Get Updates
Get notified of breaking news, exclusive insights, and must-see stories!

Hassan News: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವು; ಸರ್ಕಾರ ತೆಗೆದುಕೊಂಡ ನಿರ್ಧಾರ ಏನು ಗೊತ್ತಾ?

Hassan Heart Attack Cases: ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಸರಣಿ ಸಾವುಗಳು ಸಂಭವಿಸಿ ಆತಂಕ ಸೃಷ್ಟಿಸಿದೆ. ಇದರಿಂದ ಇದೀಗ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ ತೆಗೆದುಕೊಂಡ ನಿರ್ಧಾರ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಇಂದು (ಜೂನ್ 30) ಒಂದೇ ದಿನ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೂವರು ಸಾವನ್ನಪ್ಪಿದ್ದಾರೆ. ಈ ಮೂಲಕ 40 ದಿನದ ಅಂತರದಲ್ಲಿ 21 ಜನರು ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದು, ಹಾಸನದಲ್ಲಿನ ಸರಣಿ ಸಾವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಆರೋಗ್ಯ ಇಲಾಖೆ ಜಯದೇವ ನಿರ್ದೇಶಕ ಡಾ.ರವಿಂದ್ರನಾಥ್ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಅಲ್ಲದೆ, ಹಾಸನ ಜಿಲ್ಲೆಯ ಜನರ ಸಾವಿನ ಬಗ್ಗೆ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಸಮಿತಿಗೆ ಸೂಚಿಸಿದ್ದಾರೆ.

Hassan Heart Attack Cases Increase Do you know the decision taken by government

18 ಸಾವಿನ ಪೈಕಿ 9 ಜನರು ಸಾವನ್ನಪ್ಪಿದ್ದವರು 55 ವರ್ಷ ಮೇಲ್ಪಟ್ಟವರಾಗಿದ್ದಾರೆ. ಅವರಿಗೆ ಬೇರೆ ಬೇರೆ ರೀತಿಯ ಖಾಯಿಲೆಗಳು ಇತ್ತು. 5 ಜನ 20 ಹರೆಯದವರು ಎಂದು ತಿಳಿದಿದೆ. 1 ಸಾವು ಹಾಸನದಲ್ಲಿ ಆಗಿದೆ. ಯಳಿದ 4 ಸಾವು ಬೆಂಗಳೂರಿನಲ್ಲಿ ಆಗಿದೆ. ಆದರೆ, 4 ಜನ ಹಾಸನ ಮೂಲದವರಾಗಿದ್ದಾರೆ. ಟೈಪ್ 1 ಡಯಾಬಿಟಿಸ್ ಇತ್ತು, ಕ್ರಾನಿಲ್ ಡಿಸೀಸ್ ಇತ್ತು. ಬಹುಪಾಲು ಸಾವು ಮನೆಯಲ್ಲಿ ಸಂಭವಿಸಿದೆ. ಆದ್ದರಿಂದ ಹಳೇ ಮೆಡಿಕಲ್ ರೆಕಾರ್ಡ್ ಪರೀಕ್ಷಿಸಬೇಕಿದೆ. 9 ಸಾವಿನ ಬಗ್ಗೆ ತಿಳಿಯಲು ಕಮಿಟಿ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಫೆಬ್ರವರಿ ತಿಂಗಳಲ್ಲಿ ಈ ಸಮಿತಿ ರಚನೆ ಆಗಿತ್ತು. ಕೋವಿಡ್‌ನಿಂದ ಹೀಗಾಗಿದೆಯಾ ಎಂಬ ಮಾಹಿತಿ ಬಗ್ಗೆ ಅಧ್ಯಯನ ನಡೆಸಿದೆ. ಅದೇ ಕಮಿಟಿಗೆ ಹಾಸನದ ಮೆಡಿಕಲ್ ರಿಪೋರ್ಟ್ ತರಿಸಿ ಅಧ್ಯಯನ ನಡೆಸಲು ಸೂಚನೆ ನೀಡಿದ್ದೇವೆ. 10 ದಿನಗಳ ಒಳಗಾಗಿ ವರದಿ ಕೊಡಲು ತಿಳಿಸಿದ್ದೇವೆ ಎಂದು ಹೇಳಿದರು.

20 ವರ್ಷದ ಯುವತಿಗೆ ಟೈಪ್ 1 ಡಯಾಬಿಟಿಸ್, ಕ್ರಾನಿಕ್ ಕಿಡ್ನಿ ಡಿಸೀಸ್ ಇರುವುದಯ ತಿಳಿದಿದೆ. ಜನಟಿಕ್ ಇದೆಯಾ, ಅನ್ ಕಂಟ್ರೋಲ್ಡ್ ಡಿಸೀಸ್ ಇತ್ತಾ ಎಂದು ಅಧ್ಯಯನ ಮಾಡಬೇಕಿದೆ. ಹಾಸನ ಸಾವಿನಲ್ಲಿ ಕೆಲವರಿಗೆ ಒಪನ್ ಹಾರ್ಟ್ ಸರ್ಜರಿ ಆಗಿತ್ತು. 18 ಪೈಕಿ 2 ಮಾತ್ರ ಆಸ್ಪತ್ರೆಯಲ್ಲಿ ಸಾವಾಗಿದೆ. ಇನ್ನುಳಿದವರ ಸಾವುಗಳು ಮನೆಯಲ್ಲಿ ಆಗಿವೆ ಎಂದು ತಿಳಿಸಿದರು.

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವು ಪ್ರಕರಣದ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಕ್ರಿಯಿಸಿ, ಯಾಕಿಷ್ಟು ಹೃದಯಾಘಾತವಾಗುತ್ತಿದೆ ಎನ್ನುವುದರ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ. ಆರೋಗ್ಯ ಇಲಾಖೆಯಿಂದ ಪರಿಶೀಲಿಸಿ ವರದಿ ನೀಡಲು ಆದೇಶಿಸಿದ್ದೇನೆ. ಅಧಿಕಾರಿಗಳು ನೀಡುವ ವರದಿ ನೀಡಿ ಮಾಹಿತಿ ನೀಡುತ್ತೇನೆ ಎಂದು ಹೇಳಿದರು.

ಸತ್ಯಾಸತ್ಯತೆ ಏನೆಂದು ಅಂಕಿ ಅಂಶಗಳ ಆಧಾರದ ವರದಿ ಮೂಲಕ ತಿಳಿಯುತ್ತದೆ. ಈಗಿನ ಜೀವನ ಶೈಲಿ, ಆಹಾರ ಪದ್ಧತಿ, ಮೊಬೈಲ್, ಡಿಜಿಟಲ್ ವ್ಯಸನ, ವ್ಯಸನದಿಂದ ಆರೋಗ್ಯ ಸಮಸ್ಯೆ ಹೆಚ್ಚಳ ಆಗಿದೆ. ಹಲವರಿಗೆ ಚಿಕ್ಕ ವಯಸ್ಸಿನಲ್ಲೇ ಬಿಪಿ, ಶುಗರ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈಗ ಎಲ್ಲೆಡೆ ವಾಯು, ಆಹಾರ, ನೀರು ಮಾಲಿನ್ಯದಿಂದ ಕೂಡಿದೆ. ಜೀವನ ಶೈಲಿ ನೋಡಿಕೊಳ್ಳುವುದು ತುಂಬಾ ಮುಖ್ಯವಾಗಿದೆ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+