ಹಾಸನದಲ್ಲಿ ವರುಣನ ಆರ್ಭಟ: ಮಳೆಯಲ್ಲೇ ಹಾಸನಾಂಬೆ ದರ್ಶನ, ಮುರಿದು ಬಿದ್ದ ಜಾತ್ರೆಯ ಸ್ವಾಗತ ಕಮಾನು
ಹಾಸನ, ನವೆಂಬರ್ 08: ಹಾಸನ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ನಡುವೆಯೂ ಭಕ್ತರು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ. ಹಾಸನಾಂಬೆ ದೇವಿ ದರ್ಶನದ 6ನೇ ದಿನವಾದ ಇಂದು ಭಕ್ತಸಾಗರ ಹರಿದುಬಂದಿದ್ದು, ಸುರಿಯುತ್ತಿರುವ ಮಳೆಯಲ್ಲಿಯೇ ಭಕ್ತರು ದೇವಿ ದರ್ಶನ ಮಾಡುತ್ತಿದ್ದಾರೆ.
ದೇವಾಲಯದ ಸುತ್ತಮುತ್ತಲಿನ ಭಾಗಗಳಲ್ಲಿ ಧಾರಕಾರ ಮಳೆಯಾಗುತ್ತಿದ್ದರೂ, ದೇವಾಲಯದ ಮುಂದೆ ಹಚ್ಚಿದ್ದ ಕರ್ಪೂರ ಆರದೇ ಉರಿಯುತ್ತಿದೆ. ಪವಾಡ ಸದೃಶವೆಂಬಂತೆ ಭಕ್ತರೊಬ್ಬರು ದೇವಾಲಯದ ಮುಂದೆ ಹಚ್ಚಿದ್ದ ಮಳೆಯಲ್ಲಿಯೂ ಕರ್ಪೂರ ಉರಿಯುತ್ತಿದೆ. ಮಳೆಯ ನೀರು ಹರಿಯುತ್ತಿದ್ದರೂ, ಮಳೆ ಹನಿಗಳು ಬೀಳುತ್ತಿದ್ದರೂ ಕರ್ಪೂರ ಆರದನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ.

ಹಾಸನದಲ್ಲಿ ಸುರಿದ ಭಾರೀ ಮಳೆಯಿಂದ ಅನಾಹುತವೊಂದು ಸಂಭವಿಸಿದೆ. ಹಾಸನಾಂಬ ಜಾತ್ರೆ ಹಿನ್ನಲೆಯಲ್ಲಿ ಹಾಕಿದ್ದ ಸ್ವಾಗತ ಕಮಾನು ಕಾರಿನ ಮೇಲೆ ಉರುಳಿ ಬಿದ್ದಿದೆ. ಹಾಸನ ನಗರದ ಚನ್ನಪಟ್ಟಣ ವೃತ್ತದಲ್ಲಿ ಸ್ವಾಗತ ಕಮಾನು ಉರುಳಿ ಬಿದ್ದಿದ್ದು, ಕಾರು ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳದಲ್ಲಿದ್ದವರು ಕಾರಿನ ಮೇಲಿನ ಸ್ವಾಗತ ಕಾಮಾನು ತೆರವುಗೊಳಿಸಿದ್ದಾರೆ.
ಧಾರಾಕಾರ ಮಳೆಯಿಂದ ಗೋಡೆ ಕುಸಿದು ವ್ಯಕ್ತಿ ಸಾವು
ಚಿಕ್ಕಮಗಳೂರು : ಬಯಲುಸೀಮೆ ಭಾಗದಲ್ಲಿ ಸುರಿದ ಧಾರಾಕಾರ ಮಳೆಯಿಂದ ಗೋಡೆ ಕುಸಿದು ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮಚ್ಚೇರಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಚ್ಚೇರಿ ಕೋಡಿಹಳ್ಳಿ ಗ್ರಾಮದ 80 ವರ್ಷದ ಲಚ್ಚಾನಾಯ್ಕ ಗೋಡೆ ಕುಸಿತದಿಂದ ಸಾವನಪ್ಪಿರುವ ವ್ಯಕ್ತಿ ಆಗಿದ್ದಾರೆ.
ಇತ್ತೀಚಿಗೆ ಸುರಿದ ಧಾರಾಕಾರ ಮಳೆಗೆ ಲಚ್ಚಾನಾಯ್ಕ ಮನೆಯ ಗೋಡೆ ಕುಸಿತವಾಗಿದೆ. ಈ ವೇಳೆ ಲಚ್ಚಾನಾಯ್ಕ ಶೌಚಾಲಯಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಕುಸಿದ ಗೋಡೆ ಕುಸಿದ ಪರಿಣಾಮ ಸ್ಥಳದಲ್ಲೇ ಲಚ್ಚಾನಾಯ್ಕ ಸಾವನಪ್ಪಿದ್ದಾರೆ. ಇನ್ನು ಸ್ಥಳಕ್ಕೆ ಸ್ಥಳೀಯ ಅಧಿಕಾರಿ ಹಾಗೂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications