Property Row: ಒಂದೇ ಸೈಟ್ ಇಬ್ಬರ ಹೆಸರಿನಲ್ಲಿ: ಮೋಸ ಮಾಡಿದವ್ರನ್ನ ಇಂಡಿಯಾಗೆ ತೋರಿಸ್ತೀನಿ ಎಂದ ನಟ ಯಶ್ ತಾಯಿ
ಹಾಸನ, ಫೆಬ್ರವರಿ 2: ಇತ್ತೀಚಿನ ದಿನಗಳಲ್ಲಿ ಆಸ್ತಿ ವಿಚಾರವಾಗಿ ಗಲಾಟೆಗಳು ನಡೆದು ಅವುಗಳು ಕೊನೆ ಬೇರೆ ತಿರುವು ಪಡೆದಿರುವ ಉದಾಹರಣೆಗಳಿವೆ. ಹಾಗೆಯೇ ಇದೀಗ ಹಾಸನದಲ್ಲಿ ನಟ ಯಶ್ ತಾಯಿ ಪುಷ್ಪಾ ಹಾಗೂ ದೇವರಾಜ್ ನಡುವಿನ ಜಾಗದ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಈ ಕುರಿತು ಪುಷ್ಪಾ ಅವರು ಮತ್ತೆ ಪ್ರತಿಕ್ರಿಯಿಸಿ ಆಕ್ರೋಶ ಹೊರಹಾಕಿದ್ದಾರೆ.
ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ದೇವರಾಜ್ ನಡುವೆ ನಡೆಯುತ್ತಿರುವ ಜಾಗದ ವಿವಾದಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಒಂದೇ ನಿವೇಶನಕ್ಕೆ ಎರಡು ಜನರಿಗೆ ಪ್ರತ್ಯೇಕವಾಗಿ ಖಾತೆ, ಸರ್ವೆ ನಂಬರ್ ಹಾಗೂ ಇ-ಸ್ವತ್ತು ದಾಖಲೆಗಳನ್ನು ನೀಡಿರುವುದು ಈ ಗೊಂದಲಕ್ಕೆ ಕಾರಣವಾಗಿದೆಯೇ ಎಂಬ ಪ್ರಶ್ನೆ ಇದೀಗ ತೀವ್ರವಾಗಿ ಚರ್ಚೆ ಆಗುತ್ತಿದೆ.

ನಿವೇಶನ ತಮ್ಮದೇ ಎನ್ನುವ ಕುರಿತು ಪುಷ್ಪಾ ಅವರು 1982ರಿಂದಲೂ ಇರುವ ದಾಖಲೆಗಳನ್ನು ಮುಂದಿಟ್ಟು ಮಾತನಾಡಿದ್ದಾರೆ. ಜಾಗ ಖರೀದಿ ಸಂದರ್ಭದಲ್ಲಿ ಎಲ್ಲಾ ಕಾನೂನು ದಾಖಲೆಗಳನ್ನು ಪರಿಶೀಲಿಸಿ ವಕೀಲರ ಸಲಹೆಯೊಂದಿಗೆ ವ್ಯವಹಾರ ನಡೆದಿತ್ತು. 1982ರಿಂದ ಸುಮಾರು ನಾಲ್ಕು ದಶಕಗಳ ಕಾಲ ಯಾವುದೇ ವ್ಯಾಜ್ಯ ಇಲ್ಲದೇ ಇದ್ದ ವಿಷಯ ಈಗ ಏಕೆ ಹೊರಬರುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಲಭ್ಯವಿರುವ ಮಾಹಿತಿಯ ಪ್ರಕಾರ, 1982ರಲ್ಲಿ ಕೆ.ಪಿ. ಶ್ರೀಮತಿ ಎಂಬವರು ಈ ಜಾಗವನ್ನು ಖರೀದಿಸಿದ್ದು, ಸುಮಾರು 23 ವರ್ಷಗಳ ಕಾಲ ಅವರ ಸ್ವಾಧೀನದಲ್ಲಿತ್ತು. ಬಳಿಕ 2007ರಲ್ಲಿ ಗಿರೀಶ್ ಕುಮಾರ್ ಮಹಲಿಂಗಪ್ಪ ಅವರು ಜಾಗವನ್ನು ಖರೀದಿ ಮಾಡಿಕೊಂಡು 2020ರವರೆಗೆ ಮಾಲೀಕರಾಗಿದ್ದರು. ಆ ಬಳಿಕ 2020ರಿಂದ ಈ ಜಾಗವು ತಮ್ಮ ವಶದಲ್ಲಿದೆ ಎಂದು ಪುಷ್ಪಾ ಅವರು ತಿಳಿಸಿದ್ದಾರೆ.
ದೇವರಾಜ್ ಅವರ ಮಾತಿನಂತೆ ಜಾಗ ತಮ್ಮದೆ ಎನ್ನುವುದಾದರೆ, ಉಪ ನೋಂದಣಿ ಕಚೇರಿಯಲ್ಲೇ ದೋಷ ನಡೆದಿದೆಯೇ ಅಥವಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ಒಂದೇ ಜಾಗಕ್ಕೆ ಎರಡು ದಾಖಲೆಗಳು ಸೃಷ್ಟಿಯಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು ಅಂತಲೂ ಹೇಳಿದ್ದಾರೆ.
ಮತ್ತೊಂದೆಡೆ, ದೇವರಾಜ್ ಕೂಡ ತಮ್ಮ ಬಳಿ ಜಾಗಕ್ಕೆ ಸಂಬಂಧಿಸಿದ ದಾಖಲೆಗಳಿದ್ದು, 2020ರಲ್ಲಿ ಲಕ್ಷ್ಮಮ್ಮ ಅವರಿಂದ ಜಿಪಿಎ ಪಡೆದುಕೊಂಡಿರುವುದಾಗಿ ಹೇಳುತ್ತಿದ್ದಾರೆ. ಈ ಪರಸ್ಪರ ವಿರೋಧಿ ದಾಖಲೆಗಳ ಕಾರಣದಿಂದ ಜಾಗದ ವಿವಾದ ಮತ್ತಷ್ಟು ಗೊಂದಲದ ಸ್ವರೂಪ ಪಡೆದುಕೊಂಡಿದೆ. ಪ್ರಸ್ತುತ ಈ ಪ್ರಕರಣದಲ್ಲಿ ಸರ್ಕಾರಿ ಕಚೇರಿಗಳ ದಾಖಲೆಗಳ ಪರಿಶೀಲನೆ ಹಾಗೂ ಕಾನೂನು ಪ್ರಕ್ರಿಯೆಯತ್ತ ಎಲ್ಲರ ಗಮನ ಸೆಳೆದಿದ್ದು, ಮುಂದಿನ ದಿನಗಳಲ್ಲಿ ಸತ್ಯಾಂಶ ಏನೆಂಬುದು ಸ್ಪಷ್ಟವಾಗಲಿದೆ ಎನ್ನಲಾಗುತ್ತಿದೆ.
-
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
Chandan Shetty: ವಯಸ್ಸಾದ್ಮೇಲೆ ಒಂಟಿತನ ಕಾಡುತ್ತೆ, ಆಗ ಕೊರಗುವ ಬದಲು ಈಗಲೇ ಒಳ್ಳೆಯ ಸಂಗಾತಿ ಹುಡುಕುವೆ: ಚಂದನ್ ಶೆಟ್ಟಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ












Click it and Unblock the Notifications