HD Revanna: ತೆಲಂಗಾಣದ ಖ್ಯಾತ ಜ್ಯೊತಿಷಿ ಮನೆಗೆ ಭೇಟಿ ನೀಡಿದ ಎಚ್.ಡಿ.ರೇವಣ್ಣ ಕುಟುಂಬ
ಹಾಸನ, ಆಗಸ್ಟ್, 02: ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಇಂದು (ಆಗಸ್ಟ್ 02) ಕುಟುಂಬ ಸಮೇತ ತೆಲಂಗಾಣದ ಖ್ಯಾತ ಜ್ಯೊತಿಷಿ ಮನೆಗೆ ಭೇಟಿ ನೀಡಿ ಗಮನ ಸೆಳೆದಿದ್ದಾರೆ.
ಎಚ್.ಡಿ.ರೇವಣ್ಣ ಹಾಗೂ ಕುಟುಂಬದ ಸದಸ್ಯರು ಇಂದು ತೆಲಂಗಾಣದ ಖ್ಯಾತ ಜ್ಯೊತಿಷಿ ವೇಣುಸ್ವಾಮಿ ಅವರನ್ನು ಭೇಟಿ ಆಗು ಆಶೀರ್ವಾದ ಪಡೆದರು. ಇನ್ನು ಇದೇ ವೇಳೆ ರೇವಣ್ಣ ಅವರು ಜ್ಯೊತಿಷಿಗಳ ಸಮ್ಮುಖದಲ್ಲಿ ಪತ್ನಿ ಭವಾನಿ ರೇವಣ್ಣಗೆ ಹೂವಿನ ಹಾರ ಹಾಕಿ ಗಮನ ಸೆಳೆದರು.

ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ, ಪುತ್ರರಾದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವೇಣುಸ್ವಾಮಿ ಅವರ ಆಶೀರ್ವಾದ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಎಚ್.ಸಿ.ಬಾಲಕೃಷ್ಣ ಹೇಳಿದ್ದೇನು?
ಕಾಂಗ್ರೆಸ್ ಪಕ್ಷದಲ್ಲಿ ಮುಖಂಡರ ನಡುವೆ ಅಸಮಾಧಾನ ಆರಂಭವಾಗಿದೆ ಎನ್ನುವುದರ ಬಗ್ಗೆ ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಮಾತನಾಡಿದ್ದು, ಲೋಕಸಭಾ ಚುನಾವಣಾ ಸಂಬಂಧ ದೆಹಲಿಗೆ ಮಂತ್ರಿಗಳು ಹೋಗಿದ್ದಾರೆ. ಚುನಾವಣೆಯ ಜವಾಬ್ದಾರಿ ನೀಡಲು ದೆಹಲಿಗೆ ಕರೆಸಿಕೊಂಡಿದ್ದಾರೆ ಎಂದರು.
ಬಿಜೆಪಿ ಸರ್ಕಾರದಿಂದ ಜನ ತತ್ತರಿಸಿ ಹೋಗಿದ್ದರು
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಿಂದ ಜನ ತತ್ತರಿಸಿ ಹೋಗಿದ್ದರು. ಕಾಂಗ್ರೆಸ್ ಪಕ್ಷ ಸಾಮಾನ್ಯ ಜನರಿಗಾಗಿ ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ. ಗ್ಯಾರಂಟಿಗಳ ಒತ್ತಡ ಜಾಸ್ತಿ ಆಗಿದೆ. ಹಣ ಸೋರಿಕೆ ತಡೆಗಟ್ಟುವುದು, ಸಂಪನ್ಮೂಲ ಕ್ರೋಢೀಕರಣ ಮಾಡುವುದು ಸಿದ್ದರಾಮಯ್ಯ ಅವರಿಗೆ ಗೊತ್ತಿದೆ. 6 ತಿಂಗಳ ನಂತರ ಎಲ್ಲವೂ ಸರಿಹೋಗುತ್ತದೆ ಎಂದು ಹೇಳಿದರು.
ಸಚಿವರು ಶಾಸಕರಿಗೆ ಸ್ಪಂದಿಸುತ್ತಿಲ್ಲ ಎಂಬ ವಿಚಾರವಾಗಿ ಮಾತನಾಡಿದ ಅವರು, ಎಲ್ಲಾ ಪಕ್ಷದಲ್ಲೂ ಇದು ಇರುತ್ತದೆ. ನಮ್ಮ ಸ್ನೇಹಿತರೇ ನಮ್ಮ ಮೇಲೆ ಅಸಮಾಧಾನ ಮಾಡಿಕೊಳ್ಳುತ್ತಾರೆ. ಕಾರ್ಯದೊತ್ತಡ ಹಿನ್ನಲೆಯಲ್ಲಿ ಶಾಸಕರಿಗೆ ಸಚಿವರು ಸ್ಪಂದಿಸಲು ಆಗುವುದಿಲ್ಲ. ಅಸಮಾಧಾನ ಎಲ್ಲರ ಮೇಲೂ ಇರುತ್ತದೆ. ಅದನ್ನು ಬೇರೆ ರೀತಿಯಲ್ಲಿ ಬಿಂಬಿಸುವುದು ಬೇಡ ಎಂದರು.
ಟ್ರಾನ್ಸ್ಫರ್ ವಿಚಾರ, ಸಣ್ಣ ಪುಟ್ಟ ಕೆಲಸಗಳು ಆಗಿಲ್ಲ ಎಂದು ಅಸಮಾಧಾನ ಇರುತ್ತದೆ. ಇದನ್ನೆಲ್ಲಾ ಸರಿಪಡಿಸುವ ಕೆಲಸ ಸಿಎಂ ಹಾಗೂ ಡಿಸಿಎಂ ಮಾಡುತ್ತಾರೆ. ಪತ್ರ ಬರೆದಿರುವುದು ಬೋಗಸ್, ಯಾರು ಸಹ ಪತ್ರಗಳನ್ನು ಬರೆದಿಲ್ಲ. ಪತ್ರವನ್ನು ಕಟ್ ಅಂಡ್ ಪೇಸ್ಟ್ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications