ರೈತರ ಜಮೀನುಗಳಿಗೆ ಬೈಕ್ನಲ್ಲೇ ತೆರಳಿ ಬೆಳೆ ಹಾನಿ ಮಾಹಿತಿ ಪಡೆದ ಎಚ್.ಡಿ. ರೇವಣ್ಣ
ಹಾಸನ, ನವೆಂಬರ್ 29: ಕಳೆದ ಕೆಲವು ದಿನಗಳಿಂದ ಸುರಿದ ಅಕಾಲಿಕ ಮಳೆಯಿಂದಾಗಿ ಹಾಸನ ಜಿಲ್ಲೆಯಲ್ಲಿ ಬೆಳೆ ಹಾನಿಯಾಗಿದ್ದು, ಜಮೀನುಗಳಿಗೆ ರೈತರ ಬೈಕ್ನಲ್ಲೇ ತೆರಳಿದ ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ. ರೇವಣ್ಣ, ಬೆಳೆ ಹಾನಿ ಪ್ರದೇಶ ವೀಕ್ಷಿಸಿ, ಮಾಹಿತಿ ಪಡೆದರು.
Recommended Video
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹಲವು ಹಳ್ಳಿಗಳಿಗೆ ಭಾನುವಾರ ಭೇಟಿ ನೀಡಿದ ರೇವಣ್ಣ, ಮಳೆಯಿಂದ ಬೆಳೆಹಾನಿ ಆಗಿರುವ ಪ್ರದೇಶಗಳನ್ನು ವೀಕ್ಷಿಸಿದರು. ಈ ವೇಳೆ ತಮ್ಮ ಕಾರು ಬಿಟ್ಟು ರೈತರ ಬೈಕ್ ಏರಿದ ಎಚ್.ಡಿ. ರೇವಣ್ಣ, ರೈತರ ಜಮೀನಿಗೆ ತೆರಳಿ ಆಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಹಲವು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ರಾಗಿ, ಜೋಳ, ಭತ್ತ, ಶುಂಠಿ ಸೇರಿದಂತೆ ಹಲವು ಬೆಳೆಗಳು ನಾಶವಾಗಿದ್ದು, ರೈತರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.
ಹಾಸನದ ಹೊಳೆನರಸೀಪುರದ ಹಲವು ಹಳ್ಳಿಗಳಲ್ಲಿ ಬೈಕ್ನಲ್ಲಿ ಸುತ್ತುತ್ತಾ ಮಳೆಯಿಂದ ಹಾನಿಗೊಳಗಾದ ರೈತರ ಬೆಳೆ ವೀಕ್ಷಿಸಿದ ನಂತರ ಮಾತನಾಡಿದ ರೇವಣ್ಣ, "ಕಳೆದ ಒಂದು ತಿಂಗಳಲ್ಲಿ ಹೊಳೆನರಸೀಪುರದಲ್ಲಿ ಭಾರೀ ಮಳೆಯಾಗಿ, 40 ಸಾವಿರ ಎಕರೆ ಪ್ರದೇಶದಲ್ಲಿ ರಾಜಮುಡಿ ಭತ್ತ ನಾಶವಾಗಿದೆ. ಬಾಳೆ, ಶುಂಠಿ ಸೇರಿದಂತೆ ಯಾವ ಬೆಳೆಯೂ ಉಳಿದಿಲ್ಲ," ಎಂದರು.

"ಸರ್ಕಾರ ಪ್ರತಿ ಎಕರೆಗೆ ಕನಿಷ್ಟ 15 ಸಾವಿರ ರೂಪಾಯಿ ಪರಿಹಾರ ನೀಡಬೇಕು. ನಮ್ಮ ತಾಲ್ಲೂಕಿನಲ್ಲೇ ಸುಮಾರು 40 ಕೋಟಿ ರೂಪಾಯಿ ನಷ್ಟವಾಗಿದೆ. ಕೂಡಲೇ ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ 25 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು. ಸರ್ಕಾರ ಸುಮ್ಮನೆ ಮಾಧ್ಯಮದಲ್ಲಿ ಮಾತನಾಡುತ್ತ ಕೂರಬಾರದು. ಮನೆ ಬಿದ್ದವರಿಗೂ ಹಣ ನೀಡಿಲ್ಲ. ಕೂಡಲೇ ಸರ್ಕಾರ ಸಮರೋಪಾದಿಯಲ್ಲಿ ಹಣ ಬಿಡುಗಡೆ ಮಾಡಬೇಕು," ಎಂದು ಆಗ್ರಹಿಸಿದರು. ಕೂಡಲೇ ಪರಿಹಾರ ನೀಡಿ ತಮ್ಮ ಸಮಸ್ಯೆಗೆ ಸ್ಪಂದಿಸುವಂತೆ ಸರ್ಕಾರಕ್ಕೆ ರೈತರು ಇದೇ ವೇಳೆ ಮನವಿ ಮಾಡಿದರು.
ಕೋವಿಡ್ ಮೂರನೇ ಅಲೆ ಸಂಭವ; ಶಾಸಕರ ಸಭೆ ಕರೆಯಲಿ
"ಕೋವಿಡ್ ಮೂರನೇ ಅಲೆ ವಕ್ಕರಿಸುವ ಸಂಭವವಿದ್ದು, ರಾಜ್ಯ ಸರ್ಕಾರ ಕೂಡಲೇ ಎಲ್ಲ ಶಾಸಕರ ಸಭೆ ಕರೆದು ಚರ್ಚಿಸಬೇಕು," ಎಂದು ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಆಗ್ರಹಿಸಿದ್ದಾರೆ.

ಹಾಸನದ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, "ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಕೊರೊನಾ ಸಂಬಂಧ ಸಭೆ ನಡೆಸಿದ್ದಾರೆ. ಹೊಸ ಅಲೆ ಬರುತ್ತಿರುವ ಬಗ್ಗೆ ಸರ್ಕಾರ ಕೂಡಲೇ ಎಚ್ಚರಿಕೆ ವಹಿಸಬೇಕಿದೆ. ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆಗೆ ಏನು ಮೆಡಿಸಿನ್ ಬೇಕು ಎಂಬುದನ್ನು ಗಮನ ಹರಿಸಬೇಕು. ಸುಮ್ಮನೆ ಕೊನೆ ಘಳಿಗೆಯಲ್ಲಿ ಇದರ ಬಗ್ಗೆ ಓಡಾಡಬಾರದು," ಎಂದರು.
"ಕೆಲವು ಆಸ್ಪತ್ರೆಯಲ್ಲಿ ವೆಂಟಿಲೇಟರ್ ಯಂತ್ರಗಳು ಕೆಲಸ ಮಾಡಲ್ಲ, ಇದರ ಬಗ್ಗೆ ಗಮನಹರಿಸಿ. ಕೋವಿಡ್ ಮೂರನೇ ಅಲೆ ಬಗ್ಗೆ ಎಚ್ಚರ ವಹಿಸಬೇಕು. ಜಿಲ್ಲಾಮಟ್ಟದಲ್ಲಿ ಶಾಸಕರ ಸಭೆ ಕರೆದು ಏನು ಕ್ರಮಕೈಗೊಳ್ಳಬೇಕು ಎಂಬುದನ್ನು ಚರ್ಚಿಸಬೇಕು. ವೈದ್ಯರು ಮತ್ತು ನರ್ಸ್ಗಳನ್ನು ಕೆಲಸಕ್ಕೆ ನೇಮಿಸಿಕೊಳ್ಳಬೇಕು," ಎಂದು ಒತ್ತಾಯಿಸಿದರು.

ನಮ್ಮ ಹಾಸನ ಜಿಲ್ಲೆಯ ಅರಕಲಗೂಡು ಭಾಗದಲ್ಲಿ ಕೇರಳ ಗಡಿ ಹತ್ತಿರವಿದೆ. ಅದನ್ನೆಲ್ಲ ಸರ್ಕಾರ ಬಿಗಿ ಮಾಡಬೇಕು ಎಂದು ಎಚ್.ಡಿ. ರೇವಣ್ಣ ಸರ್ಕಾರಕ್ಕೆ ಕಿವಿಮಾತು ಹೇಳಿದರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications