ಹಾಸನ: ಚಿಕಿತ್ಸೆ ನೀಡಲು ತೆರಳಿದ ವೇಳೆ ಕಾಡಾನೆ ದಾಳಿ, ಅರಣ್ಯ ಸಿಬ್ಬಂದಿ ಸಾವು

ಹಾಸನ, ಆಗಸ್ಟ್ 31: ಚಿಕಿತ್ಸೆ ನೀಡಲು ಹೋಗಿ ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ವೆಂಕಟೇಶ್ ಮೃತ ಅರಣ್ಯ ಸಿಬ್ಬಂದಿ ಎಂದು ಗುರುತಿಸಲಾಗಿದೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಬಳಿ ಘಟನೆ ನಡೆದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ವಾರಾಗಳ ಹಿಂದೆ ಕಾಡಾನೆಗಳ ಕಾದಾಟದಲ್ಲಿ ಭೀಮಾ ಆನೆ ಗಾಯಗೊಂಡಿದ್ದು, ಇದಕ್ಕೆ ಚಿಕಿತ್ಸೆ ನೀಡಲು ಅರಣ್ಯ ಸಿಬ್ಬಂದಿ ಮುಂದಾಗಿದ್ದಾರೆ. ಇದುವರೆಗೆ ಯಾರ ಮೇಲೂ ದಾಳಿ ಮಾಡದೆ ಸೌಮ್ಯ ಸ್ವಭಾವ ಹೊಂದಿದ್ದ ಭೀಮನಿಗೆ ಚಿಕಿತ್ಸೆ ನೀಡಲು ಮೃತ ವೆಂಕಟೇಶ್ ತೆರಳಿದ್ದರು. ಮೊದಲು ಅರಣ್ಯ ಸಿಬ್ಬಂದಿ ಭೀಮ ಇರುವ ಜಾಗ ಗುರುತಿಸಿದ್ದಾರೆ.

Forest Officer Dies Due To Wild Elephant Attack In Hassan

ಬಳಿಕ ಗಾಯಗೊಂಡ ಭೀಮನನ್ನು ಸೆರೆ ಹಿಡಿದು ಚಿಕಿತ್ಸೆ ನೀಡಲು ವೆಂಕಟೇಶ್ ಅವರು ಅರವಳಿಕೆ ಚುಚ್ಚುಮದ್ದು ನೀಡಿದ್ದರು. ನಂತರ ಹಳ್ಳಿಯೂರು ಬಳಿ ನಿಂತಿದ್ದ ಭೀಮನ ಬಳಿ ವನ್ಯಜೀವಿ ವೈದ್ಯ ವಸೀಂ ಜೊತೆ ವೆಂಕಟೇಶ್ ಕೂಡ ಚಿಕಿತ್ಸೆ ನೀಡಲು ತೆರಳಿದ್ದರು. ಅರಣ್ಯ ಸಿಬ್ಬಂದಿ ತಮ್ಮ ಯೋಜನೆಯಂತೆ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಭೀಮನ ಕಂಡು ವನ್ಯಜೀವಿ ವೈದ್ಯ ವಸೀಂ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ.

Forest Officer Dies Due To Wild Elephant Attack In Hassan

ಈ ವೇಳೆ ಗಾಯಗೊಂಡಿದ್ದ ಭೀಮ ಏಕಾಏಕಿಯಾಗಿ ವೆಂಕಟೇಶ್ ಮೇಲೆ ದಾಳಿ ನಡೆಸಿದ್ದಾನೆ. ಕಾಡಾನೆಯ ದಾಳಿಗೆ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ದುರಾದೃಷ್ಟವಶಾತ್‌ ಚಿಕಿತ್ಸೆ ಫಲಿಸದೆ ವೆಂಕಟೇಶ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವೆಂಕಟೇಶ್‌ ಹಲವು ವರ್ಷಗಳಿಂದ ಈ ಹಿಂದೆ ಹತ್ತಾರು ಕಾಡಾನೆಗಳ ಸೆರೆ ವೇಳೆ ಅರವಳಿಕೆ ಮದ್ದು ನೀಡಿದ ಅನುಭವ ಹೊಂದಿದ್ದರು. ಆದರೆ ಈ ಬಾರಿ ಚಿಕಿತ್ಸೆ ನೀಡುವ ಮುನ್ನ ಅರವಳಿಕೆ ಚುಚ್ಚುಮದ್ದು ನೀಡುವಾಗ ನಡೆದ ಎಡವಟ್ಟಿನಿಂದಾಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+