ಮಾಜಿ ಸಚಿವ ರೇವಣ್ಣ ಆಪ್ತ ಕೃಷ್ಣೇಗೌಡ ಕೊಲೆ ಆರೋಪಿಗಳ ಕೈಗೆ ಕೋಳ
ಹಾಸನ ಜನವರಿ 31: ಆಗಸ್ಟ್ 9ರಂದು ನಡೆದಿದ್ದ ಮಾಜಿ ಸಚಿವ ರೇವಣ್ಣ ಆಪ್ತ ಕೃಷ್ಣೇಗೌಡ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಐದು ತಿಂಗಳ ಬಳಿಕ ಪ್ರಕರಣದ ಪ್ರಮುಖ ಆರೋಪಿಗಳನ್ನು ಫೊಲೀಸರು ಬಂಧಿಸಿದ್ದಾರೆ. ಎ1 ಆರೋಪಿ ಯೋಗಾನಂದ(38), ಎ2 ಆರೋಪಿ ಅನಿಲ್(32) ಎಂದು ಗುರುತಿಸಲಾಗಿದೆ.
ಯೋಗಾನಂದ ಹಣಕಾಸು ವಿಚಾರದಲ್ಲಿ ವೈಶಮ್ಯದಿಂದ ಸುಫಾರಿ ಕೊಟ್ಟು ಕೊಲೆ ಮಾಡಿಸಿಧ್ದ ಆರೋಪಿಯಾಗಿದ್ದಾನೆ. ಕೃಷ್ಣೇಗೌಡ ಕೊಲೆ ಸಂಬಂಧ 14 ಆರೋಪಿಗಳ ವಿರುದ್ದ ಪೊಲೀಸರು ಕೇಸ್ ದಾಖಲಿಸಿದ್ದರು. 12 ಆರೋಪಿಗಳ ಬಂಧನವಾಗಿದ್ದರೂ ಪ್ರಕರಣದ ಪ್ರಮುಖ ಆರೋಪಿಗಳು ತಲೆ ಮರೆಸಿಕೊಂಡಿದ್ದರು.

ಸಿಐಡಿ ಹಾಗೂ ಹಾಸನ ಪೊಲೀಸರು ನಿನ್ನೆ ತುಮಕೂರು ಜಿಲ್ಲೆಯ ತುರುವೇಕರೆ ಬಳಿ ತೋಟದ ಮನೆಯಲ್ಲಿ ಅಡಗಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ರಾಜ್ಯ ಸರ್ಕಾರ ಎರಡು ತಿಂಗಳ ಹಿಂದೆ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು.
ಹಾಸನ ಹೊರವಲಯದ ಹೊಳೆನರಸೀಪುರ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ಆಗಸ್ಟ್ 9ರಂದು ಹಾಡು ಹಗಲೇ ಕೃಷ್ನೇಗೌಡ ಹತ್ಯೆ ಮಾಡಲಾಗಿತ್ತು. ಈ ಬಗ್ಗೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿತ್ತು. ಹಂತಕರು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಮಾಡಿದ್ದರು. ಕೊಲೆ ಬಳಿಕ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಪೊಲೀಸರು ಬಂಧಿಸಿದ್ದಾರೆ.
ಸಿಐಡಿ ಹಾಗು ಹಾಸನ ಪೊಲೀಸರಿಂದ ಜಂಟೀ ಆಪರೇಷನ್ ವೇಳೆ ಆರೋಪಿಗಳ ಬಂಧನವಾಗಿದೆ. ಬಂಧನದ ವೇಳೆ ಆರೋಪಿಗಳು ಪೊಲೀಸರ ಮೇಲೆ ಅಟ್ಯಾಕ್ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದರು. ಈ ಘಟನೆ ಸಂಬಂಧ ತುರುವೆಕೆರೆ ಠಾಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಹಾಗು ಆತ್ಮಹತ್ಯೆ ಯತ್ನ ಕೇಸ್ ದಾಖಲಾಗಿದೆ.

ವಿಷ ಕುಡಿದಂತೆ ನಾಟಕ ಮಾಡಿದ್ದ ಹಿನ್ನೆಲೆಯಲ್ಲಿ ಆರೋಪಿಗಳನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಮುಖ ಆರೋಪಿಗಳನ್ನು ಬಂಧಿಸುವ ಮೂಲಕ ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಬರ್ಬರ ಹತ್ಯೆ ಕೇಸ್ ಅನ್ನು ಹಾಸನ ಪೊಲೀಸರು ಬೇದಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications