ದೇವೇಗೌಡರು ನನ್ನ ಹಂಗಲ್ಲಿ ಇದ್ದಾರೆಂದ ಸಚಿವ ಎ ಮಂಜು
ಹಾಸನ, ಜನವರಿ 25 : "ದೇವೇಗೌಡರಿಗೆ ವಯಸ್ಸಾಗಿದೆ. ಅದಕ್ಕೇ ಏನೇನೋ ಮಾತಾಡ್ತಾರೆ. ನಾನು ಏಳನೇ ಕ್ಲಾಸನ್ನೇ ಏಳು ಸಾರಿ ಫೇಲಾಗಿ ಅವರ ಥರಾ ಮಂತ್ರಿ ಆದವನಲ್ಲ. ನಮ್ಮಪ್ಪ ನನ್ನನ್ನು ಡಬಲ್ ಡಿಗ್ರಿ ಮಾಡಿಸಿದ್ದಾರೆ" ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ವಿರುದ್ಧ ಸಚಿವ ಎ.ಮಂಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ನಾನು ಯಾರದೋ ಕೃಪಾ ಕಟಾಕ್ಷದಿಂದ ಮಂತ್ರಿಯಾಗಿಲ್ಲ. ದೇವೇಗೌಡರು ಯಾರ ಸಹಾಯದಿಂದ ಸಂಸದರಾದರು ಎಂದು ಹೇಳಲಿ. ಅವರು ಸೋತು ಮನೆಯಲ್ಲಿ ಕುಳಿತಿದ್ದಾಗ ನನ್ನ ಹತ್ತಿರ ಸಹಾಯ ಕೇಳಿಕೊಂಡು ಬಂದರು. ದೇವೇಗೌಡರಿಗೆ ಪ್ರಧಾನಮಂತ್ರಿ ಕುರ್ಚಿ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ದೇವೇಗೌಡರು ವಯಸ್ಸಿಗೆ ತಕ್ಕಂತೆ ಮಾತನಾಡಲಿ" ಎಂದರು ಮಂಜು.
ದೇವೇಗೌಡರು ಮಕ್ಕಳ ವ್ಯಾಮೋಹ ಮೊದಲು ಬಿಡಲಿ. ಏಕೆ ಜಿಲ್ಲಾಧಿಕಾರಿ ಬದಲಾವಣೆ ಮಾಡಿದರು ಅನ್ನೋದನ್ನು ಕೆಲವೇ ದಿನದಲ್ಲಿ ಬಹಿರಂಗಪಡಿಸುತ್ತೀನಿ. ನಾನು ಅವರ ಹಂಗಲ್ಲಿ ಇಲ್ಲ, ನನ್ನ ಹಂಗಲ್ಲಿ ಅವರು ಇದ್ದಾರೆ ಎನ್ನುವ ಮೂಲಕ ದೇವೇಗೌಡರ ಆರೋಪಕ್ಕೆ ಎ.ಮಂಜು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ತಮ್ಮ ಮಕ್ಕಳು ಮಾತ್ರ ಮಂತ್ರಿಗಳಾಗಿರಬೇಕು. ಅವರು ಮಾತ್ರ ಗೌಡರು. ಮಿಕ್ಕವರು ಅಲ್ಲವಾ? ಅವರ ಮಕ್ಕಳು, ಮರಿಗಳು ಮಾತ್ರ ಅಧಿಕಾರದಲ್ಲಿದ್ದರೆ ಈ ದೇಶ, ಈ ರಾಜ್ಯ. ಯಾಕೆ ಅವರು ಜಿಲ್ಲಾಧಿಕಾರಿ ಬದಲಾವಣೆ ಬಗ್ಗೆ ಹೇಳಿದರು ಅನ್ನೋದು ಕೆಲವೇ ದಿನಗಳಲ್ಲಿ ಗೊತ್ತಾಗುತ್ತದೆ ಎಂದರು.
ಇಂಥ ಅಧಿಕಾರಿಗಳು ಬೇಕು ಹಾಗೂ ಈ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಎಂದು ಮುಖ್ಯಮಂತ್ರಿಗಳಿಗೆ ದೇವೇಗೌಡರು ಎಷ್ಟು ಬಾರಿ ಪತ್ರ ಬರೆದಿದ್ದಾರೆ ಎಂಬುದನ್ನು ಹೇಳಲಿ ಎಂದು ಸವಾಲು ಹಾಕಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications