ಮತ್ತೆ ನಾನೇ ಹಾಸನ ಕ್ಷೇತ್ರದ ಸಂಸದನಾಗುವೆ: ಎ.ಮಂಜು
ಹಾಸನ, ಸೆ 4: ಕೇಂದ್ರ ಚುನಾವಣಾ ಆಯೋಗ, ಹಾಸನದ ಜಿಲ್ಲಾಧಿಕಾರಿಗಳಿಗೆ ವರದಿ ನೀಡುವಂತೆ ಸೂಚಿಸಿರುವದಕ್ಕೆ ಬಿಜೆಪಿ ಮುಖಂಡ ಎ.ಮಂಜು ಹರ್ಷ ವ್ಯಕ್ತ ಪಡಿಸಿದ್ದಾರೆ.
Recommended Video
"ಜೆಡಿಎಸ್ ನಾಯಕ, ಹಾಲೀ ಕ್ಷೇತ್ರದ ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಅವರು ಸುಳ್ಳು ಅಫಿಡವಿಟ್ ಸಲ್ಲಿಸಿದ್ದಾರೆಂದು ಹಿಂದೆಯಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಈಗ ಅದಕ್ಕೆ ತಾರ್ಕಿಕ ಅಂತ್ಯ ಸಿಗುವ ಸಾಧ್ಯತೆಯಿದೆ"ಎಂದು ಮಂಜು ಹೇಳಿದ್ದಾರೆ.
"ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ವರದಿ ನೀಡುವಂತೆ ಚುನಾವಣಾ ಆಯೋಗ ಹಾಸನ ಡಿಸಿಗೆ ಸೂಚಿಸಿದೆ" ಎ.ಮಂಜು ತಿಳಿಸಿದ್ದಾರೆ.

"ಮಹಾರಾಷ್ಟ್ರದಲ್ಲಿ ಒಬ್ಬರು ಶಾಸಕರು ಸುಳ್ಳು ಪ್ರಮಾಣಪತ್ರ ನೀಡಿ, ಸಿಕ್ಕಿಬಿದ್ದು, ಶಾಸಕ ಸ್ಥಾನದಿಂದ ವಜಾಗೊಂಡಿದ್ದರು. ಇಲ್ಲೂ ಹೀಗೇ ಆಗಲಿದೆ, ನಾನು ಮತ್ತೆ ಹಾಸನದ ಸಂಸದನಾಗುತ್ತೇನೆ ಎನ್ನುವ ಸಂಪೂರ್ಣ ಭರವಸೆ ನನಗಿದೆ"ಎನ್ನುವ ಆಶಾಭಾವನೆಯನ್ನು ಮಂಜು ಹೊರಹಾಕಿದ್ದಾರೆ.
ಕರ್ನಾಟಕ ಉಚ್ಚ ನ್ಯಾಯಾಲಯದ, ನ್ಯಾ. ಮೈಕಲ್ ಡಿ. ಕುನ್ಹಾ ನೇತೃತ್ವದ ಏಕ ಸದಸ್ಯ ಪೀಠ ಎ. ಮಂಜು ಸಲ್ಲಿಸಿದ್ದ ದೂರನ್ನು ತಾಂತ್ರಿಕ ಕಾರಣಗಳಿಂದ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ, ಮಂಜು, ಸರ್ವೋಚ್ಚ ನ್ಯಾಯಾಲಯದ ಮೆಟ್ಟಲೇರಿದ್ದರು.
ಎ. ಮಂಜು, ಕೇಂದ್ರ ಚುನಾವಣಾ ಆಯೋಗಕ್ಕೂ ಈ ಕುರಿತು ಪತ್ರ ಬರೆದಿದ್ದರು. ಗುರುವಾರ (ಸೆ 3) ಚುನಾವಣಾ ಆಯೋಗ ಈ ಕುರಿತು ವರದಿ ನೀಡುವಂತೆ ಹಾಸನ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವುದರಿಂದ, ಡಿಸಿ ನೀಡುವ ವರದಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಕಳೆದ (2019) ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಎ.ಮಂಜು, ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ದ 141,324 ಮತಗಳ ಅಂತರದಿಂದ ಪರಾಭವಗೊಂಡಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications