"ಪ್ರಧಾನಿಗಳೇ.. ದಯಮಾಡಿ ಅಷ್ಟು ಕೆಳಮಟ್ಟಕ್ಕೆ ಇಳಿಯಬೇಡಿ''
ಹಾಸನ, ಮೇ 19: ದಯಮಾಡಿ ಪ್ರಧಾನಮಂತ್ರಿಗಳು ಕೆಳಮಟ್ಟಕ್ಕೆ ಇಳಿಯಬಾರದು ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಚಿವ ಎಚ್.ಡಿ ರೇವಣ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹಾಸನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ರೇವಣ್ಣ, ಜಿಲ್ಲಾಧಿಕಾರಿಗಳೊಂದಿಗಿನ ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಕಾನ್ಫರೆನ್ಸ್ ಬಗ್ಗೆ ಆಕ್ರೋಶ ಹೊರಹಾಕಿದರು.
ಜಿಲ್ಲಾಧಿಕಾರಿಗಳನ್ನು ಕೂರಿಸಿಕೊಂಡು ಅವಮಾನ ಮಾಡಿದ್ದೀರಿ. ನೀವು ಯಾವ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೀರಿ? ದಯಮಾಡಿ ಪ್ರಧಾನಿಗಳು ಕೆಳಮಟ್ಟಕ್ಕೆ ಇಳಿಯಬೇಡಿ. ಪ್ರಧಾನಿಗಳು ಎಲ್ಲ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಬೇಕಿತ್ತು. ಸಭೆ ಮಾಡಿ ಈ ರಾಜ್ಯದ ಬಗ್ಗೆ ಪ್ರಧಾನಿಗಳು ಏನು ತಿಳಿದುಕೊಂಡಿದ್ದಾರೆ ಎಂದು ರೇವಣ್ಣ ಖಾರವಾಗಿ ಪ್ರಶ್ನಿಸಿದರು.

ಬಿಬಿಎಂಪಿ ವಿಶೇಷ ಅಧಿಕಾರಿ ಆ ಗೌರವ್ ಗುಪ್ತಾ ಅವರ ಜೊತೆ ಮಾತನಾಡಿದ್ದಾರೆ. ಅವರಿಗೆ ಎಷ್ಟು ಫೋನ್ ಮಾಡಿದರೂ ಸ್ವೀಕರಿಸುವುದಿಲ್ಲ. ಅವರು ಫೋನ್ ಕರೆ ಸ್ವೀಕರಿಸಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಚಾಲೆಂಜ್ ಮಾಡಿದರು.

ಎರಡು ತಿಂಗಳು ತೆಗೆದುಕೊಂಡು ಸಿಎಂ ಯಡಿಯೂರಪ್ಪ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. 20 ಸಾವಿರ ರೈತರು ಅಂತಾರೆ. ಹಾಗಾದರೆ ಅವರನ್ನು ಗುರುತಿಸಿರುವವರು ಯಾರು? ನಮ್ಮ ರೈತರು ಸಂಕಷ್ಟದಲ್ಲಿದ್ದಾರೆ. ಇದು ತಾತ್ಕಾಲಿಕ ಪ್ಯಾಕೇಜ್. ಒಬ್ಬರಿಗೆ ತಿಂಗಳಿಗೆ ಕನಿಷ್ಟ 5 ಸಾವಿರದಂತೆ ಪ್ಯಾಕೇಜ್ ಕೊಡಬೇಕಿತ್ತು. ಸಚಿವರುಗಳು ಸ್ವಲ್ಪ ಲೂಟಿ ಮಾಡೋದು ನಿಲ್ಲಿಸಬೇಕಿತ್ತು ಎಂದು ವ್ಯಂಗ್ಯವಾಡಿದರು.

Recommended Video
ಒಂದು ತಿಂಗಳ ಕಾಲ ಲಾಕ್ಡೌನ್ ಮಾಡಬೇಕು. ಸರ್ಕಾರ ಲೂಟಿ ಮಾಡುವುದರಲ್ಲಿ ಶೇ.10ರಷ್ಟು ಬಡವರಿಗೆ ಕೊಡಿ. ಬಡವರಿಗೆ ಒಂದು ತಿಂಗಳು ಏನೆಲ್ಲ ಸಹಾಯ ಮಾಡಬೇಕು ಅದನ್ನು ಮಾಡಿ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಸಲಹೆ ನೀಡಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications