ಹಾಸನ ಫಲಿತಾಂಶ LIVE: ಪ್ರಜ್ವಲ್ ರೇವಣ್ಣಗೆ ಭರ್ಜರಿ ಗೆಲುವು
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕರ್ಮಭೂಮಿ ಹಾಸನದಲ್ಲಿ ಈ ಬಾರಿ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಲೋಕಸಭೆ ಆಯ್ಕೆ ಬಯಸಿ ಕಣಕ್ಕಿಳಿದಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ಸಿನಿಂದ ಮುನಿಸಿಕೊಂಡು ಬಿಜೆಪಿ ಸೇರಿರುವ ಮಾಜಿ ಸಚಿವ ಅರಕಲಗೂಡು ಮಂಜು ಅವರು ಸವಾಲು ಹಾಕಿದ್ದಾರೆ. ಹಾಸನ ಲೋಕಸಭೆ ಚುನಾವಣೆ ಏಪ್ರಿಲ್ 18ರಂದು ಮತದಾನ ನಡೆದಿತ್ತು, ಮೇ 23ರಂದು ಅಂತಿಮ ಫಲಿತಾಂಶ ಬರಲಿದೆ. ಸದ್ಯದ ಅಪ್ಡೇಟ್ಸ್ ಇಲ್ಲಿದೆ...
ಅರಕಲಗೂಡು ಮಂಜು ವಿರುದ್ಧ ಪ್ರಜ್ವಲ್ ರೇವಣ್ಣ ಜಯ ದಾಖಲಿಸಿ, ಚೊಚ್ಚಲ ಪ್ರಯತ್ನದಲ್ಲೇ ಸಂಸದರಾಗಿ ಆಯ್ಕೆಯಾಗಿದ್ದಾರೆ.
11.08: ಕೈ ತೆನೆ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ 86,683 ಮತಗಳಿಂದ ಮುನ್ನಡೆ,
* ಪ್ರಜ್ವಲ್ಗೆ 3,98,402 ಮತ. ಬಿಜೆಪಿ ಅಭ್ಯರ್ಥಿ ಎ. ಮಂಜುಗೆ 3,11,719 ಮತ.
10.21: ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ 52,582 ಸಾವಿರ ಅಂತರದ ಮುನ್ನಡೆ
10.00: 4ನೇ ಸುತ್ತಿನ ಎಣಿಕೆ ಮುಕ್ತಾಯ, ಪ್ರಜ್ವಲ್ ರೇವಣ್ಣಗೆ 40,998 ಮತಗಳ ಮುನ್ನಡೆ
9.45: 4ನೇ ಸುತ್ತಿನಲ್ಲಿ ಪ್ರಜ್ವಲ್ ರೇವಣ್ಣ 36, 555 ಮತಗಳ ಮುನ್ನಡೆ.
9.20: 24619 ಮತಗಳ ಅಂತರದ ಮುನ್ನಡೆ ಪಡೆದ ಪ್ರಜ್ವಲ್ ರೇವಣ್ಣ
9.13: 21 ಸಾವಿರ ಮತಗಳ ಅಂತರ ಕಾಯ್ದುಕೊಂಡ ಪ್ರಜ್ವಲ್ ರೇವಣ್ಣ
9.09: 13 ಸಾವಿರ ಅಂತರದ ಮುನ್ನಡೆ ಪಡೆದ ಪ್ರಜ್ವಲ ರೇವಣ್ಣ
ಕಡೂರು, ಶ್ರವಣಬೆಳಗೊಳ, ಅರಸೀಕೆರೆ, ಬೇಲೂರು, ಹಾಸನ, ಹೊಳೆನರಸೀಪುರ, ಅರಕಲಗೂಡು, ಸಕಲೇಶಪುರ ಈ ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮಲೆನಾಡು, ಅರೆ ಮಲೆನಾಡು, ಬಯಲು ಸೀಮೆಯನ್ನು ಒಳಗೊಂಡ ಕ್ಷೇತ್ರದಲ್ಲಿ ಹೇಮಾವತಿ ಜೀವನದಿಯಾಗಿದೆ.

ಕುರುಬರು ಹೆಚ್ಚಿರುವ ಕಡೂರು ಕ್ಷೇತ್ರ ಸೇರಿರುವುದರಿ೦ದ ಜಾತಿ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಒಕ್ಕಲಿಗರು, ಲಿಂಗಾಯತರು, ಕುರುಬರು, ಎಸ್ ಟಿ, ಎಸ್ಟಿ, ಮುಸ್ಲಿಮರು ಹಾಗೂ ಇತರರು ಕ್ರಮವಾಗಿ ಇಲ್ಲಿ ಏರಿಕೆಯಿಂದ ಇಳಿಕೆ ಪ್ರಮಾಣದಲ್ಲಿ ಗುರುತಿಸಿಕೊಂಡಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications