ಸರ್ಕಾರಕ್ಕೆ ಸೆಡ್ಡು: ಕಾಡಾನೆ ಓಡಾಡುವ ಜಾಗದಲ್ಲಿ 20 ಅಡಿ ಕಂದಕ ತೆಗೆದ ರೈತರು
ಹಾಸನ, ಡಿಸೆಂಬರ್ 26: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯುವಂತೆ ನೂರಾರು ಭಾರಿ ಹೋರಾಟ ನಡೆಸಿದರು ಆಳಿದ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ.
ಇತ್ತೀಚೆಗೆ ಗಜಪಡೆ ಗಲಾಟೆಯಿಂದ ಬೇಸತ್ತು ಹೋಗಿರುವ ರೈತರು ಹಾಗೂ ಕಾಫಿ ಬೆಳೆಗಾರರು ಸರ್ಕಾರಕ್ಕೆ ಸವಾಲ್ ಎಸೆದು ಮತ್ತೊಂದು ಸುತ್ತಿನ ಹೋರಾಟಕ್ಕೆ ಇಳಿದಿದ್ದಾರೆ.
ಕಾಡಾನೆಗಳ ಹಿಂಡು ಓಡಾಡುವ ಜಾಗದಲ್ಲಿ 20 ಅಡಿ ಅಗಲ 20 ಅಡಿ ಆಳದ ಕಂದಕ ತೋಡಿದ್ದಾರೆ. ಇದರೊಳಗೆ ಕಾಡಾನೆ ಬಿದ್ದರೆ ಅದನ್ನು ಸರ್ಕಾರ ಅಥವಾ ಅರಣ್ಯ ಇಲಾಖೆ ಅಧಿಕಾರಿಗಳು ಹಿಡಿದುಕೊಂಡು ಹೋಗಲಿ ಇಲ್ಲವೇ ಕಾಡಾನೆ ಕಂದಕದಲ್ಲಿ ಸಾಯಲಿ ಇದಕ್ಕೆ ಸರ್ಕಾರವೇ ನೇರ ಹೊಣೆ ಎಂದಿದ್ದಾರೆ.

ಶಾಶ್ವತ ಪರಿಹಾರ ನೀಡದ ಸರ್ಕಾರ ವಿರುದ್ಧ ರೈತರ ಆಕ್ರೋಶ
ಕಳೆದ ಎರಡು ದಶಕಗಳಿಂದ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು ಭಾಗದಲ್ಲಿ ಕಾಡಾನೆಗಳ ಕಾಟ ವಿಪರೀತವಾಗಿದ್ದು ಇದರಿಂದಾಗಿ ಈ ಭಾಗದ ರೈತರು, ಕಾಫಿ ಬೆಳೆಗಾರರು, ಹಾಗೂ ಜನರು ಹೈರಾಣಾಗಿ ಹೋಗಿದ್ದಾರೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡು ಹಿಡಿಯುವಂತೆ ನೂರಾರು ಭಾರಿ ಪ್ರತಿಭಟನೆ, ಬಂದ್, ರಸ್ತೆ ತಡೆ, ಉಪವಾಸ ಸತ್ಯಾಗ್ರಹ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಕಾಡಾನೆ ದಾಳಿಯಿಂದ ಸಾವು ಸಂಭವಿಸಿದಾಗ ಪರಿಹಾರ ಹಾಗೂ ಭರವಸೆ ನೀಡಿದ್ದಾರೆ ಹೊರತು ಗಜಪಡೆ ಗಲಾಟೆಗೆ ಶಾಶ್ವತ ಬ್ರೇಕ್ ಹಾಕಲು ಯಾವ ಸರ್ಕಾರಗಳಿಂದಲೂ ಸಾಧ್ಯವಾಗಿಲ್ಲ.

20 ಅಡಿ ಅಗಲ 20 ಉದ್ದದ ಕಂದಕ ತೆಗೆದ ರೈತರು
ಇದುವರೆಗೂ 77 ಮಂದಿ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದರೆ 33 ಕಾಡಾನೆಗಳು ಸಾವನ್ನಪ್ಪಿವೆ. ಇತ್ತೀಚೆಗೆ ಕಾಡಾನೆಗಳು ಕಾಡಿಗಿಂತ ಹೆಚ್ಚಾಗಿ ನಾಡಿಗೆ ಲಗ್ಗೆ ಇಡುತ್ತಿವೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವಂತೆ ಹೋರಾಟ ನಡೆಸಿ ಪರಿಹಾರ ಸಿಗದ ಕಾರಣ ರೈತರು ಹಾಗೂ ಕಾಫಿ ಬೆಳೆಗಾರರು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಸಕಲೇಶಪುರ ತಾಲೂಕಿನ, ಹೊಸಕೊಪ್ಪಲು ಗ್ರಾಮದಲ್ಲಿ ಅಮೃತ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ 20 ಅಡಿ ಅಗಲ 20 ಉದ್ದದ ಕಂದಕ ತೋಡಿದ್ದಾರೆ. ಕಂದಕದ ಮೇಲೆ ಬಿದಿರು ಹಾಗೂ ಸೊಪ್ಪಿನಿಂದ ಮುಚ್ಚಲಾಗಿದೆ. ಕಾಡಾನೆಗಳ ಹಿಂಡು ಆಹಾರ ಅರಸಿ ಬಂದ ವೇಳೆ ಕಂದಕಕ್ಕೆ ಕೆಡವಲು ಖೆಡ್ಡಾ ತೋರಿದ್ದಾರೆ. ಖೆಡ್ಡಾಗೆ ಬಿದ್ದಾಗ ಸರ್ಕಾರ ಕಾಡಾನೆಗಳನ್ನು ತೆಗೆದುಕೊಂಡು ಹೋಗಲಿ ಇಲ್ಲವೇ ಗುಂಡಿಯಲ್ಲಿ ಬಿದ್ದು ಸಾಯಲಿ. ಇದಕ್ಕೆ ನಾವು ಹೊಣೆಯಲ್ಲ. ನಮ್ಮ ಮೇಲೆ ಕೇಸ್ ದಾಖಲಿಸಿ ಬಂಧಿಸಿದರು ನಾವು ಹೆದರುವುದಿಲ್ಲ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ.

ಕಾಡಾನೆ ಕಾಟಕ್ಕೆ ಸಂಕಷ್ಟಕ್ಕೆ ಸಿಲುಕಿದ ರೈತ ವರ್ಗ
ಕಾಡಾನೆಗಳ ದಾಂಧಲೆಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿ ನಷ್ಟ ಅನುಭವಿಸಿದ್ದೇವೆ. ಸಾಲ ಸೂಲ ಮಾಡಿ ಬೆಳೆದ ಕಾಫಿ, ಭತ್ತ, ಮೆಣಸು, ಬಾಳೆ, ಅಡಿಕೆ, ತೆಂಗು ಸೇರಿದಂತೆ ಇತರೆ ಬೆಳೆಗಳನ್ನು ಸಂಪೂರ್ಣ ತಿಂದು, ತುಳಿದು ನಾಶಪಡಿಸಿವೆ. ಇಷ್ಟಾದರೂ ಆಳುವ ಸರ್ಕಾರಗಳು ಶಾಶ್ವತ ಪರಿಹಾರ ಕಂಡು ಹಿಡಿದಿಲ್ಲ. ಸಾವಿರಾರು ಕೋಟಿ ಖರ್ಚು ಮಾಡಿ ಬೇರೆ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆ ಮೂಲಕ ನೀರು ಹರಿಸುವ ಯೋಜನೆ ಜಾರಿಗೆ ತಂದಿದ್ದೀರಿ. ಆದರೆ ನಮ್ಮ ಸಮಸ್ಯೆ ನಿಮಗೆ ಕಾಣುತ್ತಿಲ್ಲವಾ..? ನಮಗೆ ಸರ್ಕಾರದ ಪರಿಹಾರ ಬೇಡ ಕಾಡಾನೆಗಳನ್ನು ಹಿಡಿದು ಸ್ಥಳಾಂತರ ಮಾಡಿ ಇಲ್ಲಾ ದಯಾಮರಣಕ್ಕೆ ಅನುಮತಿ ನೀಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆಯನ್ನು ಖೆಡ್ಡಾಕ್ಕೆ ಕೆಡವರು ಹೊಸ ಪ್ಲಾನ್
ಇಂದಿನಿಂದ ಹೊಸ ರೀತಿಯ ಹೋರಾಟ ಆರಂಭಿಸಿದ್ದೇವೆ ಶಾಶ್ವತ ಪರಿಹಾರ ಕಂಡುಹಿಡಿಯುವವರೆಗೂ ಎಲ್ಲೆಲ್ಲಿ ಕಾಡಾನೆ ಸಂಚಾರ ಮಾಡುತ್ತವೆಯೋ ಅಲ್ಲೆಲ್ಲಾ ಕಂದಕ ತೋಡಿ ಕಾಡಾನೆಗಳನ್ನು ಖೆಡ್ಡಾಕ್ಕೆ ಕೆಡವುತ್ತೇವೆ ಎಂದಿದ್ದಾರೆ.
ಒಟ್ಟಿನಲ್ಲಿ ಕಾಡಾನೆಗಳ ಕಾಟದಿಂದ ಬೇಸತ್ತ ಸಕಲೇಶಪುರ, ಆಲೂರು, ಬೇಲೂರು ಭಾಗದ ಜನ ಕಾಡಾನೆಗಳನ್ನು ಖೆಡ್ಡಾಗೆ ಕೆಡವುವ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಕಂದಕ ತೋಡಿದರ ಅರಣ್ಯ ಇಲಾಖೆ ಅಧಿಕಾರಿಗಳು ಇತ್ತ ತಿರುಗಿ ನೋಡಿಲ್ಲ ಎನ್ನುವುದು ಸ್ಥಳೀಯ ರೈತರ ಆರೋಪವಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications