ರಾಜ್ಯ ರಾಜಕಾರಣದಲ್ಲಿ ಭಾರೀ ಸ್ಥಿತ್ಯಂತರ: ಹಾಸನಾಂಬೆಯ ಮುಂದೆ ಹೊಸ ಬಾಂಬ್ ಸಿಡಿಸಿದ ಎ ಮಂಜು
Recommended Video
ಹಾಸನ, ಅ 23: ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಬಿಜೆಪಿ ಮುಖಂಡ ಎ.ಮಂಜು ಭವಿಷ್ಯ ನುಡಿದಿದ್ದಾರೆ.
"ಜೆಡಿಎಸ್ ಪಕ್ಷದ ಹದಿನೈದು ಶಾಸಕರು ಸದ್ಯದಲ್ಲೇ ಬಿಜೆಪಿ ಸೇರಲಿದ್ದಾರೆ" ಎಂದು ಮಂಜು ಹೇಳಿರುವುದು, ಜೆಡಿಎಸ್ ನಲ್ಲಿ ಹೊಸ ಸಂಚಲನ ಮೂಡಿಸಿದೆ.
"ಕುಮಾರಸ್ವಾಮಿಯವರಿಗೆ ಈ ವಿಚಾರವೆಲ್ಲಾ ಅರಿತಿದೆ. ಆ ಕಾರಣಕ್ಕಾಗಿಯೇ, ಅವರು ಬಿಜೆಪಿ ಸಖ್ಯ ಬೆಳೆಸಲು ಮುಂದಾಗಿದ್ದಾರೆ" ಎಂದು ಮಂಜು, ಹಾಸನಾಂಬೆಯ ದರ್ಶನ ಪಡೆದು ಹೇಳಿದ್ದಾರೆ.

"ಕೆಲವು ದಿನಗಳ ಹಿಂದೆ, ದೇವೇಗೌಡ್ರು, ಸರ್ದಾರ್ ಪಟೇಲ್ ಪ್ರತಿಮೆಯ ಮುಂದೆ ಫೋಟೋ ತೆಗೆಸಿಕೊಂಡಿದ್ದು ಏನಕ್ಕೆ ಎನ್ನುವುದನ್ನು ಬಿಜೆಪಿಯವರು ಅರಿತುಕೊಳ್ಳಬೇಕು" ಎಂದು ಮಂಜು, ತಮ್ಮದೇ ಪಕ್ಷದ ಮುಖಂಡರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.
"ನಾನು ಕಾಂಗ್ರೆಸ್ ನಲ್ಲಿ ಇದ್ದಾಗಲೂ, ಸಿದ್ದರಾಮಯ್ಯನವರಿಗೆ ಹೇಳುತ್ತಲೇ ಬರುತ್ತಿದೆ. ಈಗ, ಅವರಿಗೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಏನು ತೊಂದರೆ ಎನ್ನುವುದು ಗೊತ್ತಾಗಿದೆ" ಎಂದು ಮಂಜು ಹೇಳಿದ್ದಾರೆ.
"ಅಧಿಕಾರಕ್ಕಾಗಿ ಜೆಡಿಎಸ್ ಯಾರ ಜೊತೆಗಾದರೂ ಹೋಗುತ್ತಾರೆ" ಎಂದು, ಮಾಜಿ ಸಚಿವ, ಎ. ಮಂಜು ಹೇಳಿದ್ದಾರೆ. "ಬಿಜೆಪಿ ಜತೆ ಕೈ ಜೋಡಿಸಲು ಜೆಡಿಎಸ್ ಶಾಸಕರು ನಿರ್ಧರಿಸಿದ್ದೆವು. ನಾವೇ ಅವರಿಗೆ ಬಾಹ್ಯ ಬೆಂಬಲ ನೀಡಿದರೂ ಆಪರೇಷನ್ ಕಮಲ ಏಕೆ ಮಾಡಿದರು ಎಂದು ತಿಳಿದಿಲ್ಲ" ಎಂದು ನಾಗಮಂಗಲ ಜೆಡಿಎಸ್ ಶಾಸಕ ಸುರೇಶ್ ಗೌಡ ಇತ್ತೀಚೆಗೆ ಹೇಳಿಕೆಯನ್ನು ನೀಡಿದ್ದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications