ವಜನಿಕರನ್ನು ಬೆಚ್ಚಿಬೀಳಿಸಿವೆ.
ಸಕಲೇಶಪುರ ತಾಲ್ಲೂಕಿನ ಕಿರುಹುಣಸೆ ಸರ್ಕಲ್ ಹಾಗೂ ವಡೂರು ಗ್ರಾಮದಲ್ಲಿ ಹಾದು ಹೋದ ಗಜ ಕಾಡಾನೆ ಕಂಡು ಗ್ರಾಮಸ್ಥರು ಭಯಭೀತಗೊಂಡಿದ್ದಾರೆ. ಕಾಡಾನೆಯೊಂದು ರಸ್ತೆಯಲ್ಲಿ ದಿಢೀರನೆ ಎದುರು ಬರುತ್ತಿದ್ದಂತೆ ಬೈಕ್ ನಿಲ್ಲಿಸಿ ಸವಾರರೊಬ್ಬರು ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾರೆ.
ಕಿರುಹುಣಸೆ ಗ್ರಾಮದೊಳಗೆ ಎರಡು ಸಲಗಗಳು ಸಂಚಾರ ಮಾಡುವ ವಿಡಿಯೋ ವೈರಲ್ ಇದೀಗ ವೈರಲ್ ಆಗಿದ್ದು, ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಆನೆಗಳು ಯಾವಾಗ ನಮ್ಮ ಮೇಲೆ ದಾಳಿ ಮಾಡುತ್ತವೆಯೋ ಎಂದು ಆತಂಕ ಗ್ರಾಮದಲ್ಲಿ ಮನೆ ಮಾಡಿದೆ.

ಆನೆಗಳ ಉಪಟಳ ಜಾಸ್ತಿಯಾಗುತ್ತಿದಂತೆ ಇಂದು ಕಾಡಾನೆ ದಾಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವಂತೆ ಒತ್ತಾಯಿಸಿ ಶಾಸಕ ಎಚ್.ಕೆ.ಕುಮಾರಸ್ವಾಮಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಸಕಲೇಶಪುರ ತಾಲ್ಲೂಕಿನ ಬಾಗೆ ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಇನ್ನೊಂದೆಡೆ ಕಾಡಾನೆಗಳ ಇರುವ ಮಾಹಿತಿ ಕುರಿತು ಅರಣ್ಯ ಇಲಾಖೆ ಸಿಬ್ಬಂದಿ ಮೈಕ್ ಮೂಲಕ ಅನೌನ್ಸ್ ಮಾಡುತ್ತಿದ್ದು, ಜನರಿಗೆ ಹೊರ ಬಾರದಂತೆ ಸೂಚನೆ ನೀಡಲಾಗಿದೆ. ಮಠಸಾಗರ, ಟಾಟಾ ಎಸ್ಟೇಟ್ ಬಳಿ ಕಾಡಾನೆಗಳಿದ್ದು ಜನರು ಸುರಕ್ಷಿತವಾಗಿ ಹಾಗೂ ಎಚ್ಚರಿಕೆಯಿಂದ ಓಡಾಡುವಂತೆ ಧ್ವನಿವರ್ಧಕದ ಮೂಲಕ ಮನವಿ ಮಾಡಲಾಗುತ್ತಿದೆ.
Recommended Video
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications