ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ 3 ದಿನ ಸಂಚಾರ ಸ್ಥಗಿತ
ಹಾಸನ, ಜುಲೈ 23 : ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮೂರು ದಿನಗಳ ಕಾಲ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಭೂ ಕುಸಿತವಾಗುವ ಪ್ರದೇಶದಲ್ಲಿ ನೈಋತ್ಯ ರೈಲ್ವೆ ಕಾಮಗಾರಿಯನ್ನು ಕೈಗೊಂಡಿದೆ.
ಸುಬ್ರಮಣ್ಯ-ಸಕಲೇಶಪುರ ನಡುವಿನ ಶಿರಿಬಾಗಿಲು ಬಳಿ ರೈಲ್ವೆ ಹಳಿ ಮೇಲೆ ಉರುಳುವ ಸ್ಥಿತಿಯಲ್ಲಿರುವ ಬಂಡೆಯನ್ನು ತೆರವುಗೊಳಿಸಲಾಗುತ್ತಿದೆ. ಆದ್ದರಿಂದ, ಕೆಲವು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ, ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.
ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ ರದ್ದು
ರೈಲ್ವೆ ಮಾರ್ಗದ ಸುರಂಗ ಮಾರ್ಗದ ಬಳಿ ಹಳಿಯ ಮೇಲೆ ಕೆಲವು ಬಂಡೆಗಳು ಉರುಳುವ ಸ್ಥಿತಿಯಲ್ಲಿದೆ. ಬಂಡೆಯನ್ನು ಸ್ಫೋಟಿಸಿ, ಜೆಸಿಬಿ ಯಂತ್ರಗಳ ಸಹಾಯದಿಂದ ಅವುಗಳನ್ನು ತೆರವು ಮಾಡಲಾಗುತ್ತಿದೆ. ಈ ಕಾಮಗಾರಿ ಮೂರು ದಿನಗಳ ಕಾಲ ನಡೆಯುವ ನಿರೀಕ್ಷೆ ಇದೆ.
ಹಾಸನ ವಿಮಾನ ನಿಲ್ದಾಣ : ರೈತರ ಜಮೀನಿಗೆ ನೀಡುವ ಪರಿಹಾರ ಏರಿಕೆ
ಮಂಗಳವಾರ ಹೊರಡಬೇಕಿದ್ದ ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್, ಮಂಗಳೂರು ಜಂಕ್ಷನ್-ಯಶವಂತಪುರ ಎಕ್ಸ್ಪ್ರೆಸ್, ಬುಧವಾರ ಸಂಚಾರ ನಡೆಸಬೇಕಿದ್ದ ಮಂಗಳೂರು ಜಂಕ್ಷನ್-ಯಶವಂತಪುರ ಎಕ್ಸ್ಪ್ರೆಸ್ ರೈಲುಗಳ ಸಂಚಾರ ರದ್ದುಗೊಂಡಿದೆ.
ಬೆಳಗಾವಿ-ಬೆಂಗಳೂರು ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ ಸೇರ್ಪಡೆ
ಯಶವಂತಪುರ-ಕಾರವಾರ ಎಕ್ಸ್ಪ್ರೆಸ್, ಗುರುವಾರ ಹೊರಡಬೇಕಿದ್ದ ಕಾರವಾರ-ಯಶವಂತಪುರ ಎಕ್ಸ್ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಗೊಳಿಸಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ.
ಮಂಗಳೂರಿಗೆ ಸೀಮಿತ : ಕಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಬೆಂಗಳೂರು- ಕಾರವಾರ ಮತ್ತು ಕಾರವಾರ ಕೆಎಸ್ಆರ್ ಬೆಂಗಳೂರು ನಡುವೆ ಮಂಗಳವಾರ, ಬುಧವಾರ ಮತ್ತು ಗುರುವಾರ ಸಂಚರಿಸಬೇಕಿದ್ದ ರೈಲುಗಳನ್ನು ಮಂಗಳೂರಿಗೆ ಸೀಮಿತಗೊಳಿಸಲಾಗಿದೆ.
ಮಾರ್ಗ ಬದಲಾವಣೆ : ಕೆಎಸ್ಆರ್ ಬೆಂಗಳೂರು-ಕಣ್ಣೂರು/ಕಾರವಾರ ಎಕ್ಸ್ಪ್ರೆಸ್ ರೈಲು ಮಂಗಳವಾರ ಮತ್ತು ಬುಧವಾರ ಮೈಸೂರು, ಹಾಸನ, ಸಕಲೇಶಪುರ, ಸುಬ್ರಮಣ್ಯ ಬದಲು ಜೋಲಾರ್ಪೇಟ್, ಸೇಲಂ, ಪಲ್ಫಾಟ್, ಶೋರನೂರು ಮಾರ್ಗವಾಗಿ ಸಂಚಾರ ನಡೆಸಲಿದೆ.
ಕಣ್ಣೂರು/ಕಾರವಾರ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ರೈಲು ಮಂಗಳವಾರ ಮತ್ತು ಬುಧವಾರ ಸುಬ್ರಮಣ್ಯ ರೋಡ್, ಸಕಲೇಶಪುರ, ಹಾಸನ, ಶ್ರವಣಬೆಳಗೊಳದ ಬದಲು ಶೋರನೂರು, ಪಾಲ್ಫಟ್, ಸೇಲಂ, ಜೋಲಾರಪೇಟೆ ಮಾರ್ಗವಾಗಿ ಸಂಚಾರ ನಡೆಸಲಿದೆ.