ಚೊಚ್ಚಲ ಪ್ರಯತ್ನದಲ್ಲೇ ಸಂಸತ್ತಿಗೆ ಆಯ್ಕೆಯಾದ ದೇವೇಗೌಡರ ಮೊಮ್ಮಗ
Recommended Video
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕರ್ಮಭೂಮಿ ಹಾಸನದಲ್ಲಿ ಈ ಬಾರಿ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಲೋಕಸಭೆ ಆಯ್ಕೆ ಬಯಸಿ ಕಣಕ್ಕಿಳಿದಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ಸಿನಿಂದ ಮುನಿಸಿಕೊಂಡು ಬಿಜೆಪಿ ಸೇರಿರುವ ಮಾಜಿ ಸಚಿವ ಅರಕಲಗೂಡು ಮಂಜು ಅವರು ಸವಾಲು ಹಾಕಿದ್ದರು. ಆದರೆ, ಚೊಚ್ಚಲ ಪ್ರಯತ್ನದಲ್ಲೇ ಪ್ರಜ್ವಲ್ ರೇವಣ್ಣ ಅವರು ಸಂಸತ್ತಿಗೆ ಆಯ್ಕೆಯಾಗಿದ್ದಾರೆ.
ಹಾಸನ ಲೋಕಸಭೆ ಚುನಾವಣೆ ಏಪ್ರಿಲ್ 18ರಂದು ಮತದಾನ ನಡೆದಿತ್ತು, ಮೇ 23ರಂದು ಅಂತಿಮ ಫಲಿತಾಂಶ ಇಲ್ಲಿದೆ. ಈ ಸಮಯಕ್ಕೆ ಲಭ್ಯವಿರುವ ಗೆದ್ದವರು ಹಾಗೂ ಸೋತ ಪ್ರಮುಖ ಅಭ್ಯರ್ಥಿಗಳ ವಿವರ ನೀಡಲಾಗಿದೆ. ಚುನಾವಣಾ ಆಯೋಗದಿಂದ ಅಂತಿಮ ಫಲಿತಾಂಶ ಪ್ರಕಟವಾದ ಬಳಿಕ ಮತಗಳ ಗಳಿಕೆ ಸಂಖ್ಯೆಯಲ್ಲಿ ವ್ಯತ್ಯಾಸ ಕಾಣಬಹುದು.
ಕಡೂರು, ಶ್ರವಣಬೆಳಗೊಳ, ಅರಸೀಕೆರೆ, ಬೇಲೂರು, ಹಾಸನ, ಹೊಳೆನರಸೀಪುರ, ಅರಕಲಗೂಡು, ಸಕಲೇಶಪುರ ಈ ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮಲೆನಾಡು, ಅರೆ ಮಲೆನಾಡು, ಬಯಲು ಸೀಮೆಯನ್ನು ಒಳಗೊಂಡ ಕ್ಷೇತ್ರದಲ್ಲಿ ಹೇಮಾವತಿ ಜೀವನದಿಯಾಗಿದೆ.

ಫಲಿತಾಂಶ 2019:
ಫಲಿತಾಂಶ 2019:
ಒಟ್ಟು ಎಣಿಕೆಯಾದ 12,77,552 ಮತಗಳ ಪೈಕಿ 12,74,438 ಇವಿಎಂ ಮತಗಳು ಹಾಗೂ 3114 ಅಂಚೆ ಮತಗಳು.
ಪ್ರಜ್ವಲ್ ರೇವಣ್ಣ(ಜೆಡಿಎಸ್) : ಗಳಿಸಿದ ಮತ 6,76,606(52.96%)
ಎ ಮಂಜು (ಬಿಜೆಪಿ): 535282 ಮತಗಳು(41.9%)
ವಿನೋದ್ ರಾಜ್ (ಬಿಎಸ್ ಪಿ) : 38761 ಮತಗಳು(3.03%)

2014ರ ಫಲಿತಾಂಶ
2014ರಲ್ಲಿ ಕಾಂಗ್ರೆಸ್ಸಿನ ಅರಕಲಗೂಡು ಮಂಜು (409,379ಮತಗಳು) ವಿರುದ್ಧ 100462 ಮತಗಳ ಅಂತರದಿಂದ ದೇವೇಗೌಡರು(509841 ಮತಗಳು) ಜಯ ಗಳಿಸಿದ್ದರು. 2014ರಲ್ಲಿ ಶೇ 73ರಷ್ಟು ಮತದಾನವಾಗಿತ್ತು. ಒಟ್ಟು 11,47,172 ಮತಗಳ ಪೈಕಿ 5,86,090 ಪುರುಷರು, 5,61,082 ಮಹಿಳಾ ಮತಗಳು ದಾಖಲಾಗಿತ್ತು.

1980ರಿಂದ ಜೆಡಿಎಸ್ 5 ಬಾರಿ ಗೆಲುವು
ದೇವೇಗೌಡ ಅವರು ಹಾಸನ ಜಿಲ್ಲೆಯಿಂದ ರಾಜಕೀಯ ಆರಂಭಿಸಿ, ಪ್ರಧಾನಿ ಪಟ್ಟಕ್ಕೇರಿದವರು. ಎರಡು ಬಾರಿ ಇಲ್ಲಿ ಸೋಲು ಕಂಡಿದ್ದು ಬಿಟ್ಟರೆ, ಹಾಸನದಲ್ಲಿ 85 ವರ್ಷ ವಯಸ್ಸಿನ 24/7 ರಾಜಕಾರಣಿ ದೇವೇಗೌಡರದ್ದೇ ದರ್ಬಾರು. 1980ರಿಂದ ಇಲ್ಲಿ ತನಕ ಸ್ಟ್ರೈಕ್ ರೇಟ್ ನೋಡಿದರೆ ಜೆಡಿಎಸ್ 5 ಬಾರಿ ಗೆಲುವು ಸಾಧಿಸಿ ಶೇ56ರಷ್ಟು ಗೆಲುವಿನ ಸರಾಸರಿ ಹೊಂದಿದ್ದರೆ, ಕಾಂಗ್ರೆಸ್ 4 ಬಾರಿ ಗೆಲುವು ಸಾಧಿಸಿ ಶೇ 44ರಷ್ಟು ಗೆಲುವನ್ನು ಕಂಡಿದೆ.

ಜಾತಿ ಲೆಕ್ಕಾಚಾರದಲ್ಲೂ ಗೆದ್ದ ರೇವಣ್ಣ
ಕುರುಬರು ಹೆಚ್ಚಿರುವ ಕಡೂರು ಕ್ಷೇತ್ರ ಸೇರಿರುವುದರಿ೦ದ ಜಾತಿ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಒಕ್ಕಲಿಗರು, ಲಿಂಗಾಯತರು, ಕುರುಬರು, ಎಸ್ ಟಿ, ಎಸ್ಟಿ, ಮುಸ್ಲಿಮರು ಹಾಗೂ ಇತರರು ಕ್ರಮವಾಗಿ ಇಲ್ಲಿ ಏರಿಕೆಯಿಂದ ಇಳಿಕೆ ಪ್ರಮಾಣದಲ್ಲಿ ಗುರುತಿಸಿಕೊಂಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications