Hasanamba 2023: ಇಂದಿನಿಂದ ಹಾಸನಾಂಬೆಯ ದರ್ಶನ ಆರಂಭ: ಇಲ್ಲಿದೆ ಸಂಪೂರ್ಣ ವಿವರ
Hasanamba Temple Opening 2023: ಹಾಸನ, ನವೆಂಬರ್ 02: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಐತಿಹಾಸಿಕ ಹಾಸನಾಂಬ ದೇವಾಲಯದ ಬಾಗಿಲು ಈ ವರ್ಷ ನವೆಂಬರ್ 2ರಂದು ಅಂದರೆ ಇಂದು ಸಂಪ್ರದಾಯ ಬದ್ಧವಾಗಿ ತೆರೆಯಲಿದೆ. ಕಳೆದ ವರ್ಷ ಬಂದ್ ಆಗಿದ್ದ ದೇಗುಲದ ಬಾಗಿಲು ಇಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಡಳಿತ ಹಾಗೂ ಗಣ್ಯರ ಸಮ್ಮುಖದಲ್ಲಿ ತೆರೆಯಲಿದೆ.
ಇಂದಿನಿಂದ ನವೆಂಬರ್ 15ರವರೆಗೆ ಹಾಸನಾಂಬೆಯ ಜಾತ್ರಾ ಮಹೋತ್ಸವ ನಡೆಯಲಿದ್ದು, 14 ದಿನಗಳ ಕಾಲ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಆದರೆ ಇಂದು ಮತ್ತು 15 ರಂದು ಭಕ್ತರ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.

ದರ್ಶನೋತ್ಸವ ಹಿನ್ನಲೆಯಲ್ಲಿ ಹಾಸನಾಂಬೆ ಸಿದ್ದೇಶ್ವರ ದೇವಾಲಯಗಳು ಅದ್ಧೂರಿಯಾಗಿ ಸಿಂಗಾರಗೊಂಡಿದೆ. ಮಧ್ಯಾಹ್ನ 12 ಗಂಟೆಗೆ ದೇವಾಲಯದ ಗರ್ಭಗುಡಿ ಬಾಗಿಲು ವಿದ್ಯುಕ್ತವಾಗಿ ತೆರೆಯಲಿದೆ. ಆದಿಚುಂನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಶ್ರೀಹಾಸನಾಂಬ ದರ್ಶನನೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ, ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ತೆರೆಯಲಿದೆ.
ಕಳೆದ ವರ್ಷ ಅಕ್ಟೋಬರ್ 13 ರಿಂದ ಅಕ್ಟೋಬರ್ 27 ರವರೆಗೆ ದೇಗುಲ ಬಾಗಿಲು ತೆರೆದಿದ್ದು, ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ಎಂಟನೇ ದಿನ ಜಿಲ್ಲಾಡಳಿತ ದೇವಿಯ ದರ್ಶನದ ಅವಧಿ ವಿಸ್ತರಣೆ ಮಾಡಲಾಗಿತ್ತು, ಪ್ರತಿ ದಿನ 30 ರಿಂದ 50 ಸಾವಿರ ಭಕ್ತರಂತೆ ಸುಮಾರು ಆರು ಲಕ್ಷಕ್ಕೂ ಅಧಿಕ ಭಕ್ತರು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಆಗಮಿಸಿ ಹಾಸನಾಂಬೆಯ ದರ್ಶನ ಪಡೆದಿದ್ದರು.

ಇನ್ನು ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ದರ್ಶನಕ್ಕೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದ್ದು, ರಸ್ತೆಗಳ ದುರಸ್ತಿ, ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್ ದೀಪಾಲಂಕಾರ, ಆಹ್ವಾನ ಪತ್ರಿಕೆಗಳ ಮುದ್ರಣ, ವಿಐಪಿ ಹಾಗೂ ವಿವಿಐಪಿ ಪಾಸ್ ವಿತರಣೆ, ಭಕ್ತಾಧಿಗಳು ವಿಶೇಷ ದರ್ಶನ ಪಡೆಯಲು ಟಿಕೆಟ್ ವ್ಯವಸ್ಥೆ, ಲಾಡು ಪ್ರಸಾದ, ದೊನ್ನೆ ಪ್ರಸಾದ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ ಕರ್ತವ್ಯ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications