ಹಾಸನಾಂಬ ಜಾತ್ರೆ; ಮೂರು ದಿನದಲ್ಲಿ ಸಂಗ್ರಹವಾದ ಹಣ ಎಷ್ಟು? ಇಲ್ಲಿದೆ ವಿವರ
ಹಾಸನ, ಅಕ್ಟೋಬರ್, 19; ಪ್ರಸಿದ್ಧ ಹಾಸನಾಂಬ ದೇವಿಯ ವಿಶೇಷ ದರ್ಶನದಿಂದ ಕೇವಲ ಮೂರು ದಿನಗಳಲ್ಲಿ 42.78 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಕಾಣಿಕೆ ಹುಂಡಿಗೆ ಭಕ್ತರು ಇನ್ನು ಕಾಣಿಕೆಯನ್ನು ಅರ್ಪಿಸುತ್ತಲೇ ಇದ್ದಾರೆ.
ವರ್ಷಕ್ಕೊಮ್ಮೆ ದರ್ಶನ ಕಲ್ಪಿಸುವ ಹಾಸನಂಬೆಯ ಗರ್ಭದ ಗುಡಿ ಬಾಗಿಲು ಅಕ್ಟೋಬರ್ 13ರಂದು ತೆರೆದಿತ್ತು. ಆದರೆ ಭಕ್ತರಿಗೆ ದೇವಿ ದರ್ಶನ ಮಡಲು ಅಕ್ಟೋಬರ್ 14ರಿಂದ ಅವಕಾಶ ಮಾಡಿಕೊಡಲಾಗಿತ್ತು. ಸರತಿ ಸಾಲಿನಲ್ಲಿ ಹೆಚ್ಚುಕಾಲ ನಿಲ್ಲಲು ಆಗಲ್ಲ ಎನ್ನುವವರಿಗಗಿ ತಲಾ ಒಂದು ಸಾವಿರ ರೂಪಾಯಿ ಶುಲ್ಕ ವಿಧಿಸಿ ವಿಶೇಷ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕಳೆದ ಮೂರು ದಿನದಲ್ಲಿ ಅಂದರೆ ಅಕ್ಟೋಬರ್ 14ರಂದು 4.99 ಲಕ್ಷ ರೂಪಾಯಿ, ಅಕ್ಟೋಬರ್ 15ರಂದು 3.31 ಲಕ್ಷ ರೂಪಾಯಿ, ಅಕ್ಟೋಬರ್ 16ರಂದು 8.35 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಅದೇ ರೀತಿ ತಲಾ 300 ರೂಪಾಯಿ ವಿಶೇಷ ದರ್ಶನದಿಂದ ಅಕ್ಟೋಬರ್ 14 ರಂದು 4.30 ಲಕ್ಷ ರೂಪಾಯಿ, ಅಕ್ಟೋಬರ್ 15 ರಂದು 4.49 ಲಕ್ಷ ರೂಪಾಯಿ, ಅಕ್ಟೋಬರ್ 16 ರಂದು 1.20 ಲಕ್ಷ ರೂಪಾಯಿ ಸಂಗ್ರಹವಾಗಿದೆ.
ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಓಪನ್
ಗಣ್ಯರು ತಮ್ಮ ಕುಟುಂಬದ ಜೊತೆ ಪ್ರತಿವರ್ಷ ಆಗಮಿಸುತ್ತಿದ್ದು, ಅದೇ ರೀತಿ ಈ ಬಾರಿಯೂ ಬಂದಿದ್ದೇವೆ ಎಂದರು. ಶಾಸಕರು, ಸಚಿವರು, ನ್ಯಾಯಾಧೀಶರು, ವಿಧಾನಸಭೆಯ ಹಿರಿಯ ಅಧಿಕಾರಿಗಳು ಹಾಸನಾಂಬ ದರ್ಶನಕ್ಕೆ ಬಂದಿದ್ದಾರೆ. ಗಣ್ಯರ ಭೇಟಿ ವೇಳೆ ಸಾಮಾನ್ಯ ಭಕ್ತರ ದರ್ಶನಕ್ಕೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿದ್ದ ಕಾರಣ ಗಲಾಟೆ, ನೂಕು ನುಗ್ಗಲಿಗೆ ಆಸ್ಪದವಿಲ್ಲದಂತಾಗಿದೆ. ಎಷ್ಟೇ ಮುನ್ನೆಚ್ಚರಿಕೆ ವಹಿಸಿದ್ದರೂ ಕೂಡ ರಾಜ್ಯದ ವಿವಿಧ ಮೂಲೆಗಳಿಂದ ಭಕ್ತರು ಹರಿದುಬಂದಿದ್ದರು. ಭಕ್ತರು ಯಾವುದೇ ಘರ್ಷಣೆ ಇಲ್ಲದೇ ನಾಲ್ಕರಿಂದ ಐದು ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ಗಣ್ಯರು ತಂಡೋಪ ತಂಡವಾಗಿ ಆಗಮಿಸಿದ್ದನ್ನು ಕಂಡ ಸಾಮಾನ್ಯ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಗಮನಾರ್ಹವಾಗಿದೆ.

