ಹಾಸನ ಫಲಿತಾಂಶ LIVE: ಪ್ರಜ್ವಲ್ ರೇವಣ್ಣಗೆ ಭರ್ಜರಿ ಗೆಲುವು
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕರ್ಮಭೂಮಿ ಹಾಸನದಲ್ಲಿ ಈ ಬಾರಿ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಲೋಕಸಭೆ ಆಯ್ಕೆ ಬಯಸಿ ಕಣಕ್ಕಿಳಿದಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ಸಿನಿಂದ ಮುನಿಸಿಕೊಂಡು ಬಿಜೆಪಿ ಸೇರಿರುವ ಮಾಜಿ ಸಚಿವ ಅರಕಲಗೂಡು ಮಂಜು ಅವರು ಸವಾಲು ಹಾಕಿದ್ದಾರೆ. ಹಾಸನ ಲೋಕಸಭೆ ಚುನಾವಣೆ ಏಪ್ರಿಲ್ 18ರಂದು ಮತದಾನ ನಡೆದಿತ್ತು, ಮೇ 23ರಂದು ಅಂತಿಮ ಫಲಿತಾಂಶ ಬರಲಿದೆ. ಸದ್ಯದ ಅಪ್ಡೇಟ್ಸ್ ಇಲ್ಲಿದೆ...
ಅರಕಲಗೂಡು ಮಂಜು ವಿರುದ್ಧ ಪ್ರಜ್ವಲ್ ರೇವಣ್ಣ ಜಯ ದಾಖಲಿಸಿ, ಚೊಚ್ಚಲ ಪ್ರಯತ್ನದಲ್ಲೇ ಸಂಸದರಾಗಿ ಆಯ್ಕೆಯಾಗಿದ್ದಾರೆ.
11.08: ಕೈ ತೆನೆ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ 86,683 ಮತಗಳಿಂದ ಮುನ್ನಡೆ,
* ಪ್ರಜ್ವಲ್ಗೆ 3,98,402 ಮತ. ಬಿಜೆಪಿ ಅಭ್ಯರ್ಥಿ ಎ. ಮಂಜುಗೆ 3,11,719 ಮತ.
10.21: ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ 52,582 ಸಾವಿರ ಅಂತರದ ಮುನ್ನಡೆ
10.00: 4ನೇ ಸುತ್ತಿನ ಎಣಿಕೆ ಮುಕ್ತಾಯ, ಪ್ರಜ್ವಲ್ ರೇವಣ್ಣಗೆ 40,998 ಮತಗಳ ಮುನ್ನಡೆ
9.45: 4ನೇ ಸುತ್ತಿನಲ್ಲಿ ಪ್ರಜ್ವಲ್ ರೇವಣ್ಣ 36, 555 ಮತಗಳ ಮುನ್ನಡೆ.
9.20: 24619 ಮತಗಳ ಅಂತರದ ಮುನ್ನಡೆ ಪಡೆದ ಪ್ರಜ್ವಲ್ ರೇವಣ್ಣ
9.13: 21 ಸಾವಿರ ಮತಗಳ ಅಂತರ ಕಾಯ್ದುಕೊಂಡ ಪ್ರಜ್ವಲ್ ರೇವಣ್ಣ
9.09: 13 ಸಾವಿರ ಅಂತರದ ಮುನ್ನಡೆ ಪಡೆದ ಪ್ರಜ್ವಲ ರೇವಣ್ಣ
ಕಡೂರು, ಶ್ರವಣಬೆಳಗೊಳ, ಅರಸೀಕೆರೆ, ಬೇಲೂರು, ಹಾಸನ, ಹೊಳೆನರಸೀಪುರ, ಅರಕಲಗೂಡು, ಸಕಲೇಶಪುರ ಈ ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮಲೆನಾಡು, ಅರೆ ಮಲೆನಾಡು, ಬಯಲು ಸೀಮೆಯನ್ನು ಒಳಗೊಂಡ ಕ್ಷೇತ್ರದಲ್ಲಿ ಹೇಮಾವತಿ ಜೀವನದಿಯಾಗಿದೆ.

ಕುರುಬರು ಹೆಚ್ಚಿರುವ ಕಡೂರು ಕ್ಷೇತ್ರ ಸೇರಿರುವುದರಿ೦ದ ಜಾತಿ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಒಕ್ಕಲಿಗರು, ಲಿಂಗಾಯತರು, ಕುರುಬರು, ಎಸ್ ಟಿ, ಎಸ್ಟಿ, ಮುಸ್ಲಿಮರು ಹಾಗೂ ಇತರರು ಕ್ರಮವಾಗಿ ಇಲ್ಲಿ ಏರಿಕೆಯಿಂದ ಇಳಿಕೆ ಪ್ರಮಾಣದಲ್ಲಿ ಗುರುತಿಸಿಕೊಂಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications