ಪೌರಕಾರ್ಮಿಕರ ಪಾದ ತೊಳೆದು ನಾಮಪತ್ರ ಸಲ್ಲಿಸಿದ ಹಾಸನ ಬಿಜೆಪಿ ಅಭ್ಯರ್ಥಿ
ಹಾಸನ, ಮಾರ್ಚ್ 25: ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣನವರ ನಾಮಪತ್ರ ಸಲ್ಲಿಕೆಯ ವೇಳೆ ಜೆಡಿಎಸ್ ಬಲಪ್ರದರ್ಶನದ ನಂತರ, ಬಿಜೆಪಿ ಅಭ್ಯರ್ಥಿ ಎ ಮಂಜು, ಸೋಮವಾರ (ಮಾ 25) ಭರ್ಜರಿ ರೋಡ್ ಶೋ ಮಾಡಿ, ನಾಮಪತ್ರ ಸಲ್ಲಿಸಿದ್ದಾರೆ. ಯಡಿಯೂರಪ್ಪ ಆದಿಯಾಗಿ, ಬಿಜೆಪಿ ಮುಖಂಡರು ಈ ವೇಳೆ ಹಾಜರಿದ್ದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕಳೆದ ವಾರಣಾಸಿ ಭೇಟಿಯ ವೇಳೆ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಪ್ರಧಾನಿಯೂ ಆಗಿರುವ ನರೇಂದ್ರ ಮೋದಿ, ಪೌರಕಾರ್ಮಿಕರ ಕಾಲುತೊಳೆದು ಸನ್ಮಾನ ಮಾಡಿದ್ದು, ದೇಶಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಈಗ, ಹಾಸನ ಬಿಜೆಪಿ ಅಭ್ಯರ್ಥಿ ಮಂಜು ಅದೇ ದಾರಿಯಲ್ಲಿ ಸಾಗಿದ್ದಾರೆ.
ನಾಮಪತ್ರಿಕೆ ಸಲ್ಲಿಸುವ ಮುನ್ನ ಎ ಮಂಜು, ನಗರದ ನಿರ್ಮಲ ನಗರದಲ್ಲಿರುವ ಪೌರಕಾರ್ಮಿಕ ಕುಟುಂಬದ ಮನೆಗೆ ತೆರಳಿ, ದಂಪತಿಗಳ ಪಾದ ತೊಳೆದು, ನಂತರ ಜಿಲ್ಲಾಧಿಕರಿ ಕಚೇರಿಗೆ ತೆರಳಿದ್ದಾರೆ. ಇದಕ್ಕೂ ಮೊದಲು ಮಂಜು, ಗೋಪೂಜೆಯನ್ನು ಸಲ್ಲಿಸಿದ್ದರು.

ಪ್ರಧಾನಮಂತ್ರಿ ಪಾದತೊಳೆದ ದೃಶ್ಯವನ್ನು ನೋಡಿದ್ದೆ, ಈಗ ಬಿಜೆಪಿ ಅಭ್ಯರ್ಥಿ ಎ ಮಂಜು ನಮ್ಮ ಪಾದತೊಳೆದದ್ದು ಮುಜುಗರವಾದರೂ ಖುಷಿ ತಂದಿದೆ ಎಂದು ಪೌರಕಾರ್ಮಿಕ ದಂಪತಿಗಳು ಹೇಳಿದ್ದಾರೆ.
ಹಾಸನದ ಜನತೆಯನ್ನು ಮೋಸ ಮಾಡಲು ಸಾಧ್ಯವಿಲ್ಲ, ಮಂಜು ಅವರ ಈ ನಾಟಕವೆಲ್ಲಾ ಹಾಸನದಲ್ಲಿ ನಡೆಯುವುದಿಲ್ಲ ಎಂದು ಮಂಡ್ಯದಲ್ಲಿ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications