ಅಂತರ ಕಾಲೇಜು ರಾಜ್ಯ ವಾಲಿಬಾಲ್ ಹಾಗೂ ಚೆಸ್ ಪಂದ್ಯ
ಅಂತರ ಕಾಲೇಜು ಕ್ರೀಡಾಕೂಟದಲ್ಲಿ ಹಾಸನ ಕೃಷಿ ಕಾಲೇಜಿನ ವಿದ್ಯಾರ್ಥಿಗಳು ಚಾಂಪಿಯನ್. ವಾಲಿಬಾಲ್, ಚೆಸ್ ವಿಭಾಗಗಳಲ್ಲಿ ಮೊದಲ ಸ್ಥಾನ.
ಹಾಸನ, ಸೆಪ್ಟೆಂಬರ್ 13: ಮಂಡ್ಯದಲ್ಲಿ ಸೆ. 9 ರಿಂದ 11ರವರೆಗೆ ನಡೆದ ಅಂತರ ಕಾಲೇಜು ವಾಲಿಬಾಲ್ ಹಾಗೂ ಚೆಸ್ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದ ಕೃಷಿ ಮಹಾವಿದ್ಯಾಲಯ ಹಾಸನದ ಮಹಿಳೆಯರ ತಂಡ ವಾಲಿಬಾಲ್ ಹಾಗೂ ಚೆಸ್ ವಿಭಾಗಗಳಲ್ಲಿ ಮೊದಲ ಸ್ಥಾನ ಪಡೆದಿದೆ. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ 5 ಕಾಲೇಜುಗಳು ಭಾಗವಹಿಸಿದ್ದವು.
ಕಬ್ಬಡಿಯಲ್ಲಿ ಹಿಮ್ಸ್ ಪ್ರಥಮ
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸೆ. ೧೨ ರಂದು ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಮೈಸೂರು ವಲಯ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಮೈಸೂರು ವಲಯಗಳಿಂದ 9 ಜಿಲ್ಲೆಗಳ ವಿವಿಧ ಕಾಲೇಜುಗಳ ಕ್ರೀಡಾ ತಂಡಗಳು ಭಾಗವಹಿಸಿದ್ದವು.

ಪಂದ್ಯಾವಳಿಯಲ್ಲಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ತಂಡವು ಮೈಸೂರು ವಲಯ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನಗಳಿಸಿದರೆ, ಎ.ಜೆ. ಶೆಟ್ಟಿ ಮೇಡಿಕಲ್ ಕಾಲೇಜು ಮಂಗಳೂರು ತಂಡವು ದ್ವಿತೀಯ ಪಡೆದುಕೊಂಡಿತು.
ವಿಜೇತ ತಂಡಗಳಿಗೆ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ. ರವಿಕುಮಾರ್ ಬಿ.ಸಿ. ಮೈಸೂರು ವಲಯದ ಕ್ರೀಡಾ ವಿಭಾಗದ ಮುಖ್ಯ ಸಂಯೋಜನಾಧಿಕಾರಿಗಳಾದ ಡಾ. ಎಸ್.ಎಮ್. ಸುರೇಶ್ ಇವರು ಪ್ರಶಸ್ತಿ ಮತ್ತು ಟ್ರೋಫಿಗಳನ್ನು ನೀಡಿ ಅಭಿನಂದಿಸಿದರು.

ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿದ ತಂಡದ ನಾಯಕ ಅಭಿಷೇಕ್ ಗೌಡ ಮತ್ತು ಆಟಗಾರರು, ದೈಹಿಕ ಶಿಕ್ಷಣ ನಿರ್ದೇಶಕ ಲತೀಶ್ ಹಾಗೂ ಕ್ರೀಡಾ ಸಮಿತಿಯ ಸದಸ್ಯರುಗಳು ಹಾಜರಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications