ಅಕ್ಟೋಬರ್ 12ರಿಂದ ಹಾಸನಾಂಬೆಯ ದರ್ಶನ ಪಡೆಯಿರಿ
Recommended Video

ಹಾಸನ, ಸೆಪ್ಟೆಂಬರ್ 08 : ಪುರಾಣ ಪ್ರಸಿದ್ಧ ಹಾಸನಾಂಬೆಯ ದರ್ಶನವನ್ನು ಈ ಬಾರಿ ಅಕ್ಟೋಬರ್ 12 ರಿಂದ 21ರ ತನಕ ಪಡೆಯಬಹುದಾಗಿದೆ. ದೇವಿಯ ದರ್ಶನಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗೆ ಹೆಚ್ಚಿನ ಅನುಕೂಲಗಳನ್ನು ಕಲ್ಪಿಸಲು ಹಾಸನ ಜಿಲ್ಲಾಡಳಿತ ಯೋಜನೆ ರೂಪಿಸಿದೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿಯವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು. ಹಾಸನಾಂಬ ದೇವಿ ಜಾತ್ರಾ ಮಹೋತ್ಸವದ ಆಚರಣೆ ಕುರಿತು ಚರ್ಚೆ ನಡೆಯಿತು. ನಿರ್ಧಾರಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವರ್ಷ ಒಟ್ಟಾರೆ 11 ದಿನ ದೇವಾಲಯ ಬಾಗಿಲು ತೆರೆಯಲಿದ್ದು, ಸಾರ್ವಜನಿಕರಿಗೆ 9 ದಿನಗಳ ಕಾಲ ದರ್ಶನಕ್ಕೆ ಅವಕಾಶ ದೊರೆಯಲಿದೆ. ಈ ಸೀಮಿತ ಅವಧಿಯಲ್ಲಿ ಹೆಚ್ಚಿನ ಭಕ್ತಾಧಿಗಳು ಆಗಮಿಸುವುದರಿಂದ ಅನುಕೂಲವಾಗುವಂತೆ ವ್ಯವಸ್ಥೆಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಹಾಸನಾಂಬೆ ದರ್ಶನಕ್ಕೆ ವರ್ಷದಿಂದ ವರ್ಷಕ್ಕೆ ಹೆಚ್ಚಿನ ಭಕ್ತರು ಆಗಮಿಸುತ್ತಿದ್ದಾರೆ. ಅವರೆಲ್ಲರಿಗೂ ಸುಗಮವಾಗಿ ದರ್ಶನ ಭಾಗ್ಯ ದೊರೆಯಬೇಕು. ಧಾರ್ಮಿಕ ಕಟ್ಟು ಪಾಡುಗಳು ಸರಿಯಾಗಿ ಪಾಲನೆಯಾಗಬೇಕು, ಭಕ್ತರಿಗೆ ತೊಂದರೆಯಾದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಪೊಲೀಸ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಛತ್ರದಲ್ಲಿ ಪ್ರಸಾದ ವಿತರಣೆ : ದೇವಾಲಯದ ಹೊರ ಆವರಣದಲ್ಲಿ ಹಿಂದೆ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಮಾಡಲಾಗುತ್ತಿತ್ತು. ಇದರಿಂದ ಜನ ದಟ್ಟಣೆ ಹೆಚ್ಚುತ್ತಿತ್ತು ಇದನ್ನು ತಪ್ಪಿಸಲು ಈ ಬಾರಿ ಎಲ್ಲಾ ಭಕ್ತಾದಿಗಳಿಗೆ ಪಕ್ಕದಲ್ಲೇ ಇರುವ ಛತ್ರದಲ್ಲಿ ಪ್ರಸಾದ ವಿತರಣೆ ಮಾಡಲು ತೀರ್ಮಾನಿಸಲಾಗಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion












Click it and Unblock the Notifications