ವಿಶೇಷವಾಗಿ ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ತಾಯಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಅಕ್ಟೋಬರ್ 13ರಂದು ಚಾಲನೆ ದೊರೆತಿತ್ತು. ಆಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12:12ಕ್ಕೆ ಅರಸು ವಂಶಸ್ಥ ನಂಜರಾಜೆ ಅರಸ್ ಸಂಪ್ರದಾಯದಂತೆ ಬಾಳೆ ಕಂಬ ಕಡಿದ ನಂತರ ಹಲವು ಗಣ್ಯರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು.

ಹಚ್ಚಿದ ದೀಪ ಹಾರುವುದಿಲ್ಲವೆಂಬ ನಂಬಿಕೆ
ಗರ್ಭಗುಡಿ ಬಾಗಿಲು ತೆರೆದ ವೇಳೆ ಕಳೆದ ವರ್ಷ ಹಚ್ಚಿದ್ದ ದೀಪ ಉರಿಯುತ್ತಿದ್ದು, ಹೂವು ಬಾಡಿರಲಿಲ್ಲ. ನೈವೇದ್ಯ ಹಳಸಿರಲಿಲ್ಲ. ಈ ವಿಶೇಷ ಸಂದರ್ಭಕ್ಕೆ ಸಚಿವರಾದ ಕೆ.ಗೋಪಾಲಯ್ಯ, ಶಾಸಕ ಪ್ರೀತಂಗೌಡ, ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಹಲವರು ಸಾಕ್ಷಿಯಾದರು. ಮೊದಲ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದರು. ಆದರೂ ಕೂಡ ಭಕ್ತರು ದೇವಾಲಯದ ಬಳಿ ಜಮಾಯಿಸಿದ್ದರು. ಕೆಲವರು ಸರತಿ ಸಾಲಿನಲ್ಲಿ ನಿಂತಿದ್ದರು. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಹಾಸನಾಂಬೆ ಹಲವು ಪವಾಡ ಸದೃಶ ಸಂಗತಿಗಳನ್ನು ಮೈಗೂಡಿಸಿಕೊಂಡಿದ್ದಾಳೆ. ಪ್ರತಿ ವರ್ಷ ಗರ್ಭಗುಡಿ ಬಾಗಿಲು ಹಾಕುವಾಗ ಹಚ್ಚಿದ ಹಣತೆ, ಇಟ್ಟ ನೈವೇದ್ಯ, ಮುಡಿಸಿದ ಹೂ ಬಾಡುವುದಿಲ್ಲ ಎಂಬ ನಂಬಿಕೆ ಹಿಂದಿನಿಂದಲೂ ಇದೆ. ಜೊತೆಗೆ ಬೇಡಿದ ಇಷ್ಟಾರ್ಥಗಳನ್ನು ಅಧಿದೇವತೆ ಈಡೇರಿಸುತ್ತಾಳೆ ಎಂಬ ನಂಬಿಕೆ ಭಕ್ತರದ್ದಾಗಿದೆ. ಜಿಲ್ಲೆ ಮಾತ್ರವಲ್ಲದೆ ರಾಜ್ಯ, ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ದೇವಿ ದರ್ಶನಕ್ಕಾಗಿ ಆಗಮಿಸುತ್ತಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications