ದೇವೇಗೌಡರು ನನ್ನ ಹಂಗಲ್ಲಿ ಇದ್ದಾರೆಂದ ಸಚಿವ ಎ ಮಂಜು
ಹಾಸನ, ಜನವರಿ 25 : "ದೇವೇಗೌಡರಿಗೆ ವಯಸ್ಸಾಗಿದೆ. ಅದಕ್ಕೇ ಏನೇನೋ ಮಾತಾಡ್ತಾರೆ. ನಾನು ಏಳನೇ ಕ್ಲಾಸನ್ನೇ ಏಳು ಸಾರಿ ಫೇಲಾಗಿ ಅವರ ಥರಾ ಮಂತ್ರಿ ಆದವನಲ್ಲ. ನಮ್ಮಪ್ಪ ನನ್ನನ್ನು ಡಬಲ್ ಡಿಗ್ರಿ ಮಾಡಿಸಿದ್ದಾರೆ" ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ವಿರುದ್ಧ ಸಚಿವ ಎ.ಮಂಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ನಾನು ಯಾರದೋ ಕೃಪಾ ಕಟಾಕ್ಷದಿಂದ ಮಂತ್ರಿಯಾಗಿಲ್ಲ. ದೇವೇಗೌಡರು ಯಾರ ಸಹಾಯದಿಂದ ಸಂಸದರಾದರು ಎಂದು ಹೇಳಲಿ. ಅವರು ಸೋತು ಮನೆಯಲ್ಲಿ ಕುಳಿತಿದ್ದಾಗ ನನ್ನ ಹತ್ತಿರ ಸಹಾಯ ಕೇಳಿಕೊಂಡು ಬಂದರು. ದೇವೇಗೌಡರಿಗೆ ಪ್ರಧಾನಮಂತ್ರಿ ಕುರ್ಚಿ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ದೇವೇಗೌಡರು ವಯಸ್ಸಿಗೆ ತಕ್ಕಂತೆ ಮಾತನಾಡಲಿ" ಎಂದರು ಮಂಜು.
ದೇವೇಗೌಡರು ಮಕ್ಕಳ ವ್ಯಾಮೋಹ ಮೊದಲು ಬಿಡಲಿ. ಏಕೆ ಜಿಲ್ಲಾಧಿಕಾರಿ ಬದಲಾವಣೆ ಮಾಡಿದರು ಅನ್ನೋದನ್ನು ಕೆಲವೇ ದಿನದಲ್ಲಿ ಬಹಿರಂಗಪಡಿಸುತ್ತೀನಿ. ನಾನು ಅವರ ಹಂಗಲ್ಲಿ ಇಲ್ಲ, ನನ್ನ ಹಂಗಲ್ಲಿ ಅವರು ಇದ್ದಾರೆ ಎನ್ನುವ ಮೂಲಕ ದೇವೇಗೌಡರ ಆರೋಪಕ್ಕೆ ಎ.ಮಂಜು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ತಮ್ಮ ಮಕ್ಕಳು ಮಾತ್ರ ಮಂತ್ರಿಗಳಾಗಿರಬೇಕು. ಅವರು ಮಾತ್ರ ಗೌಡರು. ಮಿಕ್ಕವರು ಅಲ್ಲವಾ? ಅವರ ಮಕ್ಕಳು, ಮರಿಗಳು ಮಾತ್ರ ಅಧಿಕಾರದಲ್ಲಿದ್ದರೆ ಈ ದೇಶ, ಈ ರಾಜ್ಯ. ಯಾಕೆ ಅವರು ಜಿಲ್ಲಾಧಿಕಾರಿ ಬದಲಾವಣೆ ಬಗ್ಗೆ ಹೇಳಿದರು ಅನ್ನೋದು ಕೆಲವೇ ದಿನಗಳಲ್ಲಿ ಗೊತ್ತಾಗುತ್ತದೆ ಎಂದರು.
ಇಂಥ ಅಧಿಕಾರಿಗಳು ಬೇಕು ಹಾಗೂ ಈ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಎಂದು ಮುಖ್ಯಮಂತ್ರಿಗಳಿಗೆ ದೇವೇಗೌಡರು ಎಷ್ಟು ಬಾರಿ ಪತ್ರ ಬರೆದಿದ್ದಾರೆ ಎಂಬುದನ್ನು ಹೇಳಲಿ ಎಂದು ಸವಾಲು ಹಾಕಿದರು.
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?












Click it and Unblock the Notifications