ಶ್ರವಣಬೆಳಗೊಳ : ಡಿಸೆಂಬರ್ನಲ್ಲಿ ಬಾಹುಬಲಿ ಮೂರ್ತಿ ಸ್ವಚ್ಛತಾ ಕಾರ್ಯ
ಹಾಸನ, ನವೆಂಬರ್ 28 : ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿರುವ ಬಾಹುಬಲಿ ಮೂರ್ತಿಯನ್ನು ರಾಸಾಯನಿಕಗಳಿಂದ ಸ್ವಚ್ಛಗೊಳಿಸಲಾಗುತ್ತದೆ. 12 ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ಮುಗಿದ ಬಳಿಕ ಈ ಸ್ವಚ್ಛತೆ ಕಾರ್ಯ ನಡೆಸಲಾಗುತ್ತದೆ.
ಭಾರತೀಯ ಪ್ರಾಚ್ಯವಸ್ತು ಸರ್ವೇಕ್ಷಣಾಲಯ (ಎಎಸ್ಐ) ಈ ರಾಸಾಯನಿಕಗಳಿಂದ ಮೂರ್ತಿಯನ್ನು ಸ್ವಚ್ಛಗೊಳಿಸಲಿದೆ. ಡಿಸೆಂಬರ್ ತಿಂಗಳಿನಲ್ಲಿ ಈ ಕಾರ್ಯವನ್ನು ನಡೆಸಲು ಎಎಸ್ಐ ನಿರ್ಧರಿಸಿದ್ದು, ಅಗತ್ಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ.
ದೇಶದ 10 'ಸ್ವಚ್ಛ ಐಕಾನಿಕ್' ಸ್ಥಳಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಶ್ರವಣಬೆಳಗೊಳ
ಪ್ರಾಚ್ಯವಸ್ತು ಸರ್ವೇಕ್ಷಣಾಲಯದ ವಿಜ್ಞಾನ ವಿಭಾಗಕ್ಕೆ ಈಗಾಗಲೇ ಮೂರ್ತಿಯ ಸ್ವಚ್ಛತೆ ಕಾರ್ಯವನ್ನು ಕೈಗೊಳ್ಳಬೇಕು ಎಂದು ಪತ್ರ ಬರೆಯಲಾಗಿದೆ. ಈ ಸ್ವಚ್ಛತಾ ಕಾರ್ಯದ ಜೊತೆಗೆ ಮೂರ್ತಿಯ ಬಗ್ಗೆ ಅಧ್ಯಯನವನ್ನು ನಡೆಸಲಾಗುತ್ತದೆ.
ಶ್ರವಣಬೆಳಗೊಳ: ವಿರಾಗಿಯನ್ನು ಭಜಿಸಿದ ಮಾನಿನಿಯರು
2018ರ ಫೆಬ್ರವರಿ 7ರಂದು ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಚಾಲನೆ ನೀಡಿದ್ದರು. ಫೆ.26ರಂದು ಸಮಾರೋಪ ಸಮಾರಂಭ ನಡೆದಿತ್ತು.
ಬಾಹುಬಲಿಗಾಗಿ 11.60 ಕೋಟಿ ದಾನ ಮಾಡಿದ ರಾಜಸ್ತಾನಿ ಕುಟುಂಬ
ಹೊಸ ಮೆಟ್ಟಿಲು ನಿರ್ಮಾಣ : ಚಂದ್ರಗಿರಿ ಬೆಟ್ಟವನ್ನು ಏರಲು ಮತ್ತೊಂದು ಜೋಡಿ ಮೆಟ್ಟಿಲನ್ನು ನಿರ್ಮಾಣ ಮಾಡಲಾಗುತ್ತದೆ. ಪ್ರಾಚ್ಯವಸ್ತು ಸರ್ವೇಕ್ಷಣಾಲಯ ಮೆಟ್ಟಿಲು ನಿರ್ಮಾಣದ ಕೆಲಸವನ್ನು ಈಗಾಗಲೇ ಆರಂಭಿಸಿದೆ.