'ಎತ್ತಿನಹೊಳೆ ಬಗ್ಗೆ ಹಾಸನ ಜಿಲ್ಲಾ ಅರಣ್ಯಾಧಿಕಾರಿಗಳಿಂದ ಸುಳ್ಳು ಮಾಹಿತಿ'
ಹಾಸನ, ಜನವರಿ. 06 : ನೇತ್ರಾವತಿಯ ಉಪನದಿಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಗೆ ಸ್ಥಳೀಯರಿಂದ ವ್ಯಾಪಕ ವಿರೋಧವಿದೆ ಎಂದು ಕೇಂದ್ರ ಅರಣ್ಯ ಇಲಾಖೆ ಅಧಿಕಾರಿ ಮತ್ತು ತಜ್ಞರ ತಂಡಕ್ಕೆ ಹಾಸನ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಪಶ್ಚಿಮ ಘಟ್ಟ ಸಂರಕ್ಷಣಾ ಹೋರಾಟ ವೇದಿಕೆಯ ರಾಜ್ಯ ಸಂಚಾಲಕ ಕೆ. ಎನ್ ಸೋಮಶೇಖರ್ ಆರೋಪಿಸಿದ್ದಾರೆ.
ಎತ್ತಿನಹೊಳೆ ಯೋಜನೆ ವೇಳೆ ಸಾವಿರಾರು ಗಿಡ ಮರಗಳನ್ನು ಹಾನಿ ಮಾಡುತ್ತಿರುವ ಹಿನ್ನಲೆಯಲ್ಲಿ ನ್ಯಾಯಾಲಯ 2016ರ ಡಿಸೆಂಬರ್ನಲ್ಲಿ ಸ್ಥಳ ವೀಕ್ಷಣೆ ಮಾಡುವಂತೆ ಸೂಚನೆ ನೀಡಿತ್ತು.
ಅದೇ ರೀತಿ ಜನವರಿ 2 ಮತ್ತು 3ರಂದು ಕೇಂದ್ರದ ತಂಡಗಳು ಜಿಲ್ಲೆಯ ಎತ್ತಿನಹೊಳೆ ಯೋಜನೆಯ ಕಾಮಗಾರಿ ಸ್ಥಳಕ್ಕೆ ಆಗಮಿಸಿದ ವೇಳೆ ಅವರಿಗೆ ಸುಳ್ಳು ಮಾಹಿತಿ ನೀಡಲಾಗಿದ್ದು, ಸೂಕ್ತ ವರದಿ ಕೊಟ್ಟಿಲ್ಲ ಎಂದು ಸೋಮಶೇಖರ್ ದೂರಿದ್ದಾರೆ.

ರಾಜ್ಯ ಸರ್ಕಾರ ಈ ಯೋಜನೆಯಲ್ಲಿ ಆರು ಸಾವಿರ ಮರಗಳು ಹಾನಿಯಾಗಲಿದೆ ಎಂದು ವರದಿಯಲ್ಲಿ ಸಲ್ಲಿಸಿದ್ದು. ಈಗಾಗಲೇ ಒಂಬತ್ತು ಸಾವಿರ ಮರಗಳನ್ನು ಹಾನಿ ಮಾಡಲಾಗಿದೆ ಎಂದರು.
ಇದಲ್ಲದೆ ಕೇಂದ್ರ ತಂಡ ಯೋಜನಾ ಪ್ರದೇಶದ ಒಟ್ಟು 20 ಸ್ಥಳಗಳಿಗೆ ಭೇಟಿ ನೀಡುವ ಹಾಗೂ ಮಾರ್ಗಸೂಚಿ ಪ್ರಕಾರ ಸಮೀಕ್ಷೆ ಆಗಿಲ್ಲ. ಜಿಲ್ಲಾ ಅರಣ್ಯಾಧಿಕಾರಿಗಳು ಕೇಂದ್ರಕ್ಕೆ ಮರ ಕಡಿದಿರುವ ಬಗ್ಗೆ ಯಾವುದೇ ದಾಖಲೆಗಳನ್ನು ನೀಡಿಲ್ಲ.
ಪ್ರತಿಯೊಂದು ಪ್ರದೇಶದಲ್ಲೂ ಗುಡ್ಡಗಳನ್ನು ಕಡಿದು ಮರಗಳನ್ನು ಬುಡ ಸಮೇತ ಮಣ್ಣಿನಲ್ಲಿ ಮುಚ್ಚಿ ಹಾಕಲಾಗಿದೆ ಎಂದು ಆರೋಪಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications