ಅರಸೀಕೆರೆಯಲ್ಲಿ ತೆರೆದ ವಾಹನದಲ್ಲಿ ನಿಂತು ದೇವೇಗೌಡರ ಭರ್ಜರಿ ಚುನಾವಣಾ ಪ್ರಚಾರ
ಹಾಸನ, ಮೇ 04: ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಗ್ರಾಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಜೆಡಿಎಸ್ ಅಭ್ಯರ್ಥಿ ಎನ್.ಆರ್.ಸಂತೋಷ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಗಂಡಸಿ ಗ್ರಾಮದಲ್ಲಿ ನಡೆದ ಜೆಡಿಎಸ್ ರೋಡ್ ಶೋನಲ್ಲಿ ತೆರೆದ ವಾಹನದಲ್ಲಿ ನಿಂತು ದೇವೇಗೌಡರು ಮತಯಾಚನೆ ಮಾಡಿದ್ದಾರೆ.
ಈ ವೇಳೆ ಮಾಜಿ ಸಚಿವ ಎಚ್.ಡಿ ರೇವಣ್ಣ, ಭವಾನಿ ರೇವಣ್ಣ ಹಾಗೂ ಜೆಡಿಎಸ್ ರಾಜ್ಯ ಅಧ್ಯಕ್ಷ ಸಿಎಂ ಇಬ್ರಾಹಿಂ ಕೂಡ ಚುನಾವಣಾ ಪ್ರಚಾರ ನಡೆಸಿದ್ದು, ದೇವೇಗೌಡರನ್ನು ಕಂಡ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಹರ್ಷೋದ್ಗಾರದಿಂದ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.

ಅರಸೀಕೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎನ್.ಆರ್ ಸಂತೋಷ್ ಪರ ಪ್ರಚಾರಕ್ಕೆ ಆಗಮಿಸಿದ ವೇಳೆ ಮಾತನಾಡಿದ ದೇವೇಗೌಡರು, ಇಂದು ಮತ್ತೆ ನಾಳೆ ಹಾಸನ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಪ್ರಚಾರ ಮಾಡಲು ಸಿದ್ಧನಾಗಿ ಬಂದಿದ್ದೇನೆ. ಯಾವುದೇ ಕ್ಷೇತ್ರವನ್ನು ಕಡೆಗಣಿಸುವ ಪ್ರಶ್ನೆ ಇಲ್ಲ. ಕಡೂರು ಸೇರಿ ಎಲ್ಲಾ ಕ್ಷೇತ್ರದಲ್ಲಿ ಗೆಲ್ಲುವ ಸಂಕಲ್ಪ ಮಾಡಿದ್ದೇವೆ. ಭವಾನಿ ಅವರು ಹಾಸನದಲ್ಲಿ ಸ್ವರೂಪ್ ಅವರನ್ನು ತನ್ನ ಮೂರನೇ ಮಗ ಎಂದು ಘೋಷಣೆ ಮಾಡಿದ್ದಾರೆ ಎಂದರು.
ಮೊನ್ನೆ ಪ್ರಧಾನಿ ಮೋದಿಯವರು ಜಿಲ್ಲೆಯ ಬೇಲೂರಿಗೆ ಬಂದಿದ್ದರು. ನಾನೂ ಕೂಡ ಅಲ್ಲಿಗೇ ಹೋಗುತ್ತಿದ್ದೇನೆ, ನಾಳೆವರೆಗೂ ಕೂಡ ಹಾಸನದಲ್ಲಿ ಪ್ರಚಾರ ನಡೆಸುತ್ತೇನೆ ಎಂದ ಅವರು, ಜೆಡಿಎಸ್ ಬಿ ಟೀಮ್ ಎನ್ನುವ ಪ್ರಧಾನಿ ಮೋದಿ ಹೇಳಿಕೆಯನ್ನು ಖಂಡಿಸಿದರು.

ಸಕಳೆದ ಬಾರಿ ಹಾಸನದಲ್ಲಿ ರಾಹುಲ್ ಗಾಂಧಿ ಏನು ಹೇಳಿದರು ಎಂದು ನೆನಪಿದೆ ಅಲ್ವಾ. ಕಳೆದ ಬಾರಿ ಅವರು ಮಾಡಿದ ಕೆಲಸ ಈ ಬಾರಿ ಮೋದಿ ಮಾಡಿದ್ದಾರೆ. ಇದರಲ್ಲಿ ವ್ಯತ್ಯಾಸ ಏನಿಲ್ಲ ಎಂದು ವಾಗ್ದಾಳಿ ನಡೆಸಿದರು.
ಮಾತು ಮುಂದುವರಿಸಿದ ದೇವೇಗೌಡರು, ರಾಹುಲ್ ಓರ್ವ ಯುವಕ, ಮೋದಿ ಪ್ರಬುದ್ಧ ವ್ಯಕ್ತಿ, ಮೋದಿಯವರಿಂದ ಇಂತಹ ಮಾತನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ರಾಹುಲ್ ಓರ್ವ ಯಂಗ್ ಸ್ಟಾರ್ ಮಾತಾಡಿದರು, ಆದರೆ ಮೋದಿ ಅವರು ಪ್ರಧಾನಿ. ಹತ್ತು ವರ್ಷ ಪ್ರಧಾನಿಯಾಗಿ ಈ ದೇಶ ಆಳಿದವರು. ಜೆಡಿಎಸ್ ಬಗ್ಗೆ ಇಷ್ಟು ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications