Hasanamba 2023: ಹಾಸನಾಂಬೆ ದರ್ಶನ ಸಂಪನ್ನ, ಶಾಸ್ತ್ರೋತ್ರವಾಗಿ ಗರ್ಭಗುಡಿ ಬಾಗಿಲು ಕ್ಲೋಸ್
ಹಾಸನ, ನವೆಂಬರ್ 15: ಈ ವರ್ಷದ ಹಾಸನಾಂಬೆ ದರ್ಶನ ಇಂದು ಸಂಪನ್ನವಾಗಿದ್ದು, ಮಧ್ಯಾಹ್ನ 12:23ಕ್ಕೆ ದೇವಾಲಯದ ಗರ್ಭಗುಡಿಯ ಬಾಗಿಲು ಮುಚ್ಚಲಾಗಿದೆ. ನವೆಂಬರ್ 2ರಂದು ಆರಂಭವಾಗಿದ್ದ ಹಾಸನಾಂಬ ದರ್ಶನ ಇಂದು ಮುಕ್ತಾಯವಾಗಿದೆ.
ಕೊನೆ ಹಂತದಲ್ಲಿ ಉಸ್ತುವಾರಿ, ಸಚಿವರು ಶಾಸಕರು ಹಾಗು ಗಣ್ಯರು ಹಾಸನಾಂಬೆಯ ದರ್ಶನ ಪಡೆದಿದ್ದು, ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಅವರ ಸಮ್ಮುಖದಲ್ಲೇ ಗರ್ಭಗುಡಿ ಬಾಗಿಲು ಬಂದ್ ಮಾಡಲಾಗಿದೆ. ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವು ಮಾಡಿ ಪೂಜೆ ಬಳಿಕ ಎಲ್ಲರ ಮುಂದೆ ಬೀಗ ಪ್ರದರ್ಶನ ಮಾಡಿ ಬೀಗ ಹಾಕಿದ ಪ್ರಧಾನ ಅರ್ಚಕ ನಾಗರಾಜ್ ಬಳಿಕ ಗರ್ಭಗುಡಿ ಬಾಗಿಲಿಗೆ ಪೂಜೆ ಸಲ್ಲಿಸಿದ್ದಾರೆ.

ಈ ವರ್ಷ ದ 14 ದಿನಗಳ ಹಾಸನಾಂಬೆ ಉತ್ಸವಕ್ಕೆ ವಿದ್ಯುಕ್ತವಾಗಿ ತೆರೆ ಬಿದ್ದಿದ್ದು, ಕಳೆದ 12 ದಿನಗಳಲ್ಲಿ 13 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಈ ವರ್ಷ ನವೆಂಬರ್ 2ರ ಗುರುವಾರ ದೇವಿಯ ಗರ್ಭಗುಡಿ ಬಾಗಿಲನ್ನು ತೆರೆದು ನವೆಂಬರ್ 3ರಿಂದ ಸಾರ್ವಜನಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಭಕ್ತರ ದರ್ಶನದ 12ನೇ ದಿನವಾದ ಮಂಗಳವಾರ ಅಹೋರಾತ್ರಿ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಭಕ್ತರ ದಂಡೇ ಹಾಸನಾಂಬೆಯ ದರ್ಶನಕ್ಕೆ ಹರಿದು ಬಂದಿತ್ತು.
ಇದುವರೆಗೆ ಹಾಸನಾಂಬೆ ಇತಿಹಾಸದಲ್ಲಿ ದಾಖಲೆ ಎಂಬಂತೆ ಈ ಬಾರಿ 12 ದಿನ ಪೂರ್ಣಗೊಂಡ ಬಳಿಕ 13 ಲಕ್ಷದ 40 ಸಾವಿರ ಭಕ್ತರು ಹಾಸನಾಂಬೆ ದರ್ಶನ ಪಡೆದುಕೊಂಡಿದ್ದಾರೆ. ರಾಜ್ಯ ಸರ್ಕಾರ ನೀಡಿರುವ ಶಕ್ತಿ ಯೋಜನೆಯಿಂದ ಈ ಬಾರಿ ಮಹಿಳಾ ಭಕ್ತರ ಸಂಖ್ಯೆ ಕೂಡ ಹೆಚ್ಚಾಗಿತ್ತು. ಇನ್ನು ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಆದಾಯ ಬಂದಿದೆ. ಈವರೆಗೆ ಟಿಕೆಟ್ ಹಾಗೂ ಲಡ್ಡು ಮಾರಾಟದಿಂದ ಐದೂವರೆ ಕೋಟಿ ಆದಾಯ ಬಂದಿದೆ. 1 ಸಾವಿರ ಟಿಕೆಟ್ ಮಾರಾಟದಿಂದ 2,80,52,000 ರೂ. 300 ರೂ, ಟಿಕೆಟ್ ಮಾರಾಟದಲ್ಲಿ 2,15,56,500 ರೂ, ಲಡ್ಡು ಮಾರಾಟದಲ್ಲಿ 56,11,520 ರೂ ಸಂಗ್ರಹವಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications