ಹಾಸನಾಂಬ ಗರ್ಭಗುಡಿ ಬಾಗಿಲು ಓಪನ್; ಈ ಬಾರಿ ಜಾತ್ರಾ ಉತ್ಸವ ಹೇಗಿದೆ? ಇಲ್ಲಿದೆ ಮಾಹಿತಿ
ಹಾಸನ, ಅಕ್ಟೋಬರ್, 13: ಗುರುವಾರ ಮಧ್ಯಾಹ್ನ 12:12ಕ್ಕೆ ಸರಿಯಾಗಿ ಹಾಸನಾಂಬ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗಿದೆ. ವರ್ಷದ ಬಳಿಕ ಹಾಸನಾಂಬೆ ತಾಯಿ ದರ್ಶನ ಭಾಗ್ಯ ಕರುಣಿಸಿದ್ದಾಳೆ.
ಉಸ್ತುವಾರಿ ಸಚಿವ ಗೋಪಾಲಯ್ಯ, ಶಾಸಕ ಪ್ರೀತಂಗೌಡ, ಜಿಲ್ಲಾಧಿಕಾರಿ ಎಂ.ಎಸ್.ಅರ್ಚನ, ಎಸ್ಪಿ ಹರಿರಾಂಶಂಕರ್ ಸೇರಿದಂತೆ ಅಧಿಕಾರಿಗಳ ಸಮ್ಮುಖದಲ್ಲಿ ಪುರೋಹಿತರು ಶಾಸ್ತ್ರೋಕ್ತವಾಗಿ ಹಾಸನಾಂಬ ಗರ್ಭಗುಡಿಯ ಬಾಗಿಲನ್ನು ತೆರೆದಿದ್ದಾರೆ. ಸಂಪ್ರದಾಯದ ಪ್ರಕಾರ ಅರಸು ಮನೆತನದವರು ಬಾಳೆಕಂಬ ಕತ್ತರಿಸಿದ ನಂತರ ದೇವಾಲಯದ ಬಾಗಿಲನ್ನು ತೆರೆದಿದ್ದಾರೆ.
ನಂತರ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಹಾಸನಾಂಬೆ ತಾಯಿಯ ದರ್ಶನ ಪಡೆದಿದ್ದಾರೆ. ಇಂದು ದೇವಾಲಯದ ಸ್ವಚ್ಛತೆ, ಸುಣ್ಣಬಣ್ಣ ಬಳಿಯುವುದಕ್ಕೆ ಹಾಗೂ ಪೂಜೆ, ನೈವೇದ್ಯಕ್ಕೆ ಅವಕಾಶ ನೀಡಲಾಗಿದೆ. ನಾಳೆಯಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಾಸನಾಂಬ ಗರ್ಭಗುಡಿಯ ಬಾಗಿಲು ಓಪನ್
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆಯ ದೇಗುಲದ ಬಾಗಿಲು ಈಗಾಗಲೇ ತೆರೆದಿದೆ. ಗುರುವಾರ ಇಂದು ಆರಂಭವಾಗುವ ಜಾತ್ರೆ ಅಕ್ಟೋಬರ್ 27ರವರೆಗೂ ನಡೆಯಲಿದೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ತಾಯಿಯ ದರ್ಶನಕ್ಕಾಗಿ ರಾಜ್ಯಾದ್ಯಂತ ಲಕ್ಷಾಂತರ ಮಂದಿ ಕಾಯುತ್ತಿದ್ದಾರೆ. ಹಾಸನಾಂಬೆಗೆ ವಿಶೇಷ ಅಲಂಕಾರ ಕಾರ್ಯಗಳನ್ನು ಮಾಡಿದ್ದಾರೆ. ಹಾಗೂ ಶಾಸ್ತ್ರೋಕ್ತವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗಿದೆ. ಇಂದಿನಿಂದ ಶುರುವಾಗುವ ಜಾತ್ರೆ ಒಟ್ಟು 12 ದಿನಗಳ ಕಾಲ ನಡೆಯಲಿದ್ದು, ದೇವಿ ದರ್ಶನಕ್ಕೆ ಅವಕಾಶ ಸಿಗಲಿದೆ.
ಸಾರ್ವಜನಿಕರಿಗೆ ದರ್ಶನಕ್ಕಿಲ್ಲ ಅವಕಾಶ
ಹಾಸನಾಂಬೆ ದೇಗುಲದ ಬಾಗಿಲು ತೆರೆದರೂ ಸಾರ್ಜನಿಕರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಇಂದು ಕೇವಲ ತಾಯಿಯ ಗರ್ಭಗುಡಿ ಸ್ವಚ್ಛತೆ, ಪೂಜೆ, ನೈವೇದ್ಯಕ್ಕೆ ಮಾತ್ರ ಅವಕಾಶ ಇರಲಿದೆ. ಆದರೆ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದಲೇ ಭಕ್ತರು ದೇವಿಯ ದರ್ಶನ ಪಡೆಯಬಹದಾಗಿದೆ. ಸಂಜೆ 4 ರಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುವುದಿಲ್ಲ.

ಅಕ್ಟೋಬರ್ 15 ರಿಂದ ಅಕ್ಟೋಬರ್ 25ರವರೆಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 1ರ ವರೆಗೆ, ಮಧ್ಯಾಹ್ನ 3:30ರಿಂದ ರಾತ್ರಿ 10ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಮಧ್ಯಾಹ್ನ 1ರಿಂದ 3:30ರವರೆಗಿನ ನೈವೇದ್ಯದ ಸಂದರ್ಭದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುವುದಿಲ್ಲ.
ಅಕ್ಟೋಬರ್ 25 ಮಂಗಳವಾರದಂದು ಸೂರ್ಯಗ್ರಹಣ ಇರುವುದರಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಮತ್ತೆ ಅಕ್ಟೋಬರ್ 26 ದೀಪಾವಳಿ ದಿನದಂದು ವಿಶೇಷ ದರ್ಶನಕ್ಕೆ ಅವಕಾಶ ಇರಲಿದ್ದು, ಬೆಳಗ್ಗೆ 6 ರಿಂದ ಸಂಜೆ 4ರ ತನಕ ದರ್ಶನ ನಡೆಯಲಿದೆ. ಮತ್ತೆ ರಾತ್ರಿ 11ರಿಂದ ಬೆಳಗ್ಗೆ 7ರ ತನಕ ಅವಕಾಶ ಇರಲಿದೆ. ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಅಕ್ಟೋಬರ್ 27ರಂದು ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications