ಹಾಸನ: 200 ಕೋಟಿ ವೆಚ್ಚದಲ್ಲಿ14 ಎಕರೆಯಲ್ಲಿ ಐಟಿ ಪಾರ್ಕ್ ಸ್ಥಾಪನೆ
ಹಾಸನ, ಜನವರಿ 26: ''ಹಾಸನದ ಡೈರಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿನ ಮೈಸೂರು ಮಿನರಲ್ಸ್ ಸ್ವಾಮ್ಯದ 14 ಎಕರೆ ಜಾಗದಲ್ಲಿ ಐಟಿ ಪಾರ್ಕ್ ಹಾಗೂ ವಾಣಿಜ್ಯ ಉದ್ದೇಶಕ್ಕೆ ಮಳಿಗೆಗಳನ್ನು ಸ್ಥಾಪಿಸಲಾಗುವುದು'' ಎಂದು ಕರ್ನಾಟಕ ರಾಜ್ಯ ಖನಿಜ ನಿಗಮದ ಅದ್ಯಕ್ಷ ಲಿಂಗಮೂರ್ತಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಪ್ರದೇಶದಲ್ಲಿ ಗ್ರಾನೈಟ್ ಉದ್ಯಮವೂ ಸ್ಥಗಿತವಾಗಿದ್ದು ವಾಣಿಜ್ಯ ಕ್ಷೇತ್ರಕ್ಕೆ ಪುನಶ್ಚೇತನ ನೀಡುವ ಉದ್ದೇಶದಿಂದ ಹಾಗೂ ಸ್ಥಳೀಯವಾಗಿ ಉದ್ಯೋಗ ಸೃಷ್ಟಿ ಮಾಡುವ ಹಿನ್ನೆಲೆಯಲ್ಲಿ ಈ ಯೋಜನೆ ರೂಪಿಸಲಾಗಿದೆ ಎಂದರು.
ಈ ಯೋಜನೆಗೆ ಸುಮಾರು 200 ಕೋಟಿ ವೆಚ್ಚವಾಗಲಿದ್ದು ಮೊದಲ ಹಂತವಾಗಿ 60 ಕೋಟಿ ಬಿಡುಗಡೆಗೊಳಿಸಲಾಗುವುದು ಮುಂದಿನ ಕೆಲ ವರ್ಷದಲ್ಲಿ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ವಾಗಲಿದೆ ಎಂದರು.ಇದರಿಂದ ಸ್ಥಳೀಯವಾಗಿ ಐಟಿಐ, ಇಂಜಿನಿಯರಿಂಗ್ ಪದವಿ ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆಯಲು ಸಹಕಾರಿಯಾಗಲಿದೆ ಎಂದರು.

ವಿಶೇಷ ಅರ್ಥಿಕ ವಲಯದಲ್ಲಿ ಕೈಗಾರಿಕೆ ಸ್ಥಾಪನೆ
ಗ್ರಾನೈಟ್ ಉದ್ಯಮ ಸ್ಥಗಿತವಾಗಿದ್ದು ವಹಿವಾಟು ಸ್ಥಗಿತಗೊಂಡಿದ್ದರಿಂದ ಉಳಿದ 14 ಸಾವಿರ ಚ.ಮೀ ಗ್ರಾನೈಟ್ ಅನ್ನು ಹರಾಜು ಹಾಕಲಾಗುವುದು ಹಾಗೂ 280 ಎಕರೆ ವಿಶೇಷ ಅರ್ಥಿಕ ವಲಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಉದ್ದೇಶಿಸಲಾಗಿದೆ ಎಂದು ಎಂದು ಕರ್ನಾಟಕ ರಾಜ್ಯ ಖನಿಜ ನಿಗಮದ ಅದ್ಯಕ್ಷ ಲಿಂಗಮೂರ್ತಿ ಮಾಹಿತಿ ನೀಡಿದರು.

ಶಾಸಕರಾದ ಪ್ರೀತಂ ಜೆ ಗೌಡ ಅವರು ಮಾತನಾಡಿ
ಶಾಸಕರಾದ ಪ್ರೀತಂ ಜೆ ಗೌಡ ಅವರು ಮಾತನಾಡಿ ನಗರದ ಹೊರವಲಯದಲ್ಲಿ ಮೈಸೂರು ಮಿನರಲ್ಸ್ ನ ಜಾಗದಲ್ಲಿ ಐ.ಟಿ ಪಾರ್ಕ್ ಮಾಡಲಾಗುವುದು.ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಲು ಆಧ್ಯತೆ ನೀಡಲಾಗುವುದು .ಹೊಸದಾಗಿ ಪ್ರಾರಂಭಿಸುವ ಕಂಪನಿಗಳಿಗೆ ಈ ಕಟ್ಟಡದಲ್ಲಿ ಬಾಡಿಗೆ ಆಧಾರದಲ್ಲಿ ಜಾಗ ಒದಗಿಸಲಾಗುವುದು ಎಂದರು.

ಎಸ್.ಇ.ಜೆಡ್ ಯೋಜನೆಯಡಿಯಲ್ಲಿರುವ 280ಎಕರೆ
ಎಸ್.ಇ.ಜೆಡ್ ಯೋಜನೆಯಡಿಯಲ್ಲಿರುವ 280ಎಕರೆ ಜಮೀನನ್ನು ಹಿಂಪಡೆದು ಇತರ ಕೈಕಾರಿಕೆಗಳ ಸ್ಥಾಪನೆಗೆ ಒದಗಿಸಲು ಕ್ರಮ ವಹಿಸಲಾಗುತ್ತಿದೆ. ಕೈಗಾರಿಕಾ ಸಚಿವರ ನೇತೃತ್ವದಲ್ಲಿ ನಿಯಮಗಳ ರಚನೆಯಾಗುತ್ತಿದೆ .ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯೂ ಸಲ್ಲಿಕೆಯಾಗಿದೆ ಎಂದರು.
Recommended Video

ಕೈಗಾರಿಕೆ ಪ್ರಾರಂಭ ಮಾಡುವವರಿಗೆ ಜಾಗ ಮಂಜೂರು
ಕೈಗಾರಿಕಾ ಬಡಾವಣೆಯಲ್ಲಿ ಜಾಗ ಪಡೆದು ಹಲವು ವರ್ಷಗಳಾದರೂ ಯಾವುದೇ ಚಟುವಟಿಕೆಗಳನ್ನು ನಡೆಸದೇ ಇರುವವರನ್ನು ಗುರುತಿಸಿ ನೋಟೀಸ್ ನೀಡಿ ಜಮೀನು ಹಿಂಪಡೆದು ನಿಜವಾಗಿಯೂ ಕೈಗಾರಿಕೆ ಪ್ರಾರಂಭ ಮಾಡುವವರಿಗೆ ಮಂಜೂರು ಮಾಡಲಾಗುವುದು ಎಂದು ಪ್ರೀತಂ ಗೌಡ ಹೇಳಿದರು.
ಅಲ್ಲದೆ ರಾಜ್ಯ ಖನಿಜ ನಿಗಮದ ವತಿಯಿಂದ 25 ಲಕ್ಷ ನೀಡಲಾಗುತ್ತಿದ್ದು ಇತರ ದಾನಿಗಳ ಹಣವನ್ನೂ ಬಳಸಿ ದೇವಾಲಯವನ್ನು ಉತ್ತಮವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು. ಜಿಲ್ಲಾಧಿಕಾರಿ ಆರ್ ಗಿರೀಶ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications