ಸಂಸದನಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾದ ಪ್ರಜ್ವಲ್
Recommended Video
ಹಾಸನ, ಮೇ 27: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರಕಲಗೂಡು ಮಂಜು ವಿರುದ್ಧ ಉತ್ತಮ ಅಂತರದಿಂದ ಜಯ ದಾಖಲಿಸಿ, ಜೆಡಿಎಸ್ ನ ಏಕೈಕ ಸಂಸದ ಎನಿಸಿರುವ ಪ್ರಜ್ವಲ್ ರೇವಣ್ಣ ಅವರು ಕೊನೆಗೂ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ದಿನಾಂಕ ನಿಗದಿ ಮಾಡಿದ್ದಾರೆ.
'ಮಾಜಿ ಪ್ರಧಾನಿ ದೇವೇಗೌಡರು ಸೋತರೂ ಅವರ ಶಕ್ತಿ ಕುಗ್ಗಿಲ್ಲ. ಅವರ ಶಕ್ತಿ ನಮ್ಮ ಪಕ್ಷದ ಎಲ್ಲರ ಮೇಲಿದೆ. ಅವರ ಆಶೀರ್ವಾದ ಇದ್ದರೆ ನಾವು ಏನು ಬೇಕಾದರೂ ಜಯಿಸುತ್ತೇವೆ' ಎಂದಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ಈಗಲೂ ತಮ್ಮ ಕ್ಷೇತ್ರವನ್ನು ಬಿಟ್ಟುಕೊಡಲು ಸಿದ್ಧ ಎಂದಿದ್ದಾರೆ.
'ರಾಜೀನಾಮೆ ವಿಚಾರವನ್ನು ಅವರ ಮುಂದೆ ಇಟ್ಟು ಬಂದಿದ್ದೇನೆ. ನಾನು ಜೂನ್ 4 ರಂದು ಪ್ರಮಾಣ ವಚನ ಸ್ವೀಕಾರ ಮಾಡುತ್ತೇನೆ. ಆ ನಂತರ ನಾನು ಹಾಗೂ ಜಿಲ್ಲಾ ನಾಯಕರು ಗೌಡರ ಬಳಿಗೆ ಹೋಗಿ ಮತ್ತೆ ಒತ್ತಡ ಹಾಕುತ್ತೇವೆ. ಸಂಸತ್ ಸ್ಥಾನಕ್ಕೆ ರಾಜೀನಾಮೆ ಕೊಡುವ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದು ಹೇಳಿದರು.
ಮಾಜಿ ಪ್ರಧಾನಿ, ಹಾಸನದ ಹಾಲಿ ಸಂಸದರಾಗಿದ್ದ ದೇವೇಗೌಡ ಅವರು ಸ್ವಕ್ಷೇತ್ರವನ್ನು ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟು, ನನ್ನ ರಾಜಕೀಯ ಉತ್ತರಾಧಿಕಾರಿ ಎಂದು ಹಾರೈಸಿದ್ದರು. ನಂತರ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ಬದಲಿಗೆ ದೇವೇಗೌಡ ಸ್ಪರ್ಧಿಸಿ, ಬಿಜೆಪಿಯ ಜಿಎಸ್ ಬಸವರಾಜು ವಿರುದ್ಧ ಸೋಲು ಕಂಡಿದ್ದಾರೆ.

2019ರಲ್ಲಿ ಹಾಸನ ಲೋಕಸಭೆ ಫಲಿತಾಂಶ
ಹಾಸನ ಲೋಕಸಭಾ ಕ್ಷೇತ್ರದ ಫಲಿತಾಂಶ 2019ರಂತೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು 6,76,606 ಮತ(52.96%) ಪಡೆದು ಜಯಭೇರಿ ಬಾರಿಸಿದರೆ, ಮಂಜು ಅವರು 5,35,282 ಮತ(41.9%) ಗಳಿಸಿ ಸೋಲು ಕಂಡರು. ಆದರೆ, ತುಮಕೂರಿನಲ್ಲಿ ತಾತಾ ದೇವೇಗೌಡರು ಸೋಲು ಕಂಡಿದ್ದರಿಂದ ಮನನೊಂದು ಹಾಸನದ ಸ್ಥಾನ ಬಿಟ್ಟುಕೊಡುವೆ ಎಂದು ಪ್ರಜ್ವಲ್ ಹೇಳಿದ್ದು, ಇಂದಿಗೂ ಚರ್ಚೆಯಲ್ಲಿದೆ

ಶಾಸಕ ಪ್ರೀತಂಗೌಡ ವಿರುದ್ಧ ಪ್ರಜ್ವಲ್ ಗರಂ
'ನಾನು ಹಾಸನ ತಾಲೂಕಿನಲ್ಲಿ ಲೀಡ್ ಪಡೆಯದೇ ಹೋದ್ರೆ ಪಪ್ಪು ಎನಿಸಿಕೊಳ್ಳುವೆ ಎಂದಿದ್ದೆ. ಈಗ 15 ಸಾವಿರ ಲೀಡ್ ಪಡೆದಿದ್ದೇನೆ. ಪ್ರೀತಂಗೌಡ ಪಪ್ಪು ಆಗ್ತಾರಾ ಎಂದು ಪ್ರಶ್ನಿಸಿದರು. ಸಮ್ಮಿಶ್ರ ಸರಕಾರ ಪತನವಾಗಲಿದೆ ಎನ್ನುವುದು ಊಹಾಪೋಹ. ರಾಜ್ಯದ ಹಿತದೃಷ್ಟಿಯಿಂದ ಸಿಎಂ ಮತ್ತು ಡಿಸಿಎಂ ಆಡಳಿತ ನಡೆಸುತ್ತಿದ್ದಾರೆ. ಉಭಯ ಪಕ್ಷಗಳ ನಡುವೆ ಯಾವುದೇ ಲೋಪದೋಷ ಇಲ್ಲ ಎಂದು ಹೇಳಿದರು.

ರಾಜೀನಾಮೆ ನೀಡಲು ಮುಂದಾಗಿರುವುದೇಕೆ?
ರಾಜ್ಯ ಮತ್ತು ರೈತರ ಹಿತದೃಷ್ಟಿಯಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ. ಕೇಂದ್ರಮಟ್ಟದಲ್ಲಿ ಅವರಿಗೆ ದೊಡ್ಡ ಗೌರವ ಇದೆ. ಇದರಿಂದ ರಾಜ್ಯಕ್ಕೆ ಹಲವು ರೀತಿಯ ಅನುದಾನ ತರಲು ಸಹಕಾರಿಯಾಗಲಿದೆ' ಎಂದು ಖಾಸಗಿ ಸುದ್ದಿವಾಹಿನಿ ಜತೆ ಮಾತನಾಡುತ್ತಾ ಹೇಳಿದರು.

ಸಾಮಾಜಿಕ ಜಾಲ ತಾಣಗಳಲ್ಲಿ ಟ್ರಾಲ್
ಚೊಚ್ಚಲ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ, ಮೊದಲ ಪ್ರಯತ್ನದಲ್ಲೇ ಪ್ರಜ್ವಲ್ ರೇವಣ್ಣ ಅವರು ಸಂಸದರಾಗಿದ್ದಾರೆ. ಕರ್ನಾಟಕದ ಯುವ ಸಂಸದರ ಪೈಕಿ ಒಬ್ಬರೆನಿಸಿದ್ದಾರೆ. ಆದರೆ, ಭಾವನಾತ್ಮಕವಾಗೋ, ಮೂರ್ಖತನದಿಂದಲೋ, ಜನಾದೇಶವನ್ನು ಬದಿಗೊತ್ತಿ, ತಾತನ ಮೇಲಿನ ಪ್ರೀತಿಯನ್ನು ತೋರಿಸಲು ಹೋಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಸಿಟ್ಟಿಗೇಳುವಂತೆ ಮಾಡಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications