ಮಾ.21ರ ತನಕ ರೋಹಿಣಿ ಸಿಂಧೂರಿ ವರ್ಗಾವಣೆ ಇಲ್ಲ

Recommended Video

      ರೋಹಿಣಿ ಸಿಂಧೂರಿಗೆ ಮಾರ್ಚ್ 21ರ ತನಕ ತಾತ್ಕಾಲಿಕ ರಿಲೀಫ್ | Oneindia Kannada

      ಹಾಸನ, ಮಾರ್ಚ್ 13 : ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ಕುರಿತು ಮಾ.21ರ ತನಕ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸಿಎಟಿ ಆದೇಶ ನೀಡಿದೆ. ಹಾಸನ ಜಿಲ್ಲಾಧಿಕಾರಿಯಾಗಿ ಅವರು ಮುಂದುವರೆಯಲಿದ್ದಾರೆ.

      ಮಂಗಳವಾರ ಕೇಂದ್ರಿಯ ಆಡಳಿತಾತ್ಮಕ ನ್ಯಾಯಮಂಡಳಿ ಈ ಕುರಿತು ಆದೇಶ ಹೊರಡಿಸಿದೆ. ಸಿಎಟಿ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದೆ. ಮಾರ್ಚ್ 21ರಂದು ಅಂತಿಮ ಆದೇಶವನ್ನು ಪ್ರಕಟಿಸಲಿದೆ.

      ರೋಹಿಣಿ ಸಿಂಧೂರಿ ಅವರು 2017ರ ಜುಲೈ 14ರಂದು ಹಾಸನದ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಅವಧಿಗೂ ಮೊದಲೇ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದ್ದರಿಂದ, ಅವರು ಸಿಎಟಿಯಲ್ಲಿ ಕರ್ನಾಟಕ ಸರ್ಕಾರದ ಆದೇಶವನ್ನು ಪ್ರಶ್ನಿಸಿದ್ದರು.

      Hassan DC Rohini Sindhuri transfer : CAT reserves order

      ಮಾರ್ಚ್ 7ರಂದು ಕರ್ನಾಟಕ ಸರ್ಕಾರ ರೋಹಿಣಿ ಸಿಂಧೂರಿ ಸೇರಿದಂತೆ 11 ಐಎಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಮಾರ್ಚ್ 8ರಂದು ರೋಹಿಣಿ ಸಿಂಧೂರಿ ಅವರು ಈ ಆದೇಶವನ್ನು ಸಿಎಟಿಯಲ್ಲಿ ಪ್ರಶ್ನಿಸಿದ್ದರು.

      ಮಾರ್ಚ್ 13ರ ತನಕ ವರ್ಗಾವಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಸಿಎಟಿ ಆದೇಶ ನೀಡಿತ್ತು. ಮಂಗಳವಾರ ಮಾರ್ಚ್ 21ರ ತನಕ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ ಮತ್ತು ಅಂದು ಅಂತಿಮ ತೀರ್ಪನ್ನು ಪ್ರಕಟಿಸಲಿದೆ.

      ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರಣದೀಪ್ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+