ಹಾಸನದಲ್ಲಿ ವರುಣನ ಆರ್ಭಟ: ಮಳೆಯಲ್ಲೇ ಹಾಸನಾಂಬೆ ದರ್ಶನ, ಮುರಿದು ಬಿದ್ದ ಜಾತ್ರೆಯ ಸ್ವಾಗತ ಕಮಾನು
ಹಾಸನ, ನವೆಂಬರ್ 08: ಹಾಸನ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ನಡುವೆಯೂ ಭಕ್ತರು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ. ಹಾಸನಾಂಬೆ ದೇವಿ ದರ್ಶನದ 6ನೇ ದಿನವಾದ ಇಂದು ಭಕ್ತಸಾಗರ ಹರಿದುಬಂದಿದ್ದು, ಸುರಿಯುತ್ತಿರುವ ಮಳೆಯಲ್ಲಿಯೇ ಭಕ್ತರು ದೇವಿ ದರ್ಶನ ಮಾಡುತ್ತಿದ್ದಾರೆ.
ದೇವಾಲಯದ ಸುತ್ತಮುತ್ತಲಿನ ಭಾಗಗಳಲ್ಲಿ ಧಾರಕಾರ ಮಳೆಯಾಗುತ್ತಿದ್ದರೂ, ದೇವಾಲಯದ ಮುಂದೆ ಹಚ್ಚಿದ್ದ ಕರ್ಪೂರ ಆರದೇ ಉರಿಯುತ್ತಿದೆ. ಪವಾಡ ಸದೃಶವೆಂಬಂತೆ ಭಕ್ತರೊಬ್ಬರು ದೇವಾಲಯದ ಮುಂದೆ ಹಚ್ಚಿದ್ದ ಮಳೆಯಲ್ಲಿಯೂ ಕರ್ಪೂರ ಉರಿಯುತ್ತಿದೆ. ಮಳೆಯ ನೀರು ಹರಿಯುತ್ತಿದ್ದರೂ, ಮಳೆ ಹನಿಗಳು ಬೀಳುತ್ತಿದ್ದರೂ ಕರ್ಪೂರ ಆರದನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ.

ಹಾಸನದಲ್ಲಿ ಸುರಿದ ಭಾರೀ ಮಳೆಯಿಂದ ಅನಾಹುತವೊಂದು ಸಂಭವಿಸಿದೆ. ಹಾಸನಾಂಬ ಜಾತ್ರೆ ಹಿನ್ನಲೆಯಲ್ಲಿ ಹಾಕಿದ್ದ ಸ್ವಾಗತ ಕಮಾನು ಕಾರಿನ ಮೇಲೆ ಉರುಳಿ ಬಿದ್ದಿದೆ. ಹಾಸನ ನಗರದ ಚನ್ನಪಟ್ಟಣ ವೃತ್ತದಲ್ಲಿ ಸ್ವಾಗತ ಕಮಾನು ಉರುಳಿ ಬಿದ್ದಿದ್ದು, ಕಾರು ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳದಲ್ಲಿದ್ದವರು ಕಾರಿನ ಮೇಲಿನ ಸ್ವಾಗತ ಕಾಮಾನು ತೆರವುಗೊಳಿಸಿದ್ದಾರೆ.
ಧಾರಾಕಾರ ಮಳೆಯಿಂದ ಗೋಡೆ ಕುಸಿದು ವ್ಯಕ್ತಿ ಸಾವು
ಚಿಕ್ಕಮಗಳೂರು : ಬಯಲುಸೀಮೆ ಭಾಗದಲ್ಲಿ ಸುರಿದ ಧಾರಾಕಾರ ಮಳೆಯಿಂದ ಗೋಡೆ ಕುಸಿದು ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮಚ್ಚೇರಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಚ್ಚೇರಿ ಕೋಡಿಹಳ್ಳಿ ಗ್ರಾಮದ 80 ವರ್ಷದ ಲಚ್ಚಾನಾಯ್ಕ ಗೋಡೆ ಕುಸಿತದಿಂದ ಸಾವನಪ್ಪಿರುವ ವ್ಯಕ್ತಿ ಆಗಿದ್ದಾರೆ.
ಇತ್ತೀಚಿಗೆ ಸುರಿದ ಧಾರಾಕಾರ ಮಳೆಗೆ ಲಚ್ಚಾನಾಯ್ಕ ಮನೆಯ ಗೋಡೆ ಕುಸಿತವಾಗಿದೆ. ಈ ವೇಳೆ ಲಚ್ಚಾನಾಯ್ಕ ಶೌಚಾಲಯಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಕುಸಿದ ಗೋಡೆ ಕುಸಿದ ಪರಿಣಾಮ ಸ್ಥಳದಲ್ಲೇ ಲಚ್ಚಾನಾಯ್ಕ ಸಾವನಪ್ಪಿದ್ದಾರೆ. ಇನ್ನು ಸ್ಥಳಕ್ಕೆ ಸ್ಥಳೀಯ ಅಧಿಕಾರಿ ಹಾಗೂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications