ಹಾಸನದಲ್ಲಿ ಜೆಡಿಎಸ್ನ 2ನೇ ವಿಕೆಟ್ ಪತನ; ಶಿವಲಿಂಗೇಗೌಡ ಬಳಿಕ ಮತ್ತೊಬ್ಬ ಪ್ರಭಾವಿ ಶಾಸಕ ಜೆಡಿಎಸ್ಗೆ ಗುಡ್ಬೈ!
ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಾದೇಶಿಕ ಪಕ್ಷ ಜೆಡಿಎಸ್ ಬಿಟ್ಟು ಅನ್ಯ ಪಕ್ಷಗಳಿಗೆ ಸೇರ್ಪಡೆಯಾಗುತ್ತಿರುವವ ಸಂಖ್ಯೆ ಹೆಚ್ಚಾಗಿದ್ದು, ಇದೀಗ ಹಾಸನ ಜಿಲ್ಲೆಯ ಇನ್ನೊಬ್ಬ ಶಾಸಕ ಜೆಡಿಎಸ್ ಪಕ್ಷವನ್ನ ತೊರೆಯಲು ಸಜ್ಜಾಗಿದ್ದಾರೆ.
ಹಾಸನ,ಫೆಬ್ರವರಿ18: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯೇ ಸಾಕಷ್ಟು ಕುತೂಹಲಕ್ಕೆ ಕಾರಣವಾಗಲಿದ್ದು, ಈ ಬಾರಿ ಚುನಾವಣೆಗೂ ಮುನ್ನ ರಾಜಕೀಯ ಧ್ರುವೀಕರಣಕ್ಕೆ ಅರಕಲಗೂಡು ವಿಧಾನಸಭಾ ಕ್ಷೇತ್ರ ಸಾಕ್ಷಿಯಾಗಲಿದೆ.
ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಾದೇಶಿಕ ಪಕ್ಷ ಜೆಡಿಎಸ್ ಬಿಟ್ಟು ಅನ್ಯ ಪಕ್ಷಗಳಿಗೆ ಸೇರ್ಪಡೆಯಾಗುತ್ತಿರುವವ ಸಂಖ್ಯೆ ಹೆಚ್ಚಾಗಿದ್ದು, ಇದೀಗ ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಜೆಡಿಎಸ್ ಪಕ್ಷವನ್ನ ತೊರೆಯಲು ಸಜ್ಜಾಗಿದ್ದಾರೆ. ಇನ್ನೂ ಜೆಡಿಎಸ್ನ ಹಾಲಿ ಶಾಸಕ ಎ.ಟಿ.ರಾಮಸ್ವಾಮಿ ಹಾಗೂ ಬಿಜೆಪಿ ಮುಖಂಡ ಎ ಮಂಜು ಅವರು ರಾಜಕೀಯ ಪಕ್ಷಗಳನ್ನು ಬದಲಿಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
ಈ ಕುರಿತು ಶಾಸಕ ಎ ಟಿ ರಾಮಸ್ವಾಮಿ ಅವರು ಮಾತನಾಡಿ, ಸ್ವಯಂ ರಾಜಕೀಯ ಬೆಳವಣಿಗೆಗಾಗಿ ದೇವೇಗೌಡರನ್ನೇ ರಾಜಕೀಯವಾಗಿ ಪ್ರಶ್ನಿಸಿದರು. ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ವಿಚಾರವಾಗಿ ನ್ಯಾಯಾಲದಲ್ಲಿ ಪ್ರಶ್ನಿಸಿದ್ದರು. ದಾವೆ ಹೂಡಿದ್ದ ಮಾಜಿ ಶಾಸಕ ಎ.ಮಂಜುಗೆ ಮಣೆಹಾಕಿ, ನನ್ನನ್ನು ಬಲಿಪಶು ಮಾಡಿದರು. ಈ ವಿಚಾರ ಬಹಳ ಹಿಂದೆಯೇ ನನಗೆ ಗೊತ್ತಿತ್ತು, ಸ್ವಾರ್ಥ ರಾಜಕಾರಣಕ್ಕಾಗಿ ನನ್ನನ್ನು ಬಲಿ ಪಡೆದರು ಎಂದು ಆರೋಪಿಸಿದರು.

ಇನ್ನೂ ಮುಂದಿನ ರಾಜಕೀಯ ನಡೆ ಕುರಿತು ನಾನೆಂದೂ ಯಾವ ಪಕ್ಷಕ್ಕೆಂದು ಸ್ವಂತ ತೀರ್ಮಾನಿಸಿಲ್ಲ. ಕ್ಷೇತ್ರದ ಜನತೆ ಮತ್ತು ಕಾರ್ಯಕರ್ತರು ನನಗೆ ಏನು ಸೂಚಿಸುತ್ತಾರೋ ಅದನ್ನು ಸ್ವೀಕರಿಸುತ್ತೇನೆ ಎಂದ ಅವರು, ಯಾವ ಪಕ್ಷದಿಂದ ಸ್ಪರ್ದಿಸುತ್ತೀರಿ ಎಂಬುದಕ್ಕೆ ಯಾವುದೇ ಸ್ಪಷ್ಟ ಉತ್ತರ ನೀಡಲಿಲ್ಲ.
ಇನ್ನೂ ಹಾಸನ ಜಿಲ್ಲೆಯಲ್ಲಿ ಶಿವಲಿಂಗೇಗೌಡರ ಬಳಿಕ ಇನ್ನೊಬ್ಬ ಶಾಸಕರಾದ ಎ ಟಿ ರಾಮಸ್ವಾಮಿ ಅವರು ಪಕ್ಷವನ್ನ ಬಿಡಲು ನಿರ್ಧಾರಿಸಿದ್ದು, ಎ ಟಿ ರಾಮಸ್ವಾಮಿ ವರನ್ನ ಬಿಜೆಪಿ ಪಕ್ಷಕ್ಕೆ ಕರೆತರಲು ಬಿಜೆಪಿ ನಾಯಕರು ಒಲವು ತೋರಿದ್ದು, ಹೈಕಮಾಂಡ್ ನಾಯಕರು ರಾಜ್ಯಕ್ಕೆ ಆಗಮಿಸಿದ ವೇಳೆ ಎ ಟಿ ರಾಮಸ್ವಾಮಿ ಅವರನ್ನ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಗಾಳ ಹಾಕಿದ್ದಾರೆ ಎನ್ನಲಾಗಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications