Hasanamba 2023: ನವೆಂಬರ್ 2ರಿಂದ ಹಾಸನಾಂಬೆಯ ದರ್ಶನ ಆರಂಭ
ಹಾಸನ, ಆಗಸ್ಟ್ 04: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಐತಿಹಾಸಿಕ ಹಾಸನಾಂಬ ದೇವಾಲಯದ ಬಾಗಿಲು ಈ ವರ್ಷ ನವೆಂಬರ್ 2ರಂದು ಸಂಪ್ರದಾಯ ಬದ್ಧವಾಗಿ ತೆರೆಯಲಿದೆ. ಇತಿಹಾಸ ಪ್ರಸಿದ್ಧ ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವ ನವೆಂಬರ್ 2ರಿಂದ ಪ್ರಾರಂಭವಾಗಲಿದೆ ಎಂದು ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ನಿರ್ವಹಿಸುವಂತೆ ಸೂಚನೆ ನೋಡಿದರು.

2023 ಪ್ರಸಕ್ತ ವರ್ಷದಲ್ಲಿ ವೆಂಬರ್ 2ರಂದು ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತಿದ್ದು, ದೇವರ ದರ್ಶನಕ್ಕೆ ರಾಜ್ಯದ ವಿವಿಧ ಭಾಗದಿಂದ ಜನರು ಆಗಮಿಸುತ್ತಾರೆ. ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ದರ್ಶನ ಪಡೆಯಲು ಅಗತ್ಯ ಸಿದ್ಧತೆಗಳನ್ನು ಮಾಡಬೇಕು ಎಂದು ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ತಿಳಿಸಿದರು.
ಮೂರು ತಿಂಗಳ ಕಾಲಾವಕಾಶವಿದೆ. ಅಧಿಕಾರಿಗಳು ಈಗಿನಿಂದಲೇ ಕೆಲಸಗಳಿಗೆ ನಿಯಮಾನುಸಾರ ಟೆಂಡರ್ ಕರೆದು ಕರ್ತವ್ಯ ನಿರ್ವಹಿಸಬೇಕು, ನಗರ ಸಭೆಯಿಂದ ರಸ್ತೆಗಳ ದುರಸ್ತಿ, ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್ ದೀಪಾಲಂಕಾರ, ಆಹ್ವಾನ ಪತ್ರಿಕೆಗಳ ಮುದ್ರಣ, ವಿಐಪಿ ಹಾಗೂ ವಿವಿಐಪಿ ಪಾಸ್ ವಿತರಣೆ, ಭಕ್ತಾಧಿಗಳು ವಿಶೇಷ ದರ್ಶನ ಪಡೆಯಲು ಟಿಕೆಟ್ ವ್ಯವಸ್ಥೆ, ಲಾಡು ಪ್ರಸಾದ, ದೊನ್ನೆ ಪ್ರಸಾದ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ ಕರ್ತವ್ಯ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

2023ರ ನವೆಂಬರ್ 2ರಿಂದ ನವೆಂಬರ್ 15ರವರೆಗೆ ಹಾಸನಾಂಬೆಯ ಜಾತ್ರಾ ಮಹೋತ್ಸವ ನಡೆಯಲಿದ್ದು, 14 ದಿನಗಳ ಕಾಲ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಳೆದ ವರ್ಷ ಅಕ್ಟೋಬರ್ 13 ರಿಂದ ಅಕ್ಟೋಬರ್ 27 ರವರೆಗೆ ದೇಗುಲ ಬಾಗಿಲು ತೆರೆದಿದ್ದು, ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ಎಂಟನೇ ದಿನ ಜಿಲ್ಲಾಡಳಿತ ದೇವಿಯ ದರ್ಶನದ ಅವಧಿ ವಿಸ್ತರಣೆ ಮಾಡಲಾಗಿತ್ತು, ಪ್ರತಿ ದಿನ 30 ರಿಂದ 50 ಸಾವಿರ ಭಕ್ತರಂತೆ ಸುಮಾರು ಆರು ಲಕ್ಷಕ್ಕೂ ಅಧಿಕ ಭಕ್ತರು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಆಗಮಿಸಿ ಹಾಸನಾಂಬೆಯ ದರ್ಶನ ಪಡೆದಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications