ಹಾಸನ: ಅಕ್ಟೋಬರ್ 13ರಿಂದ 17ರವರೆಗೆ ತೆರೆಯಲಿದೆ ಹಾಸನಾಂಬ ದೇಗುಲ; ಭಕ್ತರಿಗೆ 12 ದಿನ ದರ್ಶನ
ಹಾಸನ: ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಅಕ್ಟೋಬರ್ 13 ರಿಂದ 27ರವರೆಗೆ ನಡೆಯಲಿದೆ, 15 ದಿನ ದೇವಾಲಯದ ಬಾಗಿಲು ತೆರೆಯಲಿದ್ದು, ಭಕ್ತರಿಗೆ 12 ದಿನ ಅವಕಾಶ ಕಲ್ಪಿಸಲಾಗಿದೆ ಎಂದು ಶಾಸಕ ಪ್ರೀತಂ ಗೌಡ ತಿಳಿಸಿದ್ದಾರೆ.
ಹಾಸನಾಂಬೆ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ದೇವಾಲಯದ ಆವರಣ ಪರಿಶೀಲನೆ ನಡೆಸಿ ಮಾತನಾಡಿದ ಅವರು, ವರ್ಷಕ್ಕೆ ಕೆಲವು ದಿನಗಳು ಮಾತ್ರ ದರ್ಶನ ಕಲ್ಪಿಸುವ ದೇವಿಯ ಗರ್ಭಗುಡಿ ಈ ವರ್ಷ ಅಶ್ವೀಜ ಮಾಸದ ಮೊದಲ ಗುರುವಾರ ತೆರೆಯಲಾಗುವುದು. ಈ ಭಾರಿ 15 ದಿನಗಳು ದೇವಾಲಯ ಬಾಗಿಲು ತೆರೆಯಲಿದ್ದು, ಭಕ್ತರಿಗೆ 12 ದಿನಗಳು ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
ದೇವಾಲಯದ ಬಾಗಿಲು ತೆರೆಯುವ 15 ದಿನಗಳಲ್ಲಿ ಮೊದಲ ಹಾಗೂ ಕೊನೆಯ ದಿನ ಗ್ರಹಣ ಇರುವ ಕಾರಣ, ಆ ಎರಡು ದಿನ ದೇವಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಹಾಗೆಯೇ ಅಕ್ಟೋಬರ್ 25ರಂದು ಸಹಾ ಸಾರ್ವಜನಿಕರಿಗೆ ದರ್ಶನದ ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.

ಅದ್ದೂರಿಯಾಗಿ ಆಚರಣೆ
ಕಳೆದ ಎರಡು ವರ್ಷಗಳು ಕೋವಿಡ್ 19 ಮಹಾಮಾರಿಯಿಂದ ಸರಳವಾಗಿ ಜಾತ್ರೆಯನ್ನು ಆಯೋಜಿಸಲಾಗಿತ್ತು. ಆದರೆ ಈ ಬಾರಿ ಬಹಳ ವಿಜೃಂಬಣೆಯಿಂದ ಜಾತ್ರೆಯನ್ನು ಆಚರಿಸಲು ಯೋಜನೆಗಳನ್ನು ರೂಪಿಸಿಕೊಳ್ಳಲಾಗುತ್ತಿದೆ. ಇನ್ನೂ ಜಾತ್ರೆಗೆ ಕೇವಲ ಹಾಸನ ಮಾತ್ರವಲ್ಲದೆ, ಅಕ್ಕಪಕ್ಕದ ಜಿಲ್ಲೆಯ ಭಕ್ತರು ಆಗಮಿಸುವ ಹಿನ್ನಲೆ ಭಕ್ತರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಭಾರಿ ಭಕ್ತರ ನಿರೀಕ್ಷೆ
ರಾಜ್ಯದ ನಾನಾ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಭಕ್ತರು ಬರುತ್ತಿದ್ದು, ಜಿಲ್ಲಾಡಳಿತದಿಂದ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಲಾಗುವುದು. ಕಳೆದ ಎರಡು ವರ್ಷ ಕೋವಿಡ್ ಕಾಣರ ಹೆಚ್ಚಿನ ಭಕ್ತರಿಗೆ ದರ್ಶನದ ಅವಕಾಶ ನೀಡಿರಲಿಲ್ಲ. ಈ ಕಾರಣದಿಂದ ಈ ವರ್ಷ ಭಕ್ತರ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲ ರೀತಿಯ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಅರ್ಚನಾ ತಿಳಿಸಿದರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications