Hasanamba Temple: ಹಾಸನಾಂಬ ದೇಗುಲದ ಬಾಗಿಲು ಓಪನ್: ಭಕ್ತರಿಗೆ ದರ್ಶನ ಕೊಟ್ಟ ಶಕ್ತಿ ದೇವತೆ
ಹಾಸನ, ಅಕ್ಟೋಬರ್ 24: ಹಾಸನದ ಶಕ್ತಿ ದೇವತೆ ಹಾಸನಾಂಬ ದೇವಿಯ ದೇಗುಲದ ಬಾಗಿಲನ್ನು ವರ್ಷಕ್ಕೊಮ್ಮೆ ತೆರೆದು ವಿವಿಧ ಪೂಜಾ ಕೈಂಕರ್ಯದೊಂದಿಗೆ ತಾಯಿಯ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡುವುದು ಹಿಂದಿನಿಂದಲೂ ನಡೆದು ಬಂದಿದೆ. ಅದರಂತೆ ಇಂದು (ಅಕ್ಟೋಬರ್ 24) ಗುರುವಾರ ಮಧ್ಯಾಹ್ನ ದೇವಾಲಯದ ಬಾಗಿಲು ತೆರೆಯಲಾಯಿತು.
ಅರಸು ವಂಶಸ್ಥರು ಬಾಳೆ ಗಿಡ ಕಡಿದ ನಂತರ ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ದೇಗುಲದ ಬಾಗಿಲನ್ನು ತೆರೆಯಲಾಗಿದ್ದು, ಹನ್ನೊಂದು ದಿನಗಳ ಕಾಲ ದೇವಿಗೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಲಿದೆ. ಇಂದಿನಿಂದ ನವೆಂಬರ್ 3ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು, ನಾಳೆಯಿಂದ ನವೆಂಬರ್ 2ರವರೆಗೆ ಭಕ್ತರಿಗೆ ದೇವರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಶಾಸಕರುಗಳಾದ ಎಚ್.ಪಿ.ಸ್ವರೂಪ್ಪ್ರಕಾಶ್, ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್ಪಟೇಲ್, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ತೆರೆಯಲಾಯಿತು.
ಹಾಸನಾಂಬೆ ದೇಗುಲದ ಬಾಗಿಲು ತೆರೆದ ನಂತರ ಮೊದಲ ದಿನದಂದು ತಾಯಿ ಹಾಸನಾಂಬೆಗೆ ಯಾವುದೇ ರೀತಿಯ ಆಭರಣಗಳನ್ನು ಧರಿಸುವ ಸಂಪ್ರದಾಯವಿಲ್ಲ. ಆದರೆ ಎರಡನೆಯ ದಿನ ಜಿಲ್ಲಾ ಖಜಾನೆಯಿಂದ ದೇವಿಯ ಆಭರಣ ವಸ್ತ್ರಗಳನ್ನು ಪಲ್ಲಕಿಯಲ್ಲಿ ತಂದು ಅಲಂಕರಿಸಿ ಪೂಜೆ ಮಾಡಿ ನೈವೇದ್ಯ ಅರ್ಪಿಸಲಾಗುವುದು. ಹಾಸನಾಂಬೆಯನ್ನು ಕುಂಭಗಳ ರೂಪದಲ್ಲಿ ಪ್ರತಿಷ್ಠಾಪಿಸಿ ಈ ಕುಂಭಗಳಿಗೆ ಹೆಣ್ಣು ದೇವತೆಯಂತೆ ಮುಖವಾಡಗಳನ್ನು ಮಾಡಿ ಅಲಂಕರಿಸುವುದು ಇಲ್ಲಿನ ವಿಶೇಷತೆಯಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications