ಹಾಸನಾಂಬೆ ಉತ್ಸವ ಮುಕ್ತಾಯ: ಭಕ್ತಾದಿಗಳು ಕಡಿಮೆ,ಕಾಣಿಕೆ ಸಂಗ್ರಹ ಕುಸಿತ
ಹಾಸನ, ನವೆಂಬರ್ 09: ಇತಿಹಾಸ ಪ್ರಸಿದ್ಧ ಹಾಸನದ ಹಾಸನಾಂಬೆ ದೇವಾಲಯ ಉತ್ಸವ ಇಂದು ಮುಕ್ತಾಯವಾಗಿದ್ದು, ಇಂದು ಬಾಗಿಲು ಮುಚ್ಚಲಾಗಿದೆ. ಮುಂದಿನ ವರ್ಷದವರೆಗೆ ದೇವಾಲಯದ ಬಾಗಿಲು ತೆರಯದು.
ನವೆಂಬರ್ 1 ರಿಂದ ಪ್ರಾರಂಭವಾಗಿ ಒಂಬತ್ತು ದಿನಗಳ ಕಾಲ ಹಾಸನಾಂಬೆ ದೇಗುಲದ ಬಾಗಿಲು ತೆರೆದು ಭಕ್ತಾದಿಗಳಿಗೆ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಈ ಬಾರಿ ವ್ಯವಸ್ಥೆ ಉತ್ತಮವಾಗಿದೆ ಎಂದು ಹೇಳಲಾಯಿತಾದರೂ ಭಕ್ತಾದಿಗಳ ಆಗಮನ ಕಳೆದ ವರ್ಷಕ್ಕಿಂತಲೂ ಕಡಿಮೆಯೇ ಇತ್ತು.
ಒಂಬತ್ತು ದಿನಗಳ ವರೆಗೆ ನಡೆದ ಉತ್ಸವದಲ್ಲಿ ಒಟ್ಟು 12 ಲಕ್ಷಕ್ಕೂ ಮಿಕ್ಕಿ ಜನರು ಹಾಸನಾಂಬೆ ದರ್ಶನ ಮಾಡಿದ್ದಾರೆ ಎಂದು ಜಿಲ್ಲಾ ಆಡಳಿತ ಹೇಳಿದೆ. ಅಂತೆಯೇ ಕಾಣಿಕೆ ಸಂಗ್ರಹದಲ್ಲಿಯೂ ಈ ಬಾರಿ ಕಡಿಮೆ ಆಗಿದೆ ಎನ್ನಲಾಗಿದೆ. ಕಾಣಿಕೆ ಹಣ ಎಣಿಸುವ ಕಾರ್ಯ ಚಾಲ್ತಿಯಲ್ಲಿದೆ.

ಪ್ರತಿಬಾರಿಯಂತೆ ಈ ಬಾರಿಯೂ ಗಣ್ಯರಿಗೆ ವಿಶೇಷ ಪಾಸ್ ವ್ಯವಸ್ಥೆ ಮತ್ತು ವಿಶೇಷ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ವಿಶೇಷ ದರ್ಶನದ ಟಿಕೆಟ್ ನಿಂದ ಒಟ್ಟು 1.14 ಕೋಟಿ ಆದಾಯ ಬಂದಿದೆ. ಲಾಡು ಮಾರಾಟದಿಂದ 13.39 ಲಕ್ಷ ಲಾಭ ಬಂದಿದೆ. ಸೀರೆ ಮಾರಾಟದಿಂದ 56,200 ರೂಪಾಯಿ ಬಂದಿದೆ ಎಂದು ದೇವಾಲಯದ ಆಡಳಿತ ಹೇಳಿದೆ.
ಮಾಮೂಲಿನಂತೆ ಹುಂಡಿಯಲ್ಲಿ ಹಣದ ಜೊತೆಗೆ ಹಲವು ಪತ್ರಗಳೂ ಸಿಕ್ಕಿವೆ. ಪಾಸು ಮಾಡೆಂದು ಕೋರಿರುವವರು, ಕೆಲಸ ಕೊಡಿಸೆಂದು ಹಾಸನಾಂಬೆ ಬಳಿ ಹಾಕಿರುವ ಅರ್ಜಿಗಳು, ಶತ್ರು ನಾಶಕ್ಕಾಗಿ ಕೊರಿ ಬರೆದಿರುವ ಮನಿಗಳೂ ಹುಂಡಿಯಲ್ಲಿ ದೊರೆತಿವೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications