Hassan: ಗುಡಿಸಲಿನಲ್ಲಿ ಮಲಗಿಸಿದ್ದಹೆಣ್ಣು ಮಗು ಕದ್ದೊಯ್ದ ಕಿಡಿಗೇಡಿಗಳು
ಹಾಸನ, ಮಾರ್ಚ್ 28: ಗುಡಿಸಲಿನಲ್ಲಿ ಮಲಗಿದ್ದ ಹೆಣ್ಣು ಮಗುವನ್ನು ಕಿಡಿಗೇಡಿಗಳು ಕಳ್ಳತನ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಳಲಿ ಗ್ರಾಮದಲ್ಲಿ ನಡೆದಿದೆ. ಸಂಜು ಮತ್ತು ರೋಹಿತ್ ದಂಪತಿ ಪುತ್ರಿ ನಾಪತ್ತೆಯಾಗಿರುವ ಮಗುವಾಗಿದೆ.
ಮಧ್ಯಪ್ರದೇಶ ರಾಜ್ಯದ ಸತ್ಮ ಜಿಲ್ಲೆಯ ವೀರ್ಸಿಂಗ್ಪುರ್ ತಾಲೂಕಿನ ಸಂಜು ಮತ್ತು ರೋಹಿತ್ ದಂಪತಿ ಕಳೆದ ಮೂರು ತಿಂಗಳ ಹಿಂದೆ ಮಳಲಿ ಗ್ರಾಮದ ಇಟ್ಟಿಗೆ ಕೆಲಸಕ್ಕಾಗಿ ಬಂದಿದ್ದರು. ನಾಲ್ಕು ವರ್ಷದ ಮಗ ಹಾಗೂ ಹದಿನಾಲ್ಕು ತಿಂಗಳ ಹೆಣ್ಣು ಮಗುವನ್ನು ಕರೆದುಕೊಂಡೇ ಕೆಲಸಕ್ಕೆ ತೆರಳುತ್ತಿದ್ದರು. ನಿನ್ನೆ ಕೆಲಸ ಮುಗಿಸಿ ಬಂದು ಮನೆಯಲ್ಲಿ ಪುಟ್ಟ ಕಂದಮ್ಮಗಳನ್ನು ಮಲಗಿಸಿ ಸ್ನಾನ ಮಾಡಲೆಂದು ನದಿಗೆ ತೆರಳಿದ್ದರು.

ಮಕ್ಕಳನ್ನು ಗುಡಿಸಿಲಿನಲ್ಲೇ ಬಿಟ್ಟು ಬಂದ ಕಾರಣ ದಂಪತಿ ಇಪ್ಪತ್ತು ನಿಮಿಷದೊಳಗೆ ಸ್ನಾನ ಮಾಡಿ ಮನೆಗೆ ಬೇಗನೇ ವಾಪಸ್ ಆಗಿದ್ದಾರೆ. ಈ ವೇಳೆ ಮನೆಯಲ್ಲಿ ನಾಲ್ಕು ವರ್ಷದ ಗಂಡು ಮಗು ಮಾತ್ರ ಇದ್ದು, ಕೀರ್ತಿ ಎಂಬ ಹೆಸರಿನ ಹದಿನಾಲ್ಕು ತಿಂಗಳ ಹೆಣ್ಣು ಮಗು ನಾಪತ್ತೆಯಾಗಿದೆ. ಪೋಷಕರು ಮೊದಲು ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಿ ಮಗು ಸಿಗದೇ ಇದ್ದಾಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಳೆದು ಹೋಗಿರುವ ಹೆಣ್ಣು ಮಗು ಹುಡುಕಿ ಕೊಡುವಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಕೂಟಿ-ಕಾರಿನ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ದಂಪತಿ ಸಾವು
ಸ್ಕೂಟಿ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರುಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ಗ್ರಾಮದಲ್ಲಿ ನಡೆದಿದೆ. ಅರ್ಜುನ್ ಹಾಗೂ ಶ್ವೇತಾ ಮೃತ ದಂಪತಿ ಎಂದು ಗುರುತಿಸಲಾಗಿದೆ. ಅರ್ಜುನ್ ಹಾಗೂ ಶ್ವೇತಾ ಸ್ಕೂಟಿಯಲ್ಲಿ ಮನೆಗೆ ತೆರಳುವ ವೇಳೆ ಅಪಘಾತ ನಡೆದಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅಜ್ಜಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